Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಕೀವೀ ನಾಡಲ್ಲಿ ಕ್ಯಾಂಪರ್ ವ್ಯಾನ್ ಸುತ್ತಾಟ: ವಿನತೆ ಶರ್ಮ ಅಂಕಣ

ಈಚೀಚೆಗೆ ಕ್ಯಾಂಪರ್ ವ್ಯಾನ್ ಬಾಡಿಗೆಗೆ ತೆಗೆದುಕೊಂಡು ಪ್ರವಾಸ ಮಾಡುವ ಭಾರತೀಯರು/ಏಷ್ಯನ್ನರು ಹೆಚ್ಚಾಗುತ್ತಿದ್ದಾರೆ. ನಾನು ಕೇಳಿದಂತೆ ಹೀಗೆ ಕ್ಯಾಂಪರ್ ವ್ಯಾನ್ ಬಾಡಿಗೆಗೆ ಪಡೆದು ಪ್ರವಾಸ ಮಾಡುವ ಭಾರತೀಯರು ಒಳ್ಳೆ ಸಿದ್ಧತೆ ಮಾಡಿಕೊಂಡಿರುತ್ತಾರೆ. ಪ್ರತಿದಿನವೂ ಅಡುಗೆ ಮಾಡಲು ಬೇಕಾಗುವ ದಿನಸಿ ಸಾಮಗ್ರಿಯಿಂದ ಹಿಡಿದು ದಿನನಿತ್ಯದ ಕಾರ್ಯಕ್ರಮದ ವೇಳಾಪಟ್ಟಿಯನ್ನೂ ಹೊಂದಿಸಿಕೊಂಡಿರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಯೋಣ: ಡಾ. ವಿನತೆ ಶರ್ಮಾ ಅಂಕಣ

ಹೋದ ವಾರ ಕ್ವೀನ್ಸ್‌ಲ್ಯಾಂಡ್ ರಾಜ್ಯದಲ್ಲಿ ಚುನಾವಣೆ ನಡೆದು ಆಗ ಆಡಳಿತ ನಡೆಸುತ್ತಿದ್ದ ಲೇಬರ್ ಪಕ್ಷ ಸೋತು, ಬಹುಮತ ಪಡೆದ ಲಿಬೆರಲ್ ಪಕ್ಷ ಅಧಿಕಾರಕ್ಕೆ ಬಂತು. ಹೊಸದಾಗಿ ತಮ್ಮ ಸರಕಾರವನ್ನು ರಚಿಸುತ್ತಾ, ಸಂಪುಟ ಸಚಿವರನ್ನು ಆಯ್ಕೆ ಮಾಡಿದ್ದ ಹೊಸ ಮುಖ್ಯಮಂತ್ರಿ ಡೇವಿಡ್ ಕ್ರಿಸ್ಟಫಲಿ ನಿನ್ನೆ ನಡೆದ ಸಮಾರಂಭದಲ್ಲಿ ಹಾಜರಿದ್ದರು. ಜೊತೆಗೆ ಒಂದಿಬ್ಬರು ಮಂತ್ರಿಗಳು, ಕೇಂದ್ರ ವಿರೋಧಪಕ್ಷದ ನಾಯಕರು, ನಗರಪಾಲಿಕೆ ಮೇಯರ್, ಎಂಪಿಗಳು ಎಂಬಂತೆ ರಾಜಕಾರಣಿಗಳ ದೊಡ್ಡ ತಂಡವೇ ಬಂದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅನಿವಾಸಿಗಳಿಗೆ “ಇಳೆಯ” ಸಂಗೀತದ ಹಿತ: ಡಾ. ವಿನತೆ ಶರ್ಮಾ ಅಂಕಣ

ಬ್ಯಾಂಡ್ ಹೊಂದಿರುವ ಸಂಗೀತ ವಾದ್ಯಗಳ ವೈವಿಧ್ಯತೆ, ತಬಲಾ ಬಾರಿಸುವ ನಿಪುಣತೆ, ಕೊಳಲು ಊದುವ ಮಾಧುರ್ಯ, ವಯಲಿನ್ ನುಡಿಸುವ ತನ್ಮಯತೆ, ಕೀಬೋರ್ಡ್ ಮೇಲೆ ನಲಿದಾಡುವ ಬೆರಳುಗಳ ಚಾಕಚಕ್ಯತೆ, ಎಲ್ಲವೂ ಚೊಕ್ಕವಾಗಿ ಚೆಂದೆನಿಸಿತ್ತು. ನಾನು ಇದೆ ಮೊದಲ ಬಾರಿ ಎಲೆಕ್ಟ್ರಿಕ್ ತಬಲಾ ನೋಡಿದ್ದು, ಬೆರಗಾಗಿದ್ದು. ಅದನ್ನು ಬಾರಿಸುತ್ತಿದ್ದ ಯುವಕ ಕಾರ್ಯಕ್ರಮವನ್ನು ನಿರ್ದೇಶಿಸುತ್ತಿದ್ದ ಕೂಡ. ಅವಲ್ಲದೆ, ಇನ್ನಿಬ್ಬರು ಎರಡು ಶಾಸ್ತ್ರೀಯ ತಬಲಾಗಳನ್ನೂ ಬಾರಿಸುತ್ತಿದ್ದರು. ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನವರಾತ್ರಿಗೆ ಒಂದಿಷ್ಟು ಆಸ್ಟ್ರೇಲಿಯಾ ಕಥೆಗಳು: ಡಾ. ವಿನತೆ ಶರ್ಮಾ ಅಂಕಣ

ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿದ್ದು ಅವರು ಹಿಂದೂ ಧರ್ಮವನ್ನು ಆಚರಿಸುವುದಾಗಿ ಜನಗಣತಿಯಲ್ಲಿ ಹೇಳಿದ್ದರೆ, ಅವರ ಹಕ್ಕುಮಾನ್ಯತೆಯನ್ನು ಪರಿಗಣಿಸಿ ದೇವಸ್ಥಾನಕ್ಕೆ ಒಪ್ಪಿಗೆ ಕೊಡಬಹುದು. ಇದಾದ ಮೇಲೆ ದೇವಾಲಯ ಕಟ್ಟಡದ ನಿರ್ಮಾಣಕ್ಕೆ ಹಣ ಹೊಂದಿಸಬೇಕು. ದೇವಸ್ಥಾನ ಸ್ಥಾಪನೆಯ ಕನಸು ಕಂಡವರು ಹಗಲುರಾತ್ರಿ ಶ್ರಮವಹಿಸಿ ನಿಧಿಸಂಗ್ರಹಣೆ ಮಾಡಬೇಕು. ಕೆಲವರಿಗಂತೂ ಇದೇ ಅವರ ನಿತ್ಯಜೀವನವಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ