Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ಬಿಸಿಲ ಧಗೆ, ಚಳಿಯ ಹೊರೆಗಳ ನಡುವೆ ಅರಳುವ ಡಾಫೋಡಿಲ್ ಎಲ್ಲಿದೆ..

ಆಸ್ಟ್ರೇಲಿಯದ  ಹೊಸ ಪ್ರಧಾನಿಗಳು ಚುನಾಯಿತರಾದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ನಾಲ್ಕು ವಾರಗಳಲ್ಲಿ ಊರೂರು, ಅಂದರೆ ವಿದೇಶಗಳನ್ನು, ಸುತ್ತಿದ್ದಕ್ಕೆ ದೇಶದ ಜನರ ಮತ್ತು ವಿರೋಧಪಕ್ಷದ ಟೀಕೆಗೆ ಗುರಿಯಾದರು. ಆದರೂ ಕೂಡ ತಮ್ಮ ಪರದೇಶ ಸುತ್ತಾಟವನ್ನು ಸಮರ್ಥಿಸಿಕೊಂಡು ‘ನೆರೆಹೊರೆಯವರೊಂದಿಗೆ ಆಸ್ಟ್ರೇಲಿಯದ ರಾಜಕೀಯ ಸಂಬಂಧ ಕುಂಟುತ್ತಿತ್ತು, ನಾವು ಆ ದೇಶದ ನಾಯಕರ ವಿಶ್ವಾಸವನ್ನು ಕಳೆದುಕೊಂಡಿದ್ದೆವು. ಹಾಗಾಗಿ ಅವರೊಂದಿಗಿನ ಸಂಬಂಧವನ್ನು ಕುದುರಿಸಿಕೊಳ್ಳುವುದೂ ಮುಖ್ಯವಾಗಿತ್ತು.
ಡಾ. ವಿನತೆ ಶರ್ಮಾ ಅಂಕಣ

Read More

ಗೆಟ್ ಅಪ್, ಸ್ಟಾಂಡ್ ಅಪ್, ಶೋ ಅಪ್….

ಆಸ್ಟ್ರೇಲಿಯಾ ದೇಶದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೇಟ್ ದ್ವೀಪವಾಸಿ ಜನಪಂಗಡಗಳು ಎಷ್ಟೋ ಸಾವಿರ ವರ್ಷಗಳಿಂದ ಈ ನಾಡಿನಲ್ಲಿ ಬದುಕಿ ಬಾಳಿ, ನೆಲ-ಜಲ-ಪ್ರಕೃತಿಯನ್ನು ಕಾಪಾಡಿಕೊಂಡು ಬಂದಿದ್ದಾರೆ. ಸುಮಾರು ಅರವತ್ತು ಸಾವಿರ ವರ್ಷಗಳಿಗೂ ಹೆಚ್ಚಿನ ಕಾಲದಿಂದ ಈ ಖಂಡದಲ್ಲಿ ಅಬೊರಿಜಿನಲ್ ಜನರ ಇರುವಿಕೆಯ ಬಗ್ಗೆ ಅಧಿಕೃತ ಪುರಾವೆಗಳಿವೆ. ಬ್ರಿಟಿಷರ ವಸಾಹತು ಸ್ಥಾಪನೆಯಿಂದ ಆರಂಭವಾಗಿ ಇಲ್ಲಿನ ಮೂಲನಿವಾಸಿಗಳ ನಿರ್ಮೂಲನೆಗೆ ನಡೆದ ಪ್ರಯತ್ನಗಳು, ಅವರ ಅತ್ಯಂತ ಕ್ರೂರ ಆಡಳಿತದೊಡನೆ ಮುಂದುವರೆದು ಅನ್ಯಾಯಗಳ ನಡುವೆಯೂ ಬದುಕುಳಿದ ಅಬೊರಿಜಿನಲ್ ಜನರ ಜೀವನಗಾಥೆ ಇನ್ನೂ ಜ್ವಲಂತವಾಗಿದೆ.
ಡಾ. ವಿನತೆ ಶರ್ಮಾ ಅಂಕಣ

Read More

ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

 ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ದೂರದೂರಿನ ನೆಂಟತನವೂ, ನೆರೆಹೊರೆಯವರ ಸ್ನೇಹಹಸ್ತವೂ

ಆಸ್ಟ್ರೇಲಿಯ ವಸಾಹತುಶಾಹಿ ಆಡಳಿತದಿಂದ ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬದಲಾದರೂ ದೇಶವನ್ನು ಆಳುವುದು ಬಿಳಿಯ ರಾಜಕಾರಣಿಗಳೆ ಎನ್ನುವುದು ಸರ್ವೇಸಾಮಾನ್ಯ ಸತ್ಯ. ಇಂಗ್ಲಿಷ್ ಭಾಷೆಯ ಜೊತೆ ಆಮದಾಗಿ ಬಂದಿದ್ದು ವ್ಯವಸ್ಥೆ. ಹೀಗಾಗಿ ಆಸ್ಟ್ರೇಲಿಯಾವು ಇಂಗ್ಲಿಷ್ ಭಾಷೆಯ ಪಾಶ್ಚಾತ್ಯ ದೇಶ. ಈ ಪಟ್ಟದೊಡನೆ ಬಳುವಳಿಯಾಗಿ ಬಂದಿರುವುದು, ನಂಬಿರುವುದು ದೂರದೂರಿನ ನೆಂಟತನ. ಮಾತೃದೇಶ ಬ್ರಿಟನ್, ಅಣ್ಣನಾಗಿ ಅಮೆರಿಕ, ಕಿರಿತಂಗಿಯಾಗಿ ನ್ಯೂ ಝಿಲಂಡ್, ಬಂಧುಬಾಂಧವರು ಯುರೋಪಿಯನ್ ದೇಶದವರು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

‘ಊಲುರು ಮಾತು’ ಎಂಬ ಹೊಸ ಭಾಷ್ಯ

ದೇಶೀಯ ಮಟ್ಟದಲ್ಲಿ ಆಡಳಿತ ನಡೆಸುವ ಪಾರ್ಲಿಮೆಂಟಿಗೆ ಅಬೊರಿಜಿನಲ್ ಜನರ ಸಮಿತಿಯನ್ನು ನೇಮಿಸಿ ಅವರ ದನಿಗೆ ಪುನಃಶ್ಚೇತನ ಕೊಡುವ ಭರವಸೆಯನ್ನು ಆಸ್ಟ್ರೇಲಿಯಾದ ಹೊಸ ಸರ್ಕಾರ ನೀಡಿದೆ.  ಅಷ್ಟೇ ಅಲ್ಲ, ದೇಶದ ಸಂವಿಧಾನದಲ್ಲಿ ಅವರ ದನಿಯನ್ನು ಸೇರ್ಪಡಿಸುವ ಮಾತನ್ನು ಕೊಟ್ಟಾಗಿದೆ. ಹೊಸ ಪ್ರಧಾನಮಂತ್ರಿಗಳ ಮಾತಿನಿಂದ ಅಬೊರಿಜಿನಲ್ ಜನಸಮುದಾಯಗಳ ನಾಯಕರಲ್ಲಿ, ಹಿರಿಯರಲ್ಲಿ ಸಂಚಲನೆ ಮೂಡಿದೆ. ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮಾ ಅವರು ಆಸ್ಟ್ರೇಲಿಯಾದ ವರ್ತಮಾನಗಳನ್ನು ಬರೆದಿದ್ದಾರೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ