Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಸಾಂಘಿಕವಾದ ಕ್ರಿಸ್ಮಸ್ ಸೀಸನ್ ಶುಭಾಶಯಗಳು

ಬಹುಶಃ ಪ್ರಪಂಚದಾದ್ಯಂತ ಕೋಟ್ಯಾಂತರ ಮಕ್ಕಳು ಎದುರು ನೋಡುವ, ಹಾಗೆ ಗಪ್ ಚಿಪ್ ಆಗಿ ಚಿಮಿಣಿಯಲ್ಲಿ ಸಾಂಟಾ ಬಂದು ಕೊಡುವ ಉಡುಗೊರೆಗಾಗಿ ಕಾಯುವ ಯಾವೊಂದು ಮಗುವಿಗೂ ನಿರಾಸೆಯಾಗದ ಸಂದರ್ಭ ಈ ಕ್ರಿಸ್ಮಸ್ ಸೀಸನ್. ಇದು ‘giving’ ಸೀಸನ್. ಅಂದರೆ ನಾವು ಮನಃಪೂರ್ವಕವಾಗಿ ಕೈಲಾದಷ್ಟು ದಾನ ಮಾಡುವ ಕಾಲ. ನಾವು ಕೊಡುವ ದಾನವು ಹಣದಿಂದ ಹಿಡಿದು ಬಟ್ಟೆ, ಉಡುಗೆತೊಡುಗೆ, ಮನೆವಸ್ತುಗಳು, ಪೀಠೋಪಕರಣಗಳು, ಪುಸ್ತಕಗಳು, ಆಹಾರ ಪದಾರ್ಥ, ಎಂಬಂತೆ ನಾನಾತರಹವಾಗಿ ನಾವು ದಾನವೀಯಬಹುದು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’

ದೇಶವಿಡೀ ಇನ್ನೇನು ಬರಲಿರುವ ಕ್ರಿಸ್ಮಸ್ ಹಬ್ಬದ ಮೋಡಿಗೆ ಸಿಲುಕಿ ಸಜ್ಜಾಗುತ್ತಿದೆ. ಬಣ್ಣಬಣ್ಣಗಳ ಅಲಂಕಾರಗಳು, ಕ್ರಿಸ್ಮಸ್ ಮಾರ್ಕೆಟ್, ಜನಸಂದಣಿ, ನಗರ ಕೇಂದ್ರದಲ್ಲಿರುವ ಬೃಹತ್ ಅಲಂಕೃತ ಕ್ರಿಸ್ಮಸ್ ಮರ ಎಲ್ಲವೂ ಜನರನ್ನು ಕುಣಿದಾಡಿಸುತ್ತಿವೆ. ಕ್ರಿಸ್ಮಸ್ ದಿನದ ವಿಶೇಷ ಆಹಾರವಾದ ಟರ್ಕಿ ಕೋಳಿ ಮತ್ತು ಸಾಮನ್ ಮೀನು ಮಿಂಚಿನ ವೇಗದಲ್ಲಿ ಮಾರಾಟವಾಗುತ್ತಿವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಸಂಗೀತ ಸಂಜೆಗಳ ಇಬ್ಬಗೆಯ ಸುಧೆ

ಆಸ್ಟ್ರೇಲಿಯಾದ ಎಂದೆಂದಿಗೂ ತಿಳಿಯಾಗಿಲ್ಲದ ಇಬ್ಬಗೆಯೆಂದರೆ ಆಸ್ಟ್ರೇಲಿಯನ್ ಅಬೊರಿಜಿನಲ್ ಜನಜೀವನದ ಮುಖ್ಯಭಾಗವಾದ ಸಂಗೀತ ಮತ್ತು ಆಸ್ಟ್ರೇಲಿಯಕ್ಕೆ ಬರಮಾಡಿಕೊಂಡ ಪಾಶ್ಚಾತ್ಯ ಸಂಗೀತ. ಅಬೊರಿಜಿನಲ್ ಜನರನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ವಸಾಹತುಶಾಹಿಗಳು ಪ್ರಯತ್ನಿಸಿದರೂ ಇಪ್ಪತ್ತನೇ ಶತಮಾನದಲ್ಲಿ ಅಬೊರಿಜಿನಲ್ ಸಂಗೀತ, ನೃತ್ಯ ಮತ್ತು ಚಿತ್ರಕಲೆಗೆ ಗಮನ ಕೊಟ್ಟು, ಅವುಗಳಲ್ಲಿರುವ ವಿಶೇಷಣಗಳನ್ನು ಗುರುತಿಸಿದರು.
ಡಾ. ವಿನತೆ ಶರ್ಮ ಅಂಕಣ

Read More

ರೇನ್ಬೋ ಬೀಚ್: ರಾಣಿರಾಜ್ಯದ ಕಾಮನಬಿಲ್ಲು

ಬಣ್ಣಗಳು ತುಂಬಿದ ರೇನ್ಬೋ ಬೀಚಿನ ಆಕರ್ಷಕ ಮರಳುದಿಬ್ಬಗಳ ಮೇಲೆ ಹತ್ತಿ, ಒಂದು ಮರದ ತುಂಡನ್ನು ಹಿಡಿದು ಜಾರುಬಂಡೆ ಮಾಡಿಕೊಂಡು, ಎದುರಿಗಿರುವ ನಿರ್ಮಲ ನೀಲ ಸಾಗರವನ್ನು ದೃಷ್ಟಿಸುತ್ತ ಜಾರುವಾಗ ಅದೇನೋ ಒಂದು ದೈವೀಕ ಅನುಭೂತಿಯುಂಟಾಗುತ್ತದೆ. ಯಿನಿಂಗೀ ಇರುವ ಆ ಪ್ರಕೃತಿಯೆ ದೇವರಾದಂತೆ ಭಾಸವಾಗುತ್ತದೆ. ಆನಂತರ ದಿಬ್ಬಗಳ ಕೆಳಗೆ ನಿಂತು ಮರಳನ್ನು ಬೊಗಸೆಯಲ್ಲಿ ಹಿಡಿದು ಬಣ್ಣಬಣ್ಣದ ಕಣಗಳನ್ನು ಸ್ಪರ್ಶಿಸಿದಾಗ ಮತ್ತದೇನೋ ಮಾಯೆ! ದಿವ್ಯದರ್ಶನದ ಕ್ಷಣಗಳು!
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ವಸತಿ ಸಮಸ್ಯೆ, ರಾಜಕೀಯ ಪ್ರಶ್ನೆಗಳ ಕಥೆಗಳು

ಆಸ್ಟ್ರೇಲಿಯಾದಲ್ಲಿ ಕೋವಿಡ್-೧೯ ನಂತರದ ಪರಿಸ್ಥಿತಿ ಸುಧಾರಿಸಿದೆ, ಜನರ ಹರಿದಾಟ ಸುಗಮವಾಗಿದೆ. ಆದರೆ ಧುತ್ತೆಂದು ದೇಶದಾದ್ಯಂತ, ಅದರಲ್ಲೂ ನಮ್ಮ ರಾಣಿರಾಜ್ಯದಲ್ಲಿ ಇನ್ನೂ ನಿಚ್ಚಳವಾಗಿ, ವಸತಿ ಸಮಸ್ಯೆ ಎನ್ನುವುದು ಹೊಸದಾಗಿ ತಲೆದೋರಿದೆ. ಪ್ರಪಂಚದ ಬೇರೆಬೇರೆ ಭಾಗಗಳಿಂದ ದೇಶದೊಳಕ್ಕೆ ಬರುತ್ತಿರುವವರ ಮತ್ತು ಅಂತರಾಜ್ಯ ವಲಸೆಗಾರರ ಸಂಖ್ಯೆ ಹೆಚ್ಚಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದ ಕೇಂದ್ರ ಸರಕಾರವು ಇತ್ತೀಚೆಗೆ ಹೆಚ್ಚು ಸಂಖ್ಯೆಯ ವಿದ್ಯಾರ್ಥಿ ಮತ್ತು ಉದ್ಯೋಗ ವೀಸಾಗಳನ್ನು ಕೊಡುತ್ತ ಉತ್ತೇಜನಕಾರಿಯಾಗಿದೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ