Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ

ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಚುನಾವಣಾ ಕಣಕ್ಕೆ ಪ್ರವೇಶ: ಡಾ. ವಿನತೆ ಶರ್ಮ ಅಂಕಣ

ಈ ಬಾರಿ ಈ ಡಟ್ಟನ್ ಮಹಾಶಯ ವಲಸಿಗರ ಮನ ಓಲೈಸುವ ಪ್ರಯತ್ನಕ್ಕೆ ಇಳಿದಿದ್ದಾರೆ. ಪ್ರತಿದಿನವೂ ಆಸ್ಟ್ರೇಲಿಯನ್ ನಗರಗಳ ಹೊರವಲಯಗಳಲ್ಲಿ ವಾಸಿಸುತ್ತಿರುವ ವಲಸಿಗ ಸಮುದಾಯಗಳಿಗೆ ಭೇಟಿಕೊಟ್ಟು, ಭರವಸೆಗಳನ್ನು ಕೊಡುತ್ತಿದ್ದಾರೆ. ತಾವು ವಲಸಿಗರ ‘ಆಸ್ಟ್ರೇಲಿಯನ್ ಕನಸು’ ಎಂಬುದಕ್ಕೆ ಬೆಂಬಲ ಕೊಟ್ಟು, ವಲಸಿಗರ ಜೀವನವನ್ನು ಹಸನು ಮಾಡುವ ಮಾತನ್ನು ಆಡುತ್ತಿದ್ದಾರೆ. ವಲಸಿಗರೂ ಅಷ್ಟೇ, ಬಹಳ ಆಸಕ್ತಿಯಿಂದ ಚುನಾವಣಾ ವಿಷಯಗಳಲ್ಲಿ ಭಾಗವಹಿಸುತ್ತಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಟ ಕಟ್ಟಲು ಕಣದ ಸಿದ್ಧತೆ: ಡಾ. ವಿನತೆ ಶರ್ಮ ಅಂಕಣ

ಪಕ್ಕದ ಮನೆಯ ಅಂಗಳದಲ್ಲಿರುವ ನಮ್ಮನೆ ಬೇಲಿಗೆ ಆತುಕೊಂಡಿರುವ ಮುರಯ (Murraya) ಮರ ಮೈತುಂಬಾ ಬಿಳಿ ಹೂ ಧರಿಸಿ ನಗುತ್ತಿದೆ. ಶುಭ್ರ ಬಿಳಿ ಹೂ ರಾಶಿ, ಕಡು ಹಸಿರು ಎಲೆಗಳು ಒಂದಕ್ಕೊಂದು ಅಪ್ಪಿಕೊಂಡು ಆ ಬಿಳಿಹಸಿರು ಚಾದರವನ್ನು ಅಪ್ಪಿಕೊಳ್ಳುವ ಆಸೆಯಾಗುತ್ತದೆ. ಹೂಗಳ ಘಮಘಮದಿಂದ ಮೂಗು ಅರಳುತ್ತದೆ. ಹೂಗೊಂಚಲಿನಲ್ಲಿ ಮೊಗ್ಗುಗಳೆ ಹೆಚ್ಚಿರುವುದಕ್ಕೊ ಏನೋ ಅವಕ್ಕೆ ಇನ್ನೂ ಜೇನ್ನೊಣಗಳ ಆಗಮನವಾಗಿಲ್ಲ. ಜೇನ್ನೊಣಗಳ ದಂಡು ಬಂದಾಗ ಅವುಗಳ ಝೇಂಕಾರದ ನಿನಾದ, ಮುರಯ ಹೂ ಗೊಂಚಲುಗಳ ಅಂದ, ತಂಪೇರಿದ ಸಂಜೆ ಮತ್ತು ತರಿಸುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಬಂದೇ ಬಿಟ್ಟ ಆಲ್ಫ್ರೆಡ್: ಡಾ. ವಿನತೆ ಶರ್ಮ ಅಂಕಣ

ನಾಲ್ಕು ದಿನಗಳ ಹಿಂದೆ ಅಂದರೆ ಮಂಗಳವಾರದಿಂದ ನಮ್ಮ ಸ್ಥಳೀಯ ನಗರಪಾಲಿಕೆಗಳು ನೂರಾರು ನಿರ್ಧಾರಗಳನ್ನು ತೆಗೆದುಕೊಂಡಿವೆ. ‘ಸೇಫ್ಟಿ ಫಸ್ಟ್’ ಎನ್ನುವ ಮಂತ್ರವನ್ನು ಜಪಿಸಿ ನಮ್ಮ ಯೂನಿವರ್ಸಿಟಿಗಳು, ಶಾಲೆಗಳು, ಅಂಗಡಿ ವಹಿವಾಟುಗಳು, ಕಚೇರಿಗಳು ಬಾಗಿಲು ಮುಚ್ಚಿದವು. ಅದಕ್ಕೆ ಮುನ್ನ ಮಂಗಳವಾರದಿಂದ ಎಲ್ಲಾ ಅಂಗಡಿ, ಸೂಪರ್ ಮಾರ್ಕೆಟ್‌ಗಳಲ್ಲಿ ಜನರ ನೂಕುನುಗ್ಗಲು. ಆಹಾರ ಪದಾರ್ಥ, ಕುಡಿಯುವ ನೀರು, ಟಾಯ್ಲೆಟ್ ಪೇಪರ್ ರೋಲ್, ಇತ್ಯಾದಿಗಳು ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಮಾಯ! ಬ್ರೆಡ್, ಹಾಲು, ಮೊಟ್ಟೆಗಳು ಸಿಕ್ಕುವುದೇ ಇಲ್ಲ ಅನ್ನೋ ಪರಿಸ್ಥಿತಿಯಲ್ಲಿ ನಾವು ಗುರುವಾರ ಅಲ್ಲಿಇಲ್ಲಿ ಹುಡುಕಾಡಿದ್ದಾಯ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ