Advertisement

ಎಸ್. ಗಂಗಾಧರಯ್ಯ

ಮನಸ್ಸೆಂಬೊ ಮಾಯಾವಿ..: ವಿಶ್ವನಾಥ ನೇರಳೆಕಟ್ಟೆ ಬರಹ

ಮನಸ್ಸು ಎನ್ನುವುದೇ ಹಾಗೆ, ಅನೂಹ್ಯವಾದದ್ದು, ಅಸದೃಶವಾದದ್ದು. ಮನುಷ್ಯನಲ್ಲಿರುವ ಅತ್ಯಂತ ಶಕ್ತಿಶಾಲಿ ಹಾಗೂ ಅತೀ ದುರ್ಬಲ ಅಸ್ತ್ರವೆಂದರೆ ಅದು ಮನಸ್ಸು. ನಮ್ಮ ಬದುಕಿನಲ್ಲಿ ಯಾವತ್ತೋ ನಡೆದ ಘಟನೆಗಳು, ನೋಡಿದ ಸನ್ನಿವೇಶಗಳು ಬದುಕಿನ ಇನ್ಯಾವುದೋ ಕಾಲಘಟ್ಟದಲ್ಲಿ ನಮ್ಮ ಮನಸ್ಸನ್ನು ನಿಯಂತ್ರಿಸುವ ಬಗೆಯಂತೂ ಅತ್ಯದ್ಭುತ. ಮನಸ್ಸನ್ನು ನಿಭಾಯಿಸುವ ಕಲೆಯನ್ನು ಕಲಿತುಕೊಂಡರೆ ಮನುಷ್ಯ ಯಶಸ್ಸನ್ನು ಗಳಿಸಿಕೊಳ್ಳುವುದು ಸುಲಭವಾಗುತ್ತದೆ. ಹಾಗೆಂದು ಈ ಪ್ರಯತ್ನದಲ್ಲಿ ಎಡವಿದರೆ ಬದುಕು ಸಮಸ್ಯೆಗಳ ಗೂಡಾಗುತ್ತದೆ.
ನೇರಳೆಕಟ್ಟೆ ಅವರು ಮನಸ್ಸಿನ ಅಗಾಧತೆಯ ಕುರಿತು ಬರೆದ ಲೇಖನ ಇಂದಿನ ಓದಿಗಾಗಿ.

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ವಿಭಾಗಿಸಿ ಒಡೆದುಹಾಕುವ ವ್ಯಾಸಕ್ಕೆ ಬೆದರದೆ
ತ್ರಿಜ್ಯದ ಸಂಪರ್ಕವನ್ನು ಅತಿಯಾಗಿ ಹಚ್ಚಿಕೊಳ್ಳದೆ-
ಹಾಗೆಂದು ದೂರವೂ ಉಳಿಯದೆ
ಸುತ್ತ ಆವರಿಸಿ ನಿಂತ ಪರಿಧಿಗಳೆಲ್ಲವನ್ನೂ ಮೀರಿದ
ನಗುಮುಖದ ವೃತ್ತವಾಗಬೇಕು”- ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ಸರಳ ಸತ್ಯಗಳ ಮರೆತು ಹಸಿರ ಹರಿಯುವ ನಾವು..

ಕಾಡನ್ನೇ ಆಶ್ರಯಿಸಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಆದಿವಾಸಿ ಸಮುದಾಯಗಳು ಅರಣ್ಯ ಪರಿಸರದ ವಿಶಿಷ್ಟತೆಯನ್ನು ಕಾಪಿಟ್ಟುಕೊಳ್ಳುವಲ್ಲಿ ಮಹತ್ತರ ಪಾತ್ರವನ್ನು ಹೊಂದಿವೆ. ಔಪಚಾರಿಕ ಶಿಕ್ಷಣವನ್ನು ಪಡೆಯದೆಯೂ ಇಂತಹ ಸಮುದಾಯಗಳ ಜನರು ಹೊಂದಿರುವ ಜ್ಞಾನ ವಿಸ್ತಾರವಾದುದು. ಅವರಿಗೆ ದೊರೆತ  ತಿಳಿವಳಿಕೆಯು ಅರಣ್ಯಜನ್ಯವಾದುದು.  ಈ ಸಮುದಾಯಗಳ ಆಚರಣೆ- ನಂಬಿಕೆಗಳು ಅರಣ್ಯಕೇಂದ್ರಿತವಾಗಿವೆ ಮತ್ತು ಅರಣ್ಯಪರವಾಗಿವೆ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಪರಿಸರ ಕುರಿತ ಬರಹ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮೂಲೆಯ ಮುರುಕು ಬೆಂಚಿನಲ್ಲಿ ಕುಳಿತು ಆ ವ್ಯಕ್ತಿಯ ಮಾತು- ವರ್ತನೆಗಳೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವೆಂಕಪ್ಪ- ಅಣ್ಣುವಿಗೆ ಇನ್ನಷ್ಟು ಕುತೂಹಲವಾಯಿತು. “ಇವನೊಬ್ಬ ಬೋನಸ್ ಆಯುಷ್ಯದಲ್ಲಿ ಬದುಕುತ್ತಿದ್ದಾನೆ. ಇವನ ದುರ್ಬುದ್ಧಿಯನ್ನು ದೇವರು ಸರಿಯಾಗಿ ಲೆಕ್ಕಕ್ಕೆ ತೆಗೆದುಕೊಂಡಿದ್ದಿದ್ದರೆ ಇಷ್ಟರಲ್ಲಾಗಲೇ ಇವನು ಕೊಟ್ಟಾಯಿ ಆಗಿ, ಇವನ ಮೂರನೇ ವರ್ಷದ ಶ್ರಾದ್ಧ ಮುಗಿದಿರಬೇಕಿತ್ತು” ಎಂದು ರಾಮಣನ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದವರು ಈ ಇಬ್ಬರು, ವೆಂಕಪ್ಪ ಮತ್ತು ಅಣ್ಣು. ಇನ್ನಷ್ಟು ದಿನ ಬದುಕಿರಬೇಕಿತ್ತು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ