Advertisement

ಕೆಂಡಸಂಪಿಗೆ

ಶ್ರೀರಂಗನಾಯಕ ರಾಜೀವ ಲೋಚನ ರಮಣ…: ವಿನಾಯಕ ಅರಳಸುರಳಿ ಅಂಕಣ

ಕೋಣೆ ಹಾಗೂ ಅದರ ಹಾಸಿಗೆಗಷ್ಟೇ ಸೀಮಿತವಾಗಿ ಹೋದ ಅಜ್ಜನಿಗೆ ಇಡೀ ಮನೆಯಲ್ಲಿ ಸ್ವಲ್ಪವಾದರೂ ಮನೋರಂಜನೆಗೆ ಒದಗುತ್ತಿದ್ದವನು ನಾನೊಬ್ಬನೇ. ಯಾವ್ಯಾವುದೋ ಸಿನಿಮಾ, ಭೂತ, ಪ್ರೇತದ ಕಥೆಗಳನ್ನು ಮನಸ್ಸಿನಲ್ಲಿ ಕಲ್ಪಿಸಿಕೊಂಡು ಅಂಗಳದಲ್ಲಿ ಡಿಶೂಂ ಡಿಶೂಂ ಎಂದು ಗಾಳಿಯೊಡನೆ ಗುದ್ದಾಡುತ್ತ ಸುಳಿದಾಡುತ್ತಿದ್ದ ನನ್ನನ್ನು ಗಣೇಶಾ ಎಂದು ಕರೆಯುತ್ತಿದ್ದ ಅಜ್ಜ ‘ಇಲ್ಲಿ ಜಗುಲೀಲಿ, ನನ್ನ ಎದುರೇ ಆಡು ಗಣೇಶಾ’ ಎಂದು ಗೋಗರೆಯುತ್ತಿದ್ದರು.‌
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ರಕುತದಿ ಬರೆದೆನು ಇದ ನಾನು…: ವಿನಾಯಕ ಅರಳಸುರಳಿ ಅಂಕಣ

ಪತ್ರ ಕೇವಲ ಸಾಮಾನ್ಯ ಜನರ ಅಂತರಾಳವನ್ನು ಹಾಗೂ ಕಷ್ಟ-ಕಾರ್ಪಣ್ಯಗಳಷ್ಟನ್ನೇ ಹಂಚಿಕೊಳ್ಳುವ ಮಾಧ್ಯಮವಷ್ಟೇ ಆಗಿರಲಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಂದ ಹಿಡಿದು ಚಿಂತಕರ ತನಕ ಎಷ್ಟೋ ಪ್ರಖರ ವ್ಯಕ್ತಿಗಳು ತಮ್ಮ ಹೋರಾಟಗಳನ್ನೂ, ಚಿಂತನೆಗಳನ್ನೂ ಬೇರೆಯವರಿಗೆ ದಾಟಿಸಲು ಆಯ್ದುಕೊಂಡ ಮಾರ್ಗಗಳ ಪೈಕಿ ಪತ್ರವೂ ಒಂದು. ಸೆರೆಯಲ್ಲಿದ್ದಾಗ, ಭೇಟಿ ಸಾಧ್ಯವಿಲ್ಲದಾಗ ತಮ್ಮ ಸಹಚರರಿಗೆ, ಅನುಯಾಯಿಗಳಿಗೆ ಸೂಚನೆಗಳನ್ನು ನೀಡಲೆಂದು ಕಳುಹಿಸಿದ ರಹಸ್ಯ ಓಲೆಯ ನಡುವೆ ಬರೆದ “ಸ್ವಾತಂತ್ರ್ಯ ಸುಮ್ಮನೆ ಬರುವುದಿಲ್ಲ ಗೆಳೆಯಾ.”
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಮತ್ತೊಂದು ಬರಹ ನಿಮ್ಮ ಓದಿಗೆ

Read More

ಮೊಬೈಲ್ ಬಂದುದು.‌..: ವಿನಾಯಕ ಅರಳಸುರಳಿ ಅಂಕಣ

ದೂರವಿದ್ದಷ್ಟೂ ನಕ್ಷತ್ರದ ಅಂದ ಜಾಸ್ತಿಯಂತೆ. ಪಕ್ಕದ ಮನೆಯಲ್ಲಿದ್ದಾಗ ಯಕ್ಷಲೋಕದ ಮಾಯಾಗೋಲದಂತೆ ಭಾಸವಾಗುತ್ತಿದ್ದ, ಮರದ ಕೊರಡಿನಲ್ಲಿ ಕೆತ್ತಿ ಆಡುವಂತೆ ಪ್ರೇರೇಪಿಸಿದ್ದ ಮೊಬೈಲು ತನ್ನದೇ ಅಂಗೈಗೆ ಬಂದ ಕೆಲವೇ ದಿನಗಳಲ್ಲಿ ಮರದ ಕೊರಡಿನಷ್ಟೇ ಸಾಮಾನ್ಯ ಸಂಗತಿಯಾಗಿಹೋಯಿತು. ಅದರಲ್ಲಿ ಬರುತ್ತಿದ್ದ ಮೆಸೇಜ್, ಕಾಲ್‌ಗಳ ಜೊತೆ ಆಚೆ ಬದಿಯಿಂದ ಅವನ್ನು ಕಳಿಸುತ್ತಿದ್ದ ವ್ಯಕ್ತಿಗಳೂ ಹಳಸಿಹೋಗಿದ್ದರಿಂದ ಮೊಬೈಲು ಹಳೆಯ ಹೆಂಡತಿ/ಹಳೆಯ ಗಂಡನಂತೆ ತನ್ನಲ್ಲಿನ ಹೊಸತನವನ್ನು ಕಳೆದುಕೊಂಡುಬಿಟ್ಟಿತು.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ದೇವ್ರು ಶಾಣ್ಯಾ ಅದಾನ್ರೀ… : ವಿನಾಯಕ ಅರಳಸುರಳಿ ಅಂಕಣ

ಹೌದಲ್ಲವೇ? ಎಲ್ಲಾ ಸರಿಯಾಗಿರುವ ಹೊತ್ತಿನಲ್ಲೂ ಯಾವುದೋ ಒಂದು ಕೊರಗು ನಮ್ಮನ್ನು ಕಾಡುತ್ತಲೇ ಇರುತ್ತದೆ. ಮಧ್ಯಾಹ್ನದ ನೆರಳಿನಲ್ಲಿ ಯಾರದೋ ಹುಡುಕಾಟ… ಸಂಜೆಯ ತಂಪಲ್ಲಿ ಯಾವುದೋ ನೆನಪು.. ರಾತ್ರೆಯ ಕನವರಿಕೆಯಲ್ಲಂತೂ ಎಂಥದ್ದೋ ದುಃಖ… ಇವೆಲ್ಲಾ ಏಕೆ? ಕಳೆದ ನೆನ್ನೆಗಳೇ ಅದೇಕೋ ಚಂದ ಎನಿಸುತ್ತವೆ. ಇಂದು ಎನ್ನುವುದು ಯಾವಾಗಲೂ ಕಹಿ ಕಹಿ. ಈ ಕ್ಷಣಕ್ಕೆ ಮೈ ಚಾಚಿ ಮಲಗಿರುವ ಹಂಸತೂಲಿಕಾ ತಲ್ಪದಲ್ಲೂ ಹಿಂದೆಂದೋ ಅರೆನಿದಿರೆ ಹೊತ್ತು ತಂದಿದ್ದ ಗುಡಿಸಲಿನ ಒರಟು ನೆಲದ್ದೇ ಕನವರಿಕೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಬದುಕು ಈಗ ತುಂಬ ಸುಲಭ…: ವಿನಾಯಕ ಅರಳಸುರಳಿ ಅಂಕಣ

ಕಾಲ ಬದಲಾಯಿತು. ಆಧುನಿಕತೆ ಎದ್ದು ನಿಂತಿತು. ಕಟ್ಟಿಗೆ ಕಡಿಯುವುದು ಕಷ್ಟ ಎಂದು ಗೀಝರ್ ಬಂತು. ಮತ್ತಿ ಸೊಪ್ಪು ಸಿಗುತ್ತಿಲ್ಲ ಎಂದು ಶ್ಯಾಂಪೂ ಬಂತು. ಅಮ್ಮ ಊರಲ್ಲಿದ್ದಾಳೆ ಎಂದಾಗ ಜೊಮ್ಯಾಟೋ ಬಂತು. ಕಾಲಿಗೆ ಬದಲಾಗಿ ಕಾರು ಬಂತು. ಸಾಕ್ಷಾತ್ ದ್ವಾಪರ ಯುಗದ ಕಾಳಿಂಗವೇ ಮೆಟ್ರೋದ ರೂಪ ತಾಳಿ ಹರಿದು ಬಂತು. ಎಲ್ಲವೂ ಸುಲಭವಾಯಿತು. ಸುಲಲಿತವಾಯಿತು. ಇಡೀ ಪ್ರಪಂಚವೇ ಬೆರಳ ತುದಿಯಲ್ಲಿ ಸಿಕ್ಕಿಕೊಂಡಿತು. ಮನುಷ್ಯ ಲೋಕದ ಬಾವುಟವೊಂದು ಚಂದ್ರನ ಅಂಗಳದಲ್ಲಿ ಪಟಪಟಿಸಿತು. “ವಿ ಆರ್ ಅಡ್ವಾನ್ಸ್ಡ್.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ