Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಆಸ್ಟ್ರೇಲಿಯಾದ ಐತಿಹಾಸಿಕ ಮೈಲಿಗಲ್ಲು: ಡಾ. ವಿನತೆ ಶರ್ಮಾ ಅಂಕಣ

ಒಂದೆಡೆಯಿಂದ ಇನ್ನೊಂದು ಎಡೆಗೆ ಹೋಗುವ ದಾರಿಯ ಬಗ್ಗೆ ಹೇಳಲು ಕರಾರುವಾಕ್ಕಾದ ಸೂಚನೆಗಳನ್ನು ಹಾಡುಗಳಲ್ಲಿ ಅಡಕಿಸಿದ್ದಾರೆ. ಎಲ್ಲಿ ಕುಡಿಯಲು ನೀರು ಸಿಗುತ್ತದೆ, ತಿನ್ನಲು ಗೆಡ್ಡೆಗೆಣಸು, ತಂಗಲು ಸ್ಥಳ ಸಿಗುತ್ತದೆ, ಅನ್ನುವುದೂ ಈ ಹಾಡುಗಳಲ್ಲಿ ತಿಳಿಯುತ್ತದೆ. ಆಕಾಶದಲ್ಲಿ ಬೆಳಗಿನ ಸೂರ್ಯರಶ್ಮಿ ಇನ್ನೂ ಕೆಳಗಿರುವಾಗ ಈ ನೀರಿನ ತೊರೆಯಿಂದ ನಡೆಯುತ್ತಾ, ಓಡುತ್ತಾ ಹೊರಟು ಆ ದೊಡ್ಡ ಗಮ್ ಮರದ ಉತ್ತರಕ್ಕಿರುವ ಕುರುಚಲು ಪೊದೆಕಾಡು ದಾಟಿ ಬಿಸಿಲು ನಡುನೆತ್ತಿಯ ಮೇಲಿದ್ದಾಗ ಆ ಕಿರುದಿಣ್ಣೆ ಸಿಗುತ್ತದೆ. ಅದೇ ದಾರಿಯಲ್ಲಿ ಸೂರ್ಯನ ಇಳಿಬಿಸಿಲಿನ ಜಾಡನ್ನು ಹಿಂಬಾಲಿಸುತ್ತಾ ಹೋದರೆ ಬಂಡೆರಾಶಿ ಕಾಣುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ

ವಿಮಾನ ಡಿಕ್ಕಿ ಹೊಡೆದ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿದ್ದ ಕೆಲವರು ಏನಾಗುತ್ತಿದೆ ಎಂದು ಕೇಳುತ್ತಾ ಆ ಪ್ರಶ್ನೆಗೊಂದು ಕೊನೆ ಚುಕ್ಕೆ ಇಡದೆಯೆ ಹೋಗಿದ್ದಾರೆ. ರೆಸ್ಟ್ ಇನ್ ಪೀಸ್. ಆತ್ಮಕ್ಕೆ ಶಾಂತಿ ಸಿಗಲಿ. ಕಣ್ಣೀರು, ದಿಗ್ಭ್ರಮೆ, ಪುಂಖಾನುಪುಂಖ ಪ್ರಶ್ನೆಗಳು, ಎಲ್ಲರೂ ಹುಡುಕುತ್ತಿರುವ ಉತ್ತರಗಳ ಸಾಗರ ಅಪ್ಪಳಿಸಿದೆ. ಅದ್ಯಾವುದೊ ಕರುಣಾಳು ಬೆಳಕು ಒಬ್ಬನೇ ಒಬ್ಬ ಪ್ರಯಾಣಿಕನನ್ನು ಕೈಹಿಡಿದು ನಡೆಸಿ ಕಾಪಾಡಿದೆ. ಅವನ ಕಥೆ ಅಪನಂಬಿಕೆಗಳ ಲೋಕದಲ್ಲಿ ಉಳಿದ ಒಂದೇ ಒಂದು ಹುಲ್ಲುಕಡ್ಡಿ ಸತ್ಯವಾಗಿದೆ. ಇದೇನಿದು ಮಿಥ್ಯ-ಸತ್ಯಗಳ ಲೋಕವಿದು!
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ