Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ನಮ್ಮ ಅಸ್ತಿತ್ವ ಇರುವುದು ನಮ್ಮಿಂದ ಮಾತ್ರ ಅಲ್ಲ. ಸುತ್ತಲಿರುವವರ ಅಸ್ತಿತ್ವದಲ್ಲಿಯೂ ನಮ್ಮ ಅಸ್ತಿತ್ವ ಇದೆ. ಈಗ ನೋಡು, ನಾವು ಬದುಕಬೇಕಾದರೆ ಆಹಾರ ಸೇವಿಸಬೇಕು. ಆಹಾರ ಬೆಳೆಯುವ ರೈತನೇ ಇಲ್ಲದಿದ್ದರೆ ನಮಗೆ ಅಸ್ತಿತ್ವವೇ ಇಲ್ಲ. ನಾವೀಗ ತಿನ್ನುತ್ತಿರುವುದನ್ನು ಬೆಳೆದದ್ದು ಯಾರು ಎನ್ನುವುದು ನಮಗೆ ಗೊತ್ತಿಲ್ಲದಿರಬಹುದು. ಆದರೆ ಆ ಗೊತ್ತಿರದ ವ್ಯಕ್ತಿಯೇ ನಮ್ಮ ಅಸ್ತಿತ್ವಕ್ಕೆ ಕಾರಣವಾಗಿರುತ್ತಾನೆ. ಆ ರೈತನಿಗೂ ಕೂಡಾ ನಮ್ಮ ಅವಶ್ಯಕತೆ ಇರುತ್ತದೆ.”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಎರಡು ಹೃದಯ ಒಂದು ಜೀವ” ನಿಮ್ಮ ಓದಿಗೆ

Read More

ಗತಕಾಲದ ಚಿನ್ನದ ಗಣಿ ಕೊಲಂಬಿಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಕೊಲಂಬಿಯಾದಲ್ಲಿ ದೊಡ್ಡವರು ಮಾತ್ರವಲ್ಲ, ಚಿಕ್ಕ ಮಕ್ಕಳೂ ಸಹ ಕಾಫಿಪ್ರಿಯರು. ಊಟದ ನಂತರವೂ ಸಹ ಕಾಫಿ ಕುಡಿಯುವ ಅಭ್ಯಾಸವನ್ನು ಇವರು ಇಟ್ಟುಕೊಂಡಿದ್ದಾರೆ. ರಾತ್ರಿಯ ಊಟದ ನಂತರ ಹೆತ್ತವರೇ ತಮ್ಮ ಮಕ್ಕಳಿಗೆ ಕಾಫಿಯನ್ನು ಕುಡಿಯುವುದಕ್ಕೆ ಕೊಡುತ್ತಾರೆ. ಇದನ್ನು ‘ಕಾಫಿ ಕಾನ್ ಲೆಚೆ’ ಎಂದು ಕೊಲಂಬಿಯನ್ ಭಾಷೆಯಲ್ಲಿ ಕರೆಯಲಾಗುತ್ತದೆ. ಅಂದರೆ ‘ಹಾಲಿನ ಜೊತೆಗೆ ಕಾಫಿ’ ಎಂದರ್ಥ. ಮಕ್ಕಳಿಗೆ ಹಾಲಿನ ಜೊತೆಗೆ ಬೆರೆಸಿದ ಲೈಟಾದ ಕಾಫಿಯನ್ನು ಕೊಡುವ ದೊಡ್ಡವರು ಸ್ಟ್ರಾಂಗ್ ಕಾಫಿಯನ್ನೇ ಕುಡಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ನಗುವಿನ ನಾಡು ಥೈಲ್ಯಾಂಡ್‌: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಆನೆಯನ್ನು ಕೇವಲ ಒಂದು ಪ್ರಾಣಿಯಾಗಿ ಪರಿಭಾವಿಸಿಕೊಳ್ಳದೆ ಅದನ್ನು ಪೂಜನೀಯ ರೀತಿಯಲ್ಲಿ ಕಂಡ ದೇಶ ಥೈಲ್ಯಾಂಡ್. ಇಲ್ಲಿನ ಸಂಸ್ಕೃತಿ ಸಂಪ್ರದಾಯಗಳಲ್ಲಿ ಆನೆಗೆ ವಿಶೇಷವಾದ ಮಹತ್ವವಿದೆ. ಆನೆ ಇಲ್ಲಿನ ರಾಷ್ಟ್ರೀಯ ಪ್ರಾಣಿ ಎನಿಸಿಕೊಂಡಿದೆ. ಆನೆಗಳನ್ನು ಪೂಜಿಸುವ ವಿಶಿಷ್ಟ ಸಂಪ್ರದಾಯ ಇಲ್ಲಿಯದ್ದು. ಆನೆಯ ಅನೇಕ ಚಿತ್ರಗಳನ್ನು, ಕಲಾಕೃತಿಗಳನ್ನು ಇಲ್ಲಿ ಕಾಣಬಹುದು. 1917ನೇ ಇಸವಿಯವರೆಗೆ ಥೈಲ್ಯಾಂಡ್‌ನ ರಾಷ್ಟ್ರಧ್ವಜದಲ್ಲಿಯೂ ಸಹ ಆನೆಯ ಚಿತ್ರವನ್ನು ಕಾಣಬಹುದಾಗಿತ್ತು. ಉಳಿದೆಲ್ಲಾ ಆನೆಗಳಿಗಿಂತಲೂ ಶ್ವೇತವರ್ಣದ ಆನೆಗೆ ಇಲ್ಲಿ ಹೆಚ್ಚಿನ ಆದ್ಯತೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಥೈಲ್ಯಾಂಡ್ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಮೌಲ್ಯಗಳು ಹಿಂದುಮುಂದಾಗುವ ಸಮಯದಲ್ಲಿ…: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಬ್ಯಾಗ್ ತೆರೆದಾಗ ಅದರೊಳಗೆ ಕಂಡ ಕಂತೆ ಕಂತೆ ನೋಟುಗಳು ಒಂದು ಕ್ಷಣಕ್ಕೆ ಯೂಸುಫ್‌ನ ಅಂತರಂಗದ ನೈತಿಕತೆಯ ಪರೀಕ್ಷಾರಂಗವಾಗುತ್ತದೆ. ಈ ಹಣವನ್ನಿಟ್ಟುಕೊಂಡು ಮಗಳ ಮದುವೆ ಮಾಡಿಮುಗಿಸಬಹುದು ಎಂಬ ಯೋಚನೆ ಬಂದರೂ ಅದನ್ನು ಹತ್ತಿಕ್ಕಿಕೊಂಡು ಬ್ಯಾಗನ್ನು ಆ ಶ್ರೀಮಂತನಿಗೆ ಹಿಂದಿರುಗಿಸುವ ನಿರ್ಧಾರ ಮಾಡುತ್ತಾನೆ ಯೂಸುಫ್. ಅಂತೆಯೇ ಸಿರಿವಂತನ ಮನೆಯನ್ನು ಹುಡುಕಿಹೋಗಿ ಆ ಬ್ಯಾಗನ್ನು ಕೊಟ್ಟುಬರುತ್ತಾನೆ.
ಬದುಕಿನ ಮೌಲ್ಯಗಳ ಸುತ್ತ ಹೆಣೆದ ಕತೆಗಳ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ