Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಕೇಂದ್ರೀಯ ಬಜೆಟ್‌ನ ಉಪಕಥೆಗಳು: ಡಾ. ವಿನತೆ ಶರ್ಮ ಅಂಕಣ

ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳು ಹೇಳಿದಂತೆ ಯೂನಿವರ್ಸಿಟಿಯ ಸಹಪಾಠಿಯೊಬ್ಬರು ತಮ್ಮ ಕಾರಿನಲ್ಲಿ ಬದುಕುತ್ತಿದ್ದರಂತೆ. ರಾತ್ರಿ ಸಮಯ ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿಕೊಂಡಿರುವುದು, ಒಳಗೆ ಮುದುರಿಕೊಂಡು ಮಲಗುವುದು. ಬೆಳಿಗ್ಗೆ ಎದ್ದು ಯೂನಿವರ್ಸಿಟಿಗೆ ಬಂದು ಅಲ್ಲಿದ್ದ ಟಾಯ್ಲೆಟ್, ಶವರ್ ಸೌಲಭ್ಯಗಳನ್ನು ಬಳಸಿಕೊಂಡು, ಕೆಫೆಯಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕುವ ರಿಯಾಯ್ತಿ ದರದಲ್ಲಿ ಕಾಫಿ, ಸ್ಯಾಂಡ್ವಿಚ್ ಮತ್ತು ಉಚಿತ ಹಣ್ಣು ಪಡೆಯುವುದು. ದಿನಪೂರ್ತಿ ಯೂನಿವರ್ಸಿಟಿ ಕಟ್ಟಡದೊಳಗೇ ಇದ್ದುಕೊಂಡು ಒಂದಷ್ಟು ವ್ಯಾಸಂಗ, ನಿದ್ದೆ ಮಾಡುವುದು. ರಾತ್ರಿ ಪುನಃ ಕಾರಿಗೆ ವಾಪಸ್.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಸಂಗೀತ-ನೃತ್ಯ ರೂಪಕದೊಳಗೆ ಎಲ್ಲರಿಗೂ ಸಲ್ಲುವ ಅಮೆರಿಕೆಯ

ಹೊಸ ದೇಶವನ್ನು ರೂಪಿಸಲು ಹೆಣಗಾಡುತ್ತಿದ್ದ ತನ್ನ ನಾಯಕ ಜಾರ್ಜ್ ವಾಷಿಂಗ್ಟನ್ ಅವರಿಗೆ ತೋಳ್ಬಲ ಕೊಟ್ಟು ರಾಜಕೀಯದಲ್ಲಿನ ಭುಜಬಲನಾದ. ಹೊಸ ಅಮೆರಿಕಾದ ಮೊಟ್ಟಮೊದಲ ಅಧ್ಯಕ್ಷರಾದ ವಾಷಿಂಗ್ಟನ್ ಅವರ ಸರಕಾರದಲ್ಲಿ ಪ್ರಮುಖ ಪದವಿಗಳನ್ನು ನಿರ್ವಹಿಸುತ್ತಾ ತನ್ನನ್ನು ತಾನೇ ದೇಶೀಯ ಮಟ್ಟದಲ್ಲಿ ಒಬ್ಬ ನಂಬಿಕೆಯ ರಾಜಕಾರಣಿ, ರಾಜನೀತಿ ತಜ್ಞನಾಗಿ ರೂಪಿಸಿಕೊಂಡ ಹ್ಯಾಮಿಲ್ಟನ್ ತನ್ನ ಅಲ್ಪಾಯಸ್ಸಿನ ಕಾಲದಲ್ಲಿ ಅಮೆರಿಕಾವನ್ನು ಒಂದು ಸುಸಂಸ್ಥಿತ ದೇಶವನ್ನಾಗಿ ರೂಪಿಸಲು ಅನೇಕ ಮೈಲಿಗಲ್ಲುಗಳನ್ನು ನೆಟ್ಟಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಮಳೆಬೆಳೆ, ಸಂತೋಷ, ನೆಮ್ಮದಿಗಳ ಕಣಜ

ಕಳೆದ ಇಡೀ ಬೇಸಿಗೆಯಲ್ಲಿ ನಮ್ಮ ರಾಣಿರಾಜ್ಯದಲ್ಲಿ ಮಳೆ ಎಂಬುದು ಮರೀಚಿಕೆಯಾಗಿತ್ತು. ಬೇಸಿಗೆ ಬರುವುದಕ್ಕೂ ಮುನ್ನ ಸರ್ಕಾರವು ಬರಲಿರುವ ಚಂಡಮಾರುತಗಳ ಬಗ್ಗೆ, ಮಳೆಪ್ರವಾಹಗಳ ಬಗ್ಗೆ ಅದೇನೆಲ್ಲಾ ಎಚ್ಚರಿಕೆ ಕೊಟ್ಟಿತ್ತು ಎಂದರೆ ದೂರಪ್ರವಾಸಕ್ಕೇನಾದರೂ ಹೋದರೆ ಮನೆಕಡೆ ಪರಿಸ್ಥಿತಿ ಏನಪ್ಪಾ ಎಂದೆಲ್ಲ ಚಿಂತೆಯಾಗಿತ್ತು. ಹಾಗೇನೂ ಆಗದೆ ಕಡೆಗೆ ನೆಟ್ಟಗೊಂದು ಸರಿಯಾದ ಮಳೆಯೂ ಬೀಳದೆ, ಬೇರೊಂದು ತರಹದ ಚಿಂತೆಯಾಗಿತ್ತು. ಬಿಸಿಲು ಹೆಚ್ಚಾಗಿ, ಮಳೆನೀರು ಕೊಯ್ಲಿನ ಟ್ಯಾಂಕ್ ಪೂರಾ ಖಾಲಿಯಾಗಿ, ಏನೊಂದೂ ತರಕಾರಿ ಬೆಳೆಯಲಿಲ್ಲ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

‘ಇಂಡೀಜಿನಸ್ ವಾಯ್ಸ್’ – ಸಮತೆಯತ್ತ ಆಸ್ಟ್ರೇಲಿಯಾ

ದೇಶದ ಮೂಲಜನರಿಗೆ ಸಂಬಂಧಿಸಿದ್ದರೂ 55 ವರ್ಷಗಳ ನಂತರ ಪ್ರತಿಯೊಬ್ಬ ಆಸ್ಟ್ರೇಲಿಯನ್ ವಯಸ್ಕ ಪ್ರಜೆಯೂ ಕಡ್ಡಾಯವಾಗಿ ಮತ ಚಲಾಯಿಸಬೇಕಾದ, ದೇಶದ ಸಂವಿಧಾನಕ್ಕೆ ತಿದ್ದುಪಡಿ ತರಲು ಕೇಳಬೇಕಿದ್ದ ಅತ್ಯಂತ ಮುಖ್ಯವಾದ ಪ್ರಶ್ನೆಯನ್ನು ಅವರು ಅಧಿಕೃತವಾಗಿ ಬಿಡುಗಡೆ ಮಾಡುವವರಿದ್ದರು. ತಮ್ಮ ಬಿಳಿಯ ಜನರಿಗೆ ಸಾರಾಸಾಗಾಟಾಗಿ, ಯಾವುದೇ ಅಡ್ಡಿಗಳಿಲ್ಲದೆ ‘ಸ್ವಾಭಾವಿಕವಾಗಿ’ ಲಭ್ಯವಿರುವ ಸ್ವಯಂ-ನಿರ್ಣಯದ ಹಕ್ಕು ಇದೇ ದೇಶದ ಮೂಲಜನರಿಗೆ ಇಲ್ಲವಾಗಿರುವುದನ್ನು ಅವರು ಎತ್ತಿ ಹಿಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅಲ್ಲಿಯ ಇಲ್ಲಿಯ ಬೆಲೆಯೇರಿಕೆ ಕಥೆಗಳು

ಉದ್ಯೋಗ ಬೇಟೆಯಲ್ಲಿರುವ ಜನರಿಗೆ ಕೊಡುವ ಧನಸಹಾಯ ಆ ಒಬ್ಬ ವ್ಯಕ್ತಿಯ ಜೀವನಕ್ಕೇ ಸಾಲದಾಗಿದೆ. ಬೇಸತ್ತು ಯಾವುದಾದರೂ ಸರಿಯೇ ಹೇಗಾದರೂ ಸರಿಯೇ ಕೆಲಸವನ್ನು ಹಿಡಿಯೋಣವೆಂದು ಹೊರಟರೆ ಆ ಉದ್ಯೋಗದಿಂದ ಬರುವ ಆದಾಯ ಏತಕ್ಕೂ ಸಾಲುವುದಿಲ್ಲ. ತಮಗೆ ಒಗ್ಗದ ಉದ್ಯೋಗವನ್ನು ಮಾಡುವ ಅನಿವಾರ್ಯತೆ ಹಲವರಲ್ಲಿ ಮಾನಸಿಕ ಕ್ಷೋಭೆಯನ್ನುಂಟು ಮಾಡುತ್ತದೆ. ಮಾನಸಿಕ ರೋಗಗಳು ಕಾಣಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ