Advertisement

ನಾರಾಯಣ ಯಾಜಿ

ವಸಂತಕುಮಾರ್ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಸ್ಲಾ..ಟ್!”

ಹನ್ನೆರಡರ ಸುಮಾರಿಗೆ ಎಲ್ಲರೂ ಒಟ್ಟಾದರು. ಸೀನಪ್ಪ ಎಲ್ಲ ರೆಡಿ ಮಾಡಿಟ್ಟಿದ್ದ; ಇನ್ನೊಂದು ಅರ್ಧ ಗಂಟೆ ಒಳಗೆ ಎಲ್ಲಾ ಮುಗಿಸಿ ಬಿಡುವ ಸೂಚನೆ ಇತ್ತು. ಆಗ ಶುರುವಾಯಿತು ಏನೋ ಗಲಿಬಿಲಿ. ಸೀನಪ್ಪ ಬಂದ “ಸಾರ್ ನಾನು ಹೊರಗಿರುತ್ತೇನೆ ನಾನಾಗಲೇ ತೋರಿಸಿದ್ದೆನಲ್ಲ ಕೌಂಟರ್ ಎರಡರಲ್ಲಿ ದೇವರಾಜ ಅನ್ನುವವರನ್ನ, ಅವರೆಲ್ಲ ಮಾಡಿಕೊಡುತ್ತಾರೆ” ಎಂದ. ಬಾಯಿಗೆ ಕೈ ಅಡ್ಡ ಇಟ್ಟು “ಲೋಕಾಯುಕ್ತರು ಬಂದಿದ್ದಾರೆ ಹಾಗಾಗಿ ಸ್ವಲ್ಪ ತಡ ಆಗಬಹುದು, ಒಂದು ಮೂತ್ತರಿಂದ ಎರಡೂ ಮೂವತ್ತು ಊಟದ ಸಮಯ. ಅದು ಕೂಡ ಸ್ವಲ್ಪ ಹಿಂದೆ ಮುಂದೆ ಆಗಬಹುದು.”
ವಸಂತಕುಮಾರ್ ಕಲ್ಯಾಣಿ ಬರೆದ ಕತೆ “ಸ್ಲಾ..ಟ್!” ನಿಮ್ಮ ಈ ಭಾನುವಾರದ ಓದಿಗೆ

Read More

ನಡುವೆ ಹತ್ತಿದವರು ನಡುವೆಯೇ ಇಳಿದುಹೋದರು: “ದಡ ಸೇರದ ದೋಣಿ” ಸರಣಿಯಲ್ಲಿ ವಸಂತಕುಮಾರ್‌ ಕಲ್ಯಾಣಿ ಬರಹ

ಹೀಗೆ ಕಾಲ ಓಡಿತು. ಪತ್ರಗಳು ನಿಂತು ಹೋದವು. ಫೋನ್ ನಿಂತುಹೋಯಿತು. ಅವರವರ ಕೆಲಸದಲ್ಲಿ ಅವರವರು ಬ್ಯುಸಿ ಆದರು. ಓದು, ಕೆಲಸ ಹುಡುಕುವುದು, ಹಣಕಾಸಿನ ತಾಪತ್ರಯದಲ್ಲಿ ನಾವುಗಳು ಊರಿಗೆ ಹೋಗಿ ಬರುವುದು ಕಡಿಮೆಯಾಯಿತು. ಊರಿನಲ್ಲಿ ಮೊದಲು ದೊಡ್ಡ ದೊಡ್ಡಮ್ಮ, ನಂತರ ಹಿರಿಯಕ್ಕ ತೀರಿಕೊಂಡ ಸುದ್ದಿ ಹೇಗೋ ನಮ್ಮನ್ನು ತಲುಪಿತು. ಅಲ್ಲಿಗೂ ಇವಳು ಹೆಚ್ಚು ಹೋಗಿ ಬಂದು ಮಾಡುತ್ತಿರಲಿಲ್ಲ, ತನ್ನ ಗಂಡನ ಮುಂದೆ ತಾಯಿ ಮನೆಯ ಹೀನಾಯ ಪರಿಸ್ಥಿತಿ ಕಾಣಬಾರದೆಂದು ಭಾವಿಸಿ…. ಅವಳ ತಮ್ಮ ಹೆಂಡತಿಯೊಂದಿಗೆ ಕಿರಿಕಿರಿ ಮಾಡಿಕೊಂಡ. ಕುಡಿತ ಹೆಚ್ಚಾಯಿತು. ಬದುಕು ಮೂರಾ ಬಟ್ಟೆಯಾಯಿತು.
“ದಡ ಸೇರದ ದೋಣಿ” ಸರಣಿಯಲ್ಲಿ ವಸಂತಕುಮಾರ್‌ ಕಲ್ಯಾಣಿ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಒಮ್ಮೆ ಹೀಗೆ ಬಿಡುವಿದ್ದಾಗ, ಐತಾಳರು ನನ್ನ ಹಿನ್ನೆಲೆ ಬಗ್ಗೆ ವಿಚಾರಿಸಿದಾಗ ಸುಳ್ಳು ಹೇಳಲು ಮನಸ್ಸಾಗದೆ ಎಲ್ಲ ಹೇಳಿಬಿಟ್ಟೆ. ಮನಸ್ಸು ಹಗುರಾಯಿತು. ಈವರೆಗೂ ಸಂಪೂರ್ಣ ಸತ್ಯ ಯಾರಿಗೂ ಹೇಳಿರಲಿಲ್ಲ. ಐತಾಳರು ಸ್ವಲ್ಪ ಹೊತ್ತು ನನ್ನ ಮುಖವನ್ನೇ ನೋಡಿದರು. ಕೆಲಸದ ವಿಷಯದಲ್ಲಿ ಅವರು ತುಂಬಾ ಸ್ಟ್ರಿಕ್ಟ್; ಆದರೆ ಹೆಂಗರಳು. ಕೆಲಸಗಾರರನ್ನು ಮಕ್ಕಳ ಹಾಗೆ ನೋಡಿಕೊಳ್ಳುವ ಸ್ವಭಾವ. “ಆದ್ರೂ ನೀ ಊರು ಬಿಟ್ಟು ಬರಬಾರದಿತ್ತು ಮಾರಾಯ, ನೀ ಎಣಿಸಿದ ಹಾಗೆ ಅಲ್ಲೇನು ಆಗಿರಲಿಕ್ಕಿಲ್ಲ. ಈ ಕಾಲದ ಜನ ಕಥೆ ಸಿನಿಮಾ ಧಾರಾವಾಹಿ ನೋಡಿ ಎಂತೆಲ್ಲಾ ಗ್ರಹಿಸಿ ಹೀಗೆ ಮಾಡಿಬಿಡೋದು ಹೌದಲ್ಲವನ!”
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಅನಿಕೇತನ” ನಿಮ್ಮ ಓದಿಗೆ

Read More

ಶೂನ್ಯ ಟಿಕೆಟ್’ನ ಒಂದು ಪ್ರಸಂಗ: ವಸಂತಕುಮಾರ್‌ ಕಲ್ಯಾಣಿ ಬರಹ

ಕಂಡಕ್ಟರ್ ಒಂದು ನಿರ್ಧಾರಕ್ಕೆ ಬಂದ. ಪೊಲೀಸರು ಬರಲಿ ಅವರೇ ನಿರ್ಧರಿಸಲಿ ಎಂದು ಬಸ್ ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ. ಆದರೂ ಬಸ್ ನಿಲ್ಲಲಿಲ್ಲ. ಪೋಲೀಸರ ಪ್ರವೇಶ ಮಾತಿನಲ್ಲಿ ಆದದ್ದಕ್ಕೆ, ಈ ಮೂವರು “ಕರೆಸಯ್ಯ ನಾವು ನೋಡದೆ ಇರೋ ಪೋಲಿಸ್ರಾ… ಹೆದರಿಸ್ತೀಯಾ? ಕರೆಸೆ ಬಿಡು” ಎಂದು ದುಂಬಾಲು ಬಿದ್ದರು. (ಹಾಗೆ ನಟಿಸಿದರು) ಒಂದು ಸ್ಟಾಪ್ ಮುಂದೆ ಬಂದ ಬಸ್ ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ಐದು ನಿಮಿಷದಿಂದ ಯಾರಿಗೋ ಫೋನ್ ಮಾಡುತ್ತಾನೆ ಇದ್ದ ಕಂಡಕ್ಟರ್ “ಪೊಲೀಸರು ಬರ್ಲಿ; ಗೊತ್ತಾಗುತ್ತೆ” ಎನ್ನುತ್ತಾ. ಬಸ್ ಅನಿವಾರ್ಯವಾಗಿ ನಿಂತಿತು.
ವಸಂತಕುಮಾರ್ ಕಲ್ಯಾಣಿ ಬರೆದ ಶೂನ್ಯ ಟಿಕೇಟ್‌ ಒಂದರ ಪ್ರಸಂಗ ನಿಮ್ಮ ಓದಿಗೆ

Read More

ಅನಾಯಾಸೇನ ಮರಣಂ……: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಹೊರಗೆ ಬಂದು, ರಿಸೆಪ್ಷನಿಸ್ಟ್ ಲೆಕ್ಕ ಹಾಕಿ, “ಇನ್ನು ಎಂಟುನೂರು ಕಟ್ಟಿ ಸಾಕು” ಎಂದು ಔದಾರ್ಯ ತೋರಿ, ಅದರಂತೆ ಮಾಡಿ ಹೊರ ಬಂದಾಗ ನನ್ನ ಹೆಂಡತಿ ತುಂಬಾ ಖುಷಿಯಲ್ಲಿದ್ದಳು. “ಸದ್ಯ ದೇವರು ಕಾಪಾಡಿದ, ನೀವು ಸುಮ್ಮನೆ ಟೆನ್ಶನ್ ಮಾಡಿಕೊಳ್ಳುತ್ತೀರಾ. ಡಾಕ್ಟರ್ ತುಂಬಾ ಒಳ್ಳೆಯವರು, ಬೇರೆಯವರಿಗೂ ರೆಕಮೆಂಡ್ ಮಾಡಬಹುದು. ಇನ್ನು ನೀವು ಸುಮ್ಮನೆ ತಲೆ ಕೆಡಿಸಿಕೊಳ್ಳದೆ ಆರಾಮಾಗಿರಿ.” ಹೀಗೆ ಸತತವಾಗಿ ಹೇಳಿ, ನಾನು ಎಲ್ಲದಕ್ಕೂ ತಲೆಯಾಡಿಸಿ “ಆರು ಸಾವಿರ ಅಂದಿದ್ದರೆ ಸುಮ್ಮನೆ ಕೊಡುತ್ತಿದ್ದೆವು, ಇನ್ನೂರು ಉಳಿದಿದೆಯಲ್ಲ ಅದರಲ್ಲಿ ಸ್ವೀಟ್ ತಗೊಂಡು ಹೋಗೋಣ” ಎಂದಾಗ ಅದಕ್ಕೂ ತಲೆಯಾಡಿಸಿದೆ.
ವಸಂತಕುಮಾರ್‌ ಕಲ್ಯಾಣಿ ಪ್ರಬಂಧ “ಅನಾಯಾಸೇನ ಮರಣಂ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ