Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಬನ್ಯಾ ಮರ ಹಬ್ಬ ಮತ್ತು ಬನ್ಯಾ ಡ್ರೀಮಿಂಗ್

ಅಬೊರಿಜಿನಲ್ ಜನರ ಜೀವನದಲ್ಲಿ ಡ್ರೀಮಿಂಗ್ ಸ್ಟೋರೀಸ್ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಭಾರತೀಯ ಹಿಂದೂ ಧರ್ಮದಲ್ಲಿ ದೇವರುಗಳು ಮತ್ತು ಅನೇಕಾನೇಕ ಪುರಾಣಗಳು ಹಾಸುಹೊಕ್ಕಾಗಿರುವಂತೆ. ಅಬೊರಿಜಿನಲ್ ಜೀವನದಲ್ಲಿ ಪ್ರತಿಯೊಂದನ್ನೂ ಸ್ಪಿರಿಟ್‌ಗಳು, ಅವುಗಳು ಎಲ್ಲ ಬಗೆಯ ಜೀವಜಾಲದೊಂದಿಗೆ ಹೊಂದಿರುವ ಸಂಬಂಧವು ಎಲ್ಲರ ಜೀವನದ ಆಗುಹೋಗುಗಳನ್ನು ನಿರ್ದೇಶಿಸುತ್ತವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಆಸ್ಟ್ರೇಲಿಯಾದ ‘ಬಿಗ್ ಥಿಂಗ್ಸ್’ ಆಕರ್ಷಣೆಗಳು

ಏನಿದು ‘ಬಿಗ್ ಥಿಂಗ್ಸ್’ ಎಂದು ಮೊದಲ ಬಾರಿ ಕೇಳಿದಾಗ ನನ್ನ ಆಸ್ಟ್ರೇಲಿಯನ್ ಸ್ನೇಹಿತೆಯ ಗಂಡ ಬಲು ಸೊಗಸಾಗಿ ವಿವರಿಸಿದ್ದರು. ಒಂದೂರಿನ ಜನರು ಸೇರಿ ತಮಗೆ ಆಪ್ತವೆನಿಸಿದ ಹಣ್ಣು, ಆಹಾರ, ಪ್ರಾಣಿ, ಪಕ್ಷಿ, ಮರ ಇತ್ಯಾದಿಗಳಲ್ಲಿ ಒಂದನ್ನು ಆರಿಸಿಕೊಂಡು ಅದನ್ನು ದೊಡ್ಡ ಗಾತ್ರದ ಶಿಲ್ಪ ಕೃತಿಯಾಗೋ, ಲೋಹ ಕಲಾ ಕೃತಿಯಾಗಿಯೋ ನಿರ್ಮಿಸಿ ಹೆಮ್ಮೆಯಿಂದ ಆ ಪ್ರತಿಮೆಯನ್ನು ತಮ್ಮೂರಲ್ಲಿ ಸ್ಥಾಪಿಸುವುದು. ಕ್ರಮೇಣ ಅದಕ್ಕೆ ಪ್ರಚಾರ ಕೊಟ್ಟು ಅದನ್ನು ದೇಶದ ‘ಬಿಗ್ ಥಿಂಗ್ಸ್’ ಪಟ್ಟಿಗೆ ಸೇರುವಂತೆ ಮಾಡುವುದು. ಇದರಿಂದ ಆ ಊರಿಗೆ ಅದೇನೋ ವಿಶೇಷ ಗುರುತು ಸಿಕ್ಕಿದಂತಾಗುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಅನ್ ರಿಯಲ್ ಲೋಕದಲ್ಲಿ ಶಾಂತಿ ಮಂತ್ರ ಜಪ

ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿಯಾಗಿದ್ದಾಗ ಈ ಬಲು ದೀರ್ಘ ಪ್ರೋಸ್/ ಪೊಯೆಟ್ರಿ, ನವ್ಯ ಕಾವ್ಯ ಬಹಳ ದಿನಗಳ ಕಾಲ ನನ್ನನ್ನು ಕಾಡಿತ್ತು. ಅದನ್ನು ಕೈಲಿ ಹಿಡಿದುಕೊಂಡು ಎಲ್ಲವನ್ನೂ ಬಿಟ್ಟು ಯಾವುದೊಂದೂ ವ್ಯವಸ್ಥೆಗೆ ಸಿಲುಕದೆ ಪ್ರಪಂಚ ಸುತ್ತುವ ಇರಾದೆ ಹುಟ್ಟಿತ್ತು. ಆ ಕಾಲದಲ್ಲಿ ಅವು ನಾನು ಮನೆಬಿಟ್ಟು ಹೋಗುವ, ಹುಟ್ಟಿ ಬೆಳೆದ ಕುಟುಂಬವನ್ನು ತ್ಯಜಿಸುವ ನಿರ್ಧಾರ ತೆಗೆದುಕೊಂಡಿದ್ದ ದಿನಗಳು. ಕಾಲೇಜು ಹುಡುಗಿ ಮನೆಬಿಟ್ಟು ಹೋದಮೇಲೆ ಹೇಗೆ ಬದುಕುವುದು ಎನ್ನುವ ಚಿಂತನೆಯಲ್ಲಿದ್ದ ದಿನಗಳು. ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು: ಭಾಗ ಒಂದು

ಈ ಬಾರಿ ನಾವು ಹೂಡಿದ ‘ಅಡಿಗೆಮನೆ’ ಇದ್ದದ್ದು ಮರಗಳ ಅಂಚಿನಲ್ಲಿ. ಈ ಅಂಚಿನ ಆಚೆ ಕಡೆ ನೂರು ಮೀಟರ್ ದೂರದಲ್ಲಿ ನೀರಿಲ್ಲದೆ ಬೇಸಿಗೆಯ ಬಿಸಿಲಿಗೆ ಸೊರಗಿದ್ದ ನದಿಯಿತ್ತು. ಕಳೆದ ಫೆಬ್ರವರಿ-ಮಾರ್ಚ್ ತಿಂಗಳುಗಳಲ್ಲಿ ಸಂಭವಿಸಿದ ಅಧಿಕ ಮಳೆ-ಜಲ ಪ್ರವಾಹದಲ್ಲಿ ಈ ನದಿ ಉಕ್ಕೇರಿ ಆ ನೂರೂ ಮೀಟರ್ ದೂರವನ್ನಾಕ್ರಮಿಸಿಕೊಂಡು ಈ ಮರಗಳ ಅಂಚಿನ ತನಕ ಬಂದಿತ್ತು ಎನ್ನುವುದು ಅಲ್ಲಿ ಚೆಲ್ಲಾಡಿದ್ದ ಮರಕೊಂಬೆಗಳು, ರೆಂಬೆಗಳಿಂದ ಸ್ಪಷ್ಟವಾಗಿತ್ತು. ನಾವೇನೋ ಖುಷಿಯಿಂದಲೇ ಅಲ್ಲಿ ಅಡಿಗೆಮನೆ ಮತ್ತು ನೆಲದ ಹಾಸುಗಳನ್ನು ಸ್ಥಾಪಿಸಿದ್ದೆವು. ಒಂದೆರೆಡು ದಿನಗಳಲ್ಲಿ ಬಿದ್ದ ಮಳೆಯಿಂದ ನಮ್ಮ ಖುಷಿ ಕಡಿಮೆಯಾಯ್ತು. ನೆಲದ ಹಾಸು ಮಳೆನೀರು, ಮಣ್ಣಿನ ರಾಡಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ