Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

ಈ ಅವಾಂತರಗಳೆಲ್ಲಾ ಏನೇ ಆದರೂ ಬರೆಯಬೇಕು ಎಂಬ ಸ್ವಸ್ಥ ಹವ್ಯಾಸವನ್ನು ಮೊಟ್ಟಮೊದಲ ಬಾರಿಗೆ ಅದೆಷ್ಟೋ ಮಕ್ಕಳ ಎದೆಯಲ್ಲಿ ಬಿತ್ತಿದ, ಕೈ ಹಿಡಿದು ಬರೆಸಿದ, ಬರೆದಿದ್ದಕ್ಕೊಂದು ವೇದಿಕೆ ಕಲ್ಪಿಸಿದ ಶ್ರೇಯ ಈ ಎಲ್ಲ ಮಕ್ಕಳ ಪತ್ರಿಕೆಗಳಿಗೇ ಸಲ್ಲಬೇಕು. ಅವರಿಗೆ ಇಷ್ಟವಾದ ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮುಖಾಂತರ ವಿನೋದಮಯವಾದ ಕಥೆಗಳನ್ನು ಹೆಣೆದು, ಅದರೊಳಗೇ ಕಾಣದಂತೆ ನೀತಿಗಳನ್ನು ಬೆರೆಸಿ ಉಣಬಡಿಸುತ್ತಿದ್ದ ಈ ಪತ್ರಿಕೆಗಳು ಓದಿದವರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಕೋಮಾವೂ, ಮಂಜನ ಚಕ್ಕುಲಿಯೂ… : ವಿನಾಯಕ ಅರಳಸುರಳಿ ಅಂಕಣ

ತೊಡೆಯ ಮೇಲೆ ಪೆಟ್ಟು ತಿಂದ ಶಿವುವಿಗೆ ತಾನು ಮಂಜುವನ್ನು ಸೋಲಿಸಲಾರೆ ಎಂಬುದು ಅರ್ಥವಾಯಿತೋ ಏನೋ? ಇನ್ನೂ ಬೀಳಲಿರುವ ಒದೆಗಳಿಂದ ತಪ್ಪಿಸಿಕೊಳ್ಳಲು ಇರುವ ಏಕಮಾತ್ರ ಉಪಾಯವೆಂಬಂತೆ ಅವನು ತನ್ನ ಕಾಲು ಹಿಡಿದುಕೊಂಡು ನೆಲಕ್ಕೆ ಬಿದ್ದುಕೊಂಡು “ಅಯ್ಯೋ.. ಅಮ್ಮಾ.. ಅಯ್ಯಯ್ಯಮ್ಮಾ” ಎನ್ನುತ್ತಾ ಒದ್ದಾಡತೊಡಗಿದ. ತಾನಾಗಿ ಹೊಡೆಯಲಾಗದ ಮಂಜುವಿಗೆ ಮೇಷ್ಟರ ಕೈಯಿಂದ ಹೊಡೆಸುವ ಉಪಾಯವೂ ಅವನದಾಗಿತ್ತೋ ಏನೋ? ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿ, ಬೇಗ ಈ ವಿಷಯ ಮೇಷ್ಟರನ್ನು ಮುಟ್ಟುವಂತೆ ಮಾಡಲೆಂದು ಎದೆ, ಕಾಲು ಹಿಡಿದುಕೊಂಡು ಒದ್ದಾಡುತ್ತಾ “ಅಯ್ಯೋ.. ಅಮ್ಮಾ‌‌.. ನಂಗ್ ಉಸಿರಾಡುಕಾತಿಲ್ಯೋ.. ಅಪ್ಪಯ್ಯೋ.. ಅಬ್ಯೋ” ಎಂದು ಇನ್ನೇನು ಐಸಿಯುಗೆ ಸೇರಿಸಬೇಕಾದ ರೋಗಿಯಂತೆ ನಟಿಸತೊಡಗಿದ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

‘ಸೀತೆ ಹೂ’ ಅರಳುವ ಸಮಯ…: ಶಾಂತಾ ಜಯಾನಂದ್ ಕವನ ಸಂಕಲನಕ್ಕೆ ಎಚ್.ಆರ್.‌ ಸುಜಾತಾ ಮುನ್ನುಡಿ

ನಿಸರ್ಗ ಪ್ರೇಮ, ಸಂಸಾರ ಹೊಂದಾಣಿಕೆ, ಸಾಮಾಜಿಕ ನಡವಳಿಕೆ, ಸಾಮಾಜಿಕ ನ್ಯಾಯ, ಹೆಣ್ಣಿನ ಶೋಷಣೆ, ಎಲ್ಲವನ್ನೂ ಒರೆಗೆ ಹಚ್ಚುವ ಸಾಮರ್ಥ್ಯ ಶಾಂತಾ ಜಯಾನಂದರ ಕವನಗಳಲ್ಲಿ ಕಾಣಸಿಗುತ್ತವೆ. ರೂಪದರ್ಶಿ, ಕುಂಬಳ ಬಳ್ಳಿಯ ಹೂವು, ಸೀತೆಹೂ, ಸೀರೆ ಮಾರುವ ಹುಡುಗ, ವಿಮಾನ ನಿಲ್ದಾಣ, ಬುದ್ಧ, ನೀಲಿ ಕುರಿಂಜಿ, ಪಯಣ, ಸಾಲು ಮರದ ತಿಮ್ಮಕ್ಕ, ಪಂಚ ಪತಿವ್ರತೆಯರು, ಮುಂತಾದ ಕವನಗಳು ಜಗತ್ತಿನ ಚಲನೆಯನ್ನೂ , ಅದರಲ್ಲಿ ಉಳಿಯುವ ನೆನಪನ್ನು, ತಾತ್ವಿಕ ಧೋರಣೆಯನ್ನು ತೆರೆದು ತೋರುತ್ತವೆ.
ಶಾಂತಾ ಜಯಾನಂದ್ ಕವನ ಸಂಕಲನ “ಸೀತೆ ಹೂ” ಕೃತಿಗೆ ಎಚ್.ಆರ್.‌ ಸುಜಾತಾ ಮುನ್ನುಡಿ

Read More

ಉಳಿದು ಹೋಗುವುದೆಂದರೆ… ವಿನಾಯಕ ಅರಳಸುರಳಿ ಅಂಕಣ

ಮುಂದಿನ ಕೆಲ ವರ್ಷಗಳ ಕಾಲ ಆ ಪತ್ರ ಹಾಗೆಯೇ ಇಲ್ಲದ ಅಜ್ಜನ ಹೆಸರನ್ನು ವಿಳಾಸವಾಗಿಸಿಕೊಂಡು ಬಂದು ನಮಗೆಲ್ಲ ಶುಭಾಶಯ ಹೇಳುತ್ತಿತ್ತು. ಕೊನೆಗೊಂದು ದಿನ ಯಾರಿಂದಲೋ ಗೊತ್ತಾದ ವಿಷಯವೇನೆಂದರೆ ಆ ಪತ್ರದ ಬುಡದಲ್ಲಿ ‘ಶುಭಕೋರುವವರು – ABC ಆಚಾರ್’ ಎಂದು ಬರೆದಿರುತ್ತಿದ್ದ, ಅಜ್ಜ ಹೇಳುತ್ತಿದ್ದ ಆಚಾರ್ ಇದ್ದರಲ್ಲ, ಅವರೂ ತೀರಿಹೋಗಿ ಕೆಲ ವರ್ಷಗಳೇ ಆಗಿದ್ದವು! ಅವರ ಮಗನೇ ಅವರ ಹೆಸರಿನಲ್ಲಿ ಈ ಶುಭಾಶಯ ಪತ್ರವನ್ನು ಗ್ರಾಹಕರಿಗೆ ಕಳಿಸುತ್ತಿದ್ದ! ಹೇಗೆ ಅವರ ದೃಷ್ಟಿಯಲ್ಲಿ ತೀರಿಹೋದ ಬಳಿಕವೂ ಅಜ್ಜ ಜೀವಂತವಾಗಿದ್ದನೋ ಹಾಗೇ ನಮ್ಮೆಲ್ಲರ ದೃಷ್ಟಿಯಲ್ಲಿ ಆಚಾರರೂ ಜೀವಂತವಾಗಿದ್ದರು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More
  • 1
  • 2

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ