Advertisement

ಕೀರ್ತಿ ಬೈಂದೂರ್

ಒಳಬಾರದು ಆ ವಸಂತ…:  ವಿನಾಯಕ ಅರಳಸುರಳಿ ಅಂಕಣ

ಮಹಾನಗರಿಯ ಏರಿಯಾಗಳುದ್ದಕ್ಕೂ ಈಗ ಹೂಬಿಟ್ಟ ಮರಗಳು. ಬೀದಿ ಬೀದಿಯಲ್ಲೂ ಉದುರಿ ಬಿದ್ದ ಲಕ್ಷಾಂತರ ಹೂವುಗಳು. ಕಾಯಿ, ಹಣ್ಣು, ಬೀಜವಾಗದೇ ಉದುರಿಹೋದ ಅವನ್ನು ನೀಲಿ ಅಂಗಿ ತೊಟ್ಟ ಬಿಬಿಎಂಪಿ ನೌಕರರು ರಾಶಿ ಮಾಡುವುದನ್ನು ನಿರ್ಭಾವುಕವಾಗಿ ನೋಡಿ ನಮ್ನಮ್ಮ ಕಂಪನಿಯ ಎಂಟ್ರಿ ಗೇಟನ್ನು ಹೊಗ್ಗುತ್ತೇವೆ.‌ ಇಲ್ಲಿ ಹೊಕ್ಕಾಗಿಂದ ಪ್ರಕೃತಿಯ ಇಂಥಾ ಅದೆಷ್ಟೋ ವಸಂತಗಳಿಗೆ ನಮ್ಮೆದೆಯಲ್ಲಿ ಎಂಟ್ರಿ ಬಂದ್ ಮಾಡಿಕೊಂಡಿದ್ದೇವೆ. ಎಷ್ಟೋ ಚೈತ್ರ, ವೈಶಾಖ, ಕಾರ್ತೀಕ, ಮಾಗಿಗಳು ನಮ್ಮನ್ನು ಸೋಕದೆಯೇ ವಿಫಲ ಹೂವಾಗಿ ಉದುರಿಹೋಗಿವೆ. ಹಾಗಾಗಿಯೇ ಆಫೀಸು ಕದ ಮುಚ್ಚಿದ ಒಂದು ಶನಿವಾರ, ಒಂದು ಭಾನುವಾರವನ್ನು ಕಳೆಯಲಾರದೆ ನಿರುಪಾಯರಾಗಿದ್ದೀವೇನೋ ಅನ್ನಿಸಿತು.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ನಿಮಿಷಗಳನ್ನು ಕಡೆಗಣಿಸಿದವರು…: ವಿನಾಯಕ ಅರಳಸುರಳಿ ಅಂಕಣ

ಬಿಡುವಿನ ನಿಮಿಷಗಳಲ್ಲಿ ನಾವು ಕೈಗೊಳ್ಳುವ ಚಿಕ್ಕ ಚಿಕ್ಕ ವ್ಯವಸ್ಥಿತ ಕಾರ್ಯಗಳು ನಮ್ಮ ಒಳಗನ್ನು ರೂಪಿಸುತ್ತವೆ. ಮಲಗಿ ಎದ್ದ ದಿಂಬನ್ನು ಹಾಸಿಗೆಯ ತುದಿಯಲ್ಲಿ ಒಪ್ಪವಾಗಿ ಇಡುವುದಕ್ಕೂ, ಕೊಂಚ ಕೆಳಗೆ ಹಾಗೇ ಬಿಡುವುದಕ್ಕೂ ನಡುವಿನ ಅಂತರ ಕೆಲವೇ ಸೆಂಟೀಮೀಟರುಗಳಷ್ಟಾದರೂ ಅದನ್ನು ಆ ಎರಡು ಬೇರೆ ಬೇರೆ ಜಾಗಗಳಲ್ಲಿಟ್ಟ ವ್ಯಕ್ತಿಯ ವ್ಯಕ್ತಿತ್ವದ ನಡುವಿನ ವ್ಯತ್ಯಾಸ ಮೈಲಿಗಳಷ್ಟು! ಇನ್ನು ನಮ್ಮ ಇನ್ನೊಂದು ಸಮಸ್ಯೆಯೆಂದರೆ ಹೆಚ್ಚಿನ ಸಲ ನಮ್ಮನ್ನು ಹೆಚ್ಚಾಗಿ ತೊಡಗಿಸಿಕೊಂಡಿದ್ದರೂ ಆದಾಯವಲ್ಲದ ಕಾರ್ಯಗಳ ಆಳಕ್ಕೆ ನಾವು ಇಳಿಯುವುದೇ ಇಲ್ಲ‌.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಎಂಜಿ ರೋಡಿನಲ್ಲೊಂದು ಸುತ್ತು: ವಿನಾಯಕ ಅರಳಸುರಳಿ ಅಂಕಣ

ಅದೇನೂ ಭಾರೀ ದೊಡ್ಡ ಪಬ್ಬಲ್ಲದಿದ್ದರೂ ಅಲ್ಲಿ ವೈಭವಗಳಿಗೇನೂ ಕಮ್ಮಿಯಿರಲಿಲ್ಲ. ಮುಂದೆ ಕೆಲವೇ ದಿನಗಳಲ್ಲಿ ಆ ಪಬ್ಬು ಮುಚ್ಚಲ್ಪಟ್ಟು, ಮುಂದೊಮ್ಮೆ ಆ ರಸ್ತೆಯಲ್ಲಿ ಹೋಗುವಾಗ ಮತ್ಯಾವುದೋ ಹೆಸರಿನ ಕಂಪನಿಯೊಂದು ಬೋರ್ಡು ತೊಟ್ಟುಕೊಂಡು ನಿಂತಿರುವುದು ಕಣ್ಣಿಗೆ ಬಿದ್ದಿತ್ತು. ಈ ಮಹಾನಗರಿಯ ಚಂಚಲತೆಯೇ ಅಂಥದ್ದು‌. ನೆನ್ನೆ ಹಳಕಲು-ಪೊದೆಗಳಿದ್ದ ಜಾಗದಲ್ಲಿ ಬೆಳಗಾಗುವಷ್ಟರಲ್ಲಿ ರಂಗ್ ಬಿರಂಗೀ ಕಟ್ಟವೊಂದು ತಲೆಯೆತ್ತಿಬಿಡುತ್ತದೆ. ಮನೆಯಂತೆ ಕಾಣುವ ಬಿಲ್ಡಿಂಗ್ ನೊಳಗೆ ನೂರಿನ್ನೂರು ಉದ್ಯೋಗಿಗಳಿರುವ ಕಂಪನಿಯೇ ಅಡಗಿಕೊಂಡಿರುತ್ತದೆ. ನೆನ್ನೆಯಷ್ಟೇ ಪ್ರಾರ್ಥನಾ ಮಂದಿರವಾಗಿದ್ದು, ಹತ್ತಾರು ಜನರ ಓಂಕಾರದಿಂದ ತುಂಬಿಹೋಗಿದ್ದ ಸಮುಚ್ಚಯವೊಂದು ನಾಳೆಯಾಗುವಷ್ಟರಲ್ಲಿ ಹತ್ತಾರು ಬಾಡಿಬಿಲ್ಡರ್‌ಗಳ ಕಸರತ್ತು ಶಾಲೆಯಾಗಿ ಬದಲಾಗಿಬಿಡುತ್ತದೆ!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ..: ವಿನಾಯಕ ಅರಳಸುರಳಿ ಅಂಕಣ

ಕೆಲವೊಮ್ಮೆ ಅಚಾನಕ್ಕಾಗಿ ಬೆಂಗಳೂರಿನ ಮೇಲೆ ಪ್ರೀತಿಯುಕ್ಕುತ್ತದೆ. ಈ ಶಹರ ನಮಗೆ ಬದಕು ಕೊಟ್ಟಿದೆ, ಇದಿನ್ನು ನಮ್ಮ ಊರು, ನಾನಿನ್ನು ಇಲ್ಲಿಯವನು ಎಂದು ನಂಬಲು ಪ್ರಯತ್ನಿಸುತ್ತೇವೆ.‌ ಆಗಲೇ ನಾವು ಪ್ರತಿದಿನ ವ್ಯವಹರಿಸುವ ಅಂಗಡಿಯವನು ಇದ್ದಕ್ಕಿದ್ದಂತೆ ಹತ್ತು ರೂಪಾಯಿಗಾಗಿ ಬಿರುಮಾತಾಡುತ್ತಾನೆ. ವರ್ಷದಿಂದ ಪಕ್ಕದ ಮನೆಯಲ್ಲೇ ವಾಸವಿರುವ ಹೆಂಗಸು ಯಕಶ್ಚಿತ್ ನ್ಯಾಲೆಯ ಮೇಲಿನ ಬಟ್ಟೆ ತೆಗೆದಿಲ್ಲವೆಂಬ ಕಾರಣಕ್ಕೆ ಜಗಳಕ್ಕೆ ನಿಲ್ಲುತ್ತಾಳೆ. ಹೆಗಲ ಮೇಲೆ ಕೈ ಹಾಕಿಕೊಂಡು ಜೊತೆಗೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮಿತ್ರ ಆಫೀಸು ಬದಲಿಸಿದ ಮರುಕ್ಷಣ ಕರೆ ಸ್ವೀಕರಿಸದೇ, ಮೆಸೇಜೂ ಮಾಡದೇ ಮಾಯವಾಗಿಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಕುದಿಯದ ಕಡಲು: ವಿನಾಯಕ ಅರಳಸುರಳಿ ಅಂಕಣ

ಇಂದಿಗೂ ನನ್ನನ್ನು ಇದೊಂದು ಪ್ರಶ್ನೆ ಕಾಡುತ್ತಲೇ ಇದೆ: ನಾವು ಓದಿಕೊಳ್ಳುವ ಸಾಹಿತ್ಯ, ಕೇಳಿಸಿಕೊಳ್ಳುವ ಕಿವಿ ಮಾತು, ಪ್ರತಿ ದಿನ ನೋಡುವ ಯಾರದ್ದೋ ಬದುಕಿನ ನಿದರ್ಶನಗಳು, ತತ್ವ, ಸಿದ್ಧಾಂತ, ಆದರ್ಶ, ಭಾಷಣಗಳು… ವೈಯಕ್ತಿಕ ಬದುಕಿನ ತಿರುವುಗಳಿಗೆ ಇವು ಹೇಗೆ ಅನ್ವಯವಾಗುತ್ತವೆ? ಯಾರದೋ ವಿಷಯದಲ್ಲಿ ಎಷ್ಟೆಲ್ಲ ಪ್ರಬುದ್ಧವಾಗಿ ದಾರಿ ಹೇಳುವ ನಾವು ನಮ್ಮ ಪ್ರಯಾಣದಲ್ಲಿ ಮಾತ್ರ ಏಕೆ ಓಲಾಡುತ್ತ ನಡೆಯುತ್ತೇವೆ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ