Advertisement

ಜಯಲಕ್ಷ್ಮಿ ಪಾಟೀಲ್

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಇಷ್ಟವಿಲ್ಲದ ಕಾನ್ವೆಂಟಿಗೆ ಹೋಗುವುದಿದೆ
ಬೋರ್ಡು ಮೇಲೆ ಬರೆದ ಅಕ್ಷರಗಳನ್ನು
ಅ ಉ ತಪ್ಪದಂತೆ ಉರು ಹೊಡೆದು
ಹಳೆಯ ಕನ್ನಡಕದ ಟೀಚರ್ ಕೈಯ್ಯಲ್ಲಿ
ಬೆನ್ನು ತಟ್ಟಿಸಿಕೊಳ್ಳುವುದಿದೆ
ಬ್ರಹ್ಮಾಂಡ ಗೆದ್ದ ಸಂತಸದಲ್ಲಿ ಅರಳುವುದಿದೆ”- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಮಲ್ಲಿಗೆ ಮಾಲೆಯ ಮೊಳ ಅಳೆಯುತ್ತಾ
ಆಸೆಗಣ್ಣಾದ ಹರೆಯದವಳ ಹಸಿ ಎದೆಯಲ್ಲಿ
ಬಿಸಿಗನಸು ಮೂಡಿಸಿತು-
ಮತ ಪಂಥಗಳ ಬಿಸಿಯುಸಿರಲ್ಲಿ ಬೆಂದು
ಬಿಸಿನೆತ್ತಿಯಾದವನಲ್ಲಿ ತುಸು ಚಣಗಳ
ಶಾಂತತೆ ಹುಟ್ಟುಹಾಕಿತು-
ರಾವಣನೆದೆಯಲ್ಲಿ ರಾಮನನ್ನು ಸೃಜಿಸಿತು-“- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಅಲ್ಲಿದ್ದ ಟೀಪಾಯಿಯತ್ತ ನೋಡಿದರೆ ಚಹಾದ ಲೋಟ ಇಲ್ಲ. ಹೆಂಡತಿಯಲ್ಲಿ ಕೇಳೋಣ ಎಂದುಕೊಂಡ ಅವರು ಮನೆಯೊಳಗೆ ಹೋದರೆ ಅಲ್ಲಿ ಅವರ ಹೆಂಡತಿ ಇನ್ನೂ ಕೂಡಾ ಫೋನ್‌ನಲ್ಲಿ ಮಾತನಾಡುತ್ತಿದ್ದಾಳೆ. ಡೈನಿಂಗ್ ಟೇಬಲ್ ಮೇಲೆ ಚಹಾದ ಲೋಟ ಇದೆ. ಲೋಟ ಎತ್ತಿಕೊಳ್ಳಹೋದಾಗ ಕೃಷ್ಣಾಚಾರ್ಯರ ಕೈತಗುಲಿ ಲೋಟ ಬಿದ್ದು, ಒಂದು ಲೋಟ ಚಹಾ ಎಲ್ಲ ಚೆಲ್ಲಿಹೋಯಿತು. ಅದನ್ನು ನೋಡಿದ ಅವರ ಹೆಂಡತಿ “ಸರಿ ಕಂದಾ, ನಾನೇ ಮತ್ತೆ ಕಾಲ್ ಮಾಡುತ್ತೇನೆ” ಎಂದು ಹೇಳಿ, ಕಾಲ್ ಕಟ್ ಮಾಡಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಒಂದು ಲೋಟ ಚಹಾ”

Read More

ಕಳೆದ ವರ್ಷದ ಹಲವು ಬಣ್ಣಗಳು..: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಐಸ್‌ಕ್ಯಾಂಡಿ ತೆಗೆದುಕೊಳ್ಳಬೇಕೆಂಬ ಯೋಚನೆ ಮೊದಲು ಬಂದದ್ದು ಅಣ್ಣನಿಗೆ. ಹೋಗಿ ನಿಂತ ನಾವು ಮೂರು ಐಸ್‌ಕ್ಯಾಂಡಿ ಕೊಡಲು ಹೇಳಿದೆವು. ನನಗೆ ಆಮೇಲೆಯೇ ಹೊಳೆದದ್ದು, ಮನೆಯಲ್ಲಿ ಅಮ್ಮ ಇದ್ದಾಳೆ. ಅಮ್ಮನಿಗೆಂದು ಇನ್ನೊಂದು ಐಸ್‌ಕ್ಯಾಂಡಿ ಕೊಡಲು ಹೇಳಿದೆ. ನಾನು ಎರಡು ಕೈಗಳಲ್ಲಿಯೂ ಐಸ್‌ಕ್ಯಾಂಡಿ ಹಿಡಿದು ಹೊರಟೆ. “ಮನೆ ಮುಟ್ಟುವಷ್ಟರಲ್ಲಿ ಅದು ಕರಗಿಹೋಗಿರುತ್ತದೆ. ಬೇಡ” ಎಂದು ಹೇಳಿದ ಅಪ್ಪನ ಮಾತು ನನ್ನ ಕಿವಿಯನ್ನೇ ಹೊಕ್ಕಿರಲಿಲ್ಲ.
೨೦೨೩ನೇ ವರ್ಷ ಬದುಕಿಗೆ ಹಚ್ಚಿದ ಹಲವು ಬಣ್ಣಗಳ ಕುರಿತು ವಿಶ್ವನಾಥ ಎನ್.‌ ನೇರಳಕಟ್ಟೆ ಬರಹ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಸೀಳುವ ಆಯುಧಕ್ಕೂ ಮುತ್ತಿಟ್ಟು
ರಂಧ್ರ ಕೊರೆದರೂ ನೋಯದೆ
ಎಲ್ಲವನ್ನೂ ಒಪ್ಪಿಕೊಳ್ಳುವುದು;
ಅಪ್ಪಿಕೊಳ್ಳುವುದು”-ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ