Advertisement

ನಾರಾಯಣ ಯಾಜಿ

ಎಐ ಲೋಕದ ಅಲೆಗಳಲ್ಲಿ ಆಸ್ಟ್ರೇಲಿಯಾ: ವಿನತೆ ಶರ್ಮಾ ಅಂಕಣ

ನನ್ನ ಸಮಯವನ್ನು ಜಾಣ್ಮೆಯಿಂದ ಬಳಸುವುದು ನನಗೆ ಅಗತ್ಯವಾಗಿತ್ತು. ಅದಕ್ಕೆ ವಿರುದ್ಧವಾಗಿ ಎಐ ಬಳಕೆಗೇ ಅಧಿಕ ಸಮಯ ಹಿಡಿಸಿದ್ದು ನನಗೆ ಒಪ್ಪಿಗೆಯಾಗಲಿಲ್ಲ ಇರಿಸುಮುರಿಸಾಗಿತ್ತು.. ಆ ಸಮಯದಲ್ಲಿ ಯಾವುದೇ ಸಾಧನಗಳನ್ನು ಉಪಯೋಗಿಸದೆ ನಾನೇ ಪದ-ಕಡಿತ ಮಾಡಬಹುದಿತ್ತು ಎಂದೆನಿಸಿತು. ಬಹುಶಃ ಕೃತಕ ಬುದ್ಧಿಮತ್ತೆ ಸಾಧನಗಳನ್ನು ಸಮರ್ಪಕವಾಗಿ, ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೇಗೆ ಎನ್ನುವುದರ ಬಗ್ಗೆ ನಾನು ಕಲಿಯಬೇಕಿದೆ. ಮುಂಬರುವ ನಿರೀಕ್ಷೆಗಳಿಗೆ, ಸನ್ನಿವೇಶಗಳಿಗೆ ತಯಾರಾಗಬೇಕಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಚಳಿಚಳಿ ಎನ್ನದಿರಿ!: ವಿನತೆ ಶರ್ಮಾ ಅಂಕಣ

ಮರದಿಂದ ಮನೆ ಕಟ್ಟುವುದು ಅಂದರೆ ಅದಕ್ಕೆ ಅದೆಷ್ಟು ಮರಗಳ ಆಹುತಿಯಾಗುತ್ತದೆ ಎಂದೆನಿಸಬಹುದು ನಿಮಗೆ. ನಿಜ. ವಸಾಹತುಶಾಹಿ ಬ್ರಿಟಿಷರ ಸಂಸ್ಕೃತಿಯಿಂದ ಬಂದ ಮನೆ ಕಟ್ಟುವ ಪರಂಪರೆಗೆ ಮತ್ತು ಕೈಗಾರೀಕರಣಕ್ಕೆ ಮೊದಮೊದಲು ಸಾವಿರಾರು ಎಕರೆ ಪ್ರದೇಶಗಳ ಕಾಡುಗಳು ಆಹುತಿಯಾದವು. ಇದನ್ನು ಲಾಗಿಂಗ್ ಅನ್ನುತ್ತಾರೆ. ಎರಡು ಶತಮಾನಗಳ ಕಾಲ ಆ ರೀತಿ ಟ್ರೀ ಲಾಗಿಂಗ್ ನಡೆಯಿತು. ಖಂಡ-ದೇಶದ ಕಾಡುಗಳು, ವನ್ಯಜೀವಿಗಳು ವಿನಾಶದ ಅಂಚಿಗೆ ಬಂದಾಗ ಸಮಾಜವು, ಸರ್ಕಾರಗಳು ಎಚ್ಚೆತ್ತುಕೊಂಡು ಲಾಗಿಂಗ್ ನಿಲ್ಲಿಸಿ, recycling ಪದ್ಧತಿಯನ್ನು ಆಚರಣೆಗೆ ತಂದರು
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಆಸ್ಟ್ರೇಲಿಯನ್ ಬಹುತ್ವಗಳ ಆತಂಕ ಸಮಯ: ಡಾ. ವಿನತೆ ಶರ್ಮ ಅಂಕಣ

ಅಂದರೆ ಆಸ್ಟ್ರೇಲಿಯಾದಲ್ಲಿ ಎಲ್ಲರೂ ಸಲ್ಲುತ್ತಾರೆ ಎಂದಾಯಿತು. ಯಾವುದೇ ಭಾಷೆ ಮಾತನಾಡುತ್ತಿರಲಿ, ಯಾವುದೇ ಸಂಸ್ಕೃತಿಯನ್ನು ಆಚರಿಸುತ್ತಿರಲಿ, ಯಾವುದೇ ಧರ್ಮವನ್ನು ಪಾಲಿಸುತ್ತಿರಲಿ, ಎಲ್ಲಾರೂ ಇಲ್ಲಿ ಸಲ್ಲುತ್ತಾರೆ. ಅವರ ಆಹಾರ, ಉಡುಗೆತೊಡುಗೆಗಳ ವೈವಿಧ್ಯತೆ, ಇಂಗ್ಲಿಷ್ ಭಾಷೆಯ ಉಚ್ಚಾರಣೆ ಎಲ್ಲವೂ ಸಹ್ಯ, ಸಲ್ಲುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಆಸ್ಟ್ರೇಲಿಯಾದಲ್ಲಿ ಪರಿಸರ ಹೋರಾಟ ಮತ್ತೂ…: ಡಾ. ವಿನತೆ ಶರ್ಮ ಅಂಕಣ

ಅವರ ಈ ಎಲ್ಲಾ ನಡೆಗಳಿಂದ ನಾಶವಾಗಿದ್ದು ಆಸ್ಟ್ರೇಲಿಯಾದ ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳ ಜನಪಂಗಡಗಳಲ್ಲಿ ಇದ್ದ ಬಹುಭಾಷೆಗಳು, ಬಹುಸಂಸ್ಕೃತಿಗಳು ಮತ್ತು ಬಹುತ್ವವನ್ನು ಅಪ್ಪಿಕೊಂಡಿದ್ದ ನೆಲ-ನಾಡುಗಳ ಸಂಬಂಧಗಳು, ಅಸ್ಮಿತೆ, ಪ್ರಾಪಂಚಿಕ ದೃಷ್ಟಿಕೋನಗಳು. ಅದೃಷ್ಟಕ್ಕೆ, ಅವು ಸಂಪೂರ್ಣವಾಗಿ ನಿರ್ನಾಮವಾಗದೆ, ನಿಧಾನವಾಗಿ ಮೂಲವಾಸಿಗಳು ಸುಧಾರಿಸಿಕೊಂಡರು. ನ್ಯಾಯಕ್ಕಾಗಿ, ತಮ್ಮ ನೆಲಕ್ಕಾಗಿ, ಅಸ್ತಿತ್ವಕ್ಕೆ, ಅಸ್ಮಿತೆಗೆ ಹೋರಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ತಂತ್ರಜ್ಞಾನದ ಬಿಗಿಮುಷ್ಟಿಯಲ್ಲಿ ಕಲಿಕೆ: ಡಾ. ವಿನತೆ ಶರ್ಮ ಅಂಕಣ

ಆಧುನಿಕತೆಯನ್ನು ಹಿಗ್ಗಿಸುತ್ತಾ ನಾವೆಷ್ಟು ಮುನ್ನಡೆಯುತ್ತಿದ್ದೇವೊ ಅಷ್ಟೆ ಪ್ರಮಾಣದಲ್ಲಿ ನಮ್ಮ ಅವಲಂಬನೆಗಳೂ ಹೆಚ್ಚುತ್ತಿವೆ. ಕಾರ್ಪೊರೇಟ್, ಐಟಿ ವಲಯದಲ್ಲಿ ಕೆಲಸ ಮಾಡುವವರು ದಿನವೂ ಕುಡಿಯುವ ಕಾಫಿ ಅವಲಂಬನೆ, ನರ್ಸರಿ ಮಕ್ಕಳ ಕೈಯಲ್ಲಿ ಇರುವ ಐಪ್ಯಾಡ್ ಅವಲಂಬನೆ, ತನ್ನ ಇಡೀ ಯೂನಿವರ್ಸಿಟಿ ಡಿಗ್ರಿ ಕಲಿಕೆಯನ್ನು ಕೈಯಲ್ಲಿರುವ ಫೋನ್ ಮೂಲಕವೇ ಮಾಡಿ ಮುಗಿಸುವ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ, ಚಲಿಸುತ್ತಿರುವ ಬಸ್ಸಿನಲ್ಲಿ ಕೂತಿರುವ ಪ್ರಯಾಣಿಕನೊಬ್ಬ ಕೂತ ಜಾಗದಲ್ಲೆ ಲ್ಯಾಪ್-ಟಾಪ್ ಮತ್ತು ಹೆಡ್‌ಫೋನ್ಸ್ ಬಳಸುತ್ತಾ ಮೀಟಿಂಗ್‌ನಲ್ಲಿ ಭಾಗವಹಿಸುವುದು ಅದರ ಜೊತೆಗೆ ಸ್ಯಾಂಡ್ವಿಚ್ ತಿಂದು ಮುಂದಿನ ಮೀಟಿಂಗ್‌ಗೆ ತಯಾರಾಗುವುದು ಆಧುನಿಕತೆಯ ಕೆಲ ತಲ್ಲಣಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ