ಶರತ್ಕಾಲದ ರಂಗುರಂಗಿನ ಪ್ರಚಾರ: ಡಾ. ವಿನತೆ ಶರ್ಮ ಅಂಕಣ
ಕಾನೂನಿನ ಪ್ರಕಾರ ಗೋಡೆ ಗ್ರಫಿಟಿ ಆರ್ಟ್, ಮಸಿ ಬಳೆಯುವುದು ಇಂಥವುದೆಲ್ಲಾ ಅಪರಾಧಗಳು. ಬಲವಾದ, ಅದರಲ್ಲೂ ಕೇಂದ್ರೀಯ ವಿರೋಧಪಕ್ಷದ ನಾಯಕರಾದ ಪೀಟರ್ ಡಟ್ಟನ್ ಅವರ ಭಿತ್ತಿಚಿತ್ರಕ್ಕೆ ಮಸಿ ಬಳೆದದ್ದನ್ನ ನೋಡಿ ನನಗೆ ಆಶ್ಚರ್ಯವಾಯ್ತು. ಅದ್ಯಾರೊ ಬಹಳ ಧೈರ್ಯವಂತರಿರಬೇಕು ಎಂದುಕೊಂಡೆ. ಇಲ್ಲವೇ, ಡಟ್ಟನ್ ಅವರ ಸ್ವಲ್ಪವೂ ಸತ್ವವಿಲ್ಲದ, ಅಸತ್ಯದ, ಅಸಂಗತ ಮಾತುಗಳು, ಹೇಳಿಕೆಗಳಿಂದ ಬೇಸತ್ತು ಅವರ ಭಿತ್ತಿಚಿತ್ರದ ಮುಖಕ್ಕೆ ಮಸಿಬಳೆಯುವ ಯೋಚನೆ ಬಂದಿರಬೇಕು. ಅವರ ಬಳಿ ಸತ್ವಯುತ, ಅಭಿವೃದ್ಧಿ-ಪರ, ಜನ-ಪರ ಆಶ್ವಾಸನೆಗಳು ಇಲ್ಲದಿರುವುದು ಮಸಿಬಳೆದ ಕಿಡಿಗೇಡಿಗಳಿಗೆ ಅದೆಷ್ಟು ನಿರಾಸೆ ತಂದಿರಬೇಕು ಎಂದೆನಿಸಿತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
