Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಆಡುವವನ ಕೈ ಚಳಕದಲಿ ಎಲ್ಲ ಅಡಗಿದೆ…: ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆರ್ಟ್ಸ್ ಗೇಮ್‌ಗಳು ಗೇಮಿಂಗ್ ಪ್ರಕಾರಗಳಲ್ಲಿ ವಿಶಿಷ್ಟವಾದವು. ಆಟದ ವಿಶಿಷ್ಟತೆ ಇಲ್ಲಿ ಮುಖ್ಯವಾಗುವುದಿಲ್ಲ. ಕಲೆಯೇ ಪ್ರಮುಖ. ನೋಡುವುದಕ್ಕೆ ಆಕರ್ಷಕವಾಗಿರುವ, ಬಹಳ ಕ್ರಿಯೇಟಿವ್ ಆಗಿರುವ ಗೇಮ್‌ಗಳಿವು. ವಿಡಿಯೋ ಗೇಮ್ಸ್ ಮೂಲಕ ನಮ್ಮ ಆಸಕ್ತಿಯ ಕೆಲವು ವಿಷಯಗಳನ್ನು ಕಲಿತುಕೊಳ್ಳುವುದಕ್ಕೆ ಸಾಧ್ಯವಿದೆ. ಇವುಗಳು ಶೈಕ್ಷಣಿಕ ಗೇಮ್‌ಗಳು. ಭಾಷೆ, ಗಣಿತ, ಟೈಪಿಂಗ್ ಕುರಿತಾದ ಸರಳ ಗೇಮ್‌ಗಳು ಇದಕ್ಕೆ ಉದಾಹರಣೆಗಳು. ವ್ಯಾಯಾಮದಂತಹ ಚಟುವಟಿಕೆ ಮಾಡಲು ಅವಕಾಶ ಮಾಡಿಕೊಡುವ ಗೇಮ್‌ಗಳನ್ನು ಎಕ್ಸರ್ ಗೇಮ್ ಎನ್ನಲಾಗುತ್ತದೆ.
ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

Read More

ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಹನಿಗವಿತೆಗಳು

“ಅನ್ಯಮತೀಯರ ಮೇಲೆಸೆದ
ಕಲ್ಲನ್ನು ಎತ್ತಿಕೊಂಡು ನೋಡಿದೆ
ಅಲ್ಲಿ ನನ್ನಿಷ್ಟದ ದೇವರು
ಕಣ್ಣೀರು ಸುರಿಸುತ್ತಿದ್ದ” – ವಿಶ್ವನಾಥ ಎನ್. ನೇರಳಕಟ್ಟೆ ಬರೆದ ಹನಿಗವಿತೆಗಳು

Read More

ಬಚ್ಚಲಿನ ಬಗೆಗೊಂದು ಭಾವಸ್ಫುರಣ: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಹಾಗೆ ನೋಡಿದರೆ ಮನೆಯ ಉಳಿದ ಎಲ್ಲಾ ಅಂಗಗಳಿಗಿಂತ ಮಿಗಿಲಾಗಿ ಬಚ್ಚಲುಮನೆ ರಾಜಮರ್ಯಾದೆಯನ್ನು ಪಡೆದುಕೊಳ್ಳುತ್ತದೆ. ಅಡುಗೆ ಕೋಣೆ ಎನ್ನುತ್ತೇವೆ. ಮಲಗುವ ಕೋಣೆ ಎನ್ನುತ್ತೇವೆ. ದೇವರ ಕೋಣೆ ಎನ್ನುತ್ತೇವೆ. ಆದರೆ ಬಚ್ಚಲನ್ನು ಬಚ್ಚಲು ಮನೆ ಎನ್ನುತ್ತೇವೆ. ಮನೆಯ ಒಂದು ಭಾಗವಾಗಿರುವ ಬಚ್ಚಲನ್ನು ಇನ್ನೊಂದು ಮನೆಯೇ ಎಂಬಂತೆ ಪರಿಗಣಿಸುತ್ತೇವೆ. ಮನೆಯ ಬೇರಾವ ಕೋಣೆಗಳಿಗೂ ಸಿಗದ ಪ್ರಾಶಸ್ತ್ಯ ಬಚ್ಚಲುಮನೆಗಿದೆ. ಉಳಿದ ಕೋಣೆಗಳು ಈ ತಾರತಮ್ಯವನ್ನು ಒಪ್ಪಿಕೊಳ್ಳದೆ ಪ್ರತಿಭಟಿಸದಿರುವುದೇ ಆಶ್ಚರ್ಯ!
ಬಚ್ಚಲಿನ ಕುರಿತ ಹಲವು ವಿಚಾರಗಳನ್ನು ಬರೆದಿದ್ದಾರೆ ವಿಶ್ವನಾಥ ಎನ್‌ ನೇರಳಕಟ್ಟೆ

Read More

ಮನಸ್ಸೆಂಬೊ ಮಾಯಾವಿ..: ವಿಶ್ವನಾಥ ನೇರಳೆಕಟ್ಟೆ ಬರಹ

ಮನಸ್ಸು ಎನ್ನುವುದೇ ಹಾಗೆ, ಅನೂಹ್ಯವಾದದ್ದು, ಅಸದೃಶವಾದದ್ದು. ಮನುಷ್ಯನಲ್ಲಿರುವ ಅತ್ಯಂತ ಶಕ್ತಿಶಾಲಿ ಹಾಗೂ ಅತೀ ದುರ್ಬಲ ಅಸ್ತ್ರವೆಂದರೆ ಅದು ಮನಸ್ಸು. ನಮ್ಮ ಬದುಕಿನಲ್ಲಿ ಯಾವತ್ತೋ ನಡೆದ ಘಟನೆಗಳು, ನೋಡಿದ ಸನ್ನಿವೇಶಗಳು ಬದುಕಿನ ಇನ್ಯಾವುದೋ ಕಾಲಘಟ್ಟದಲ್ಲಿ ನಮ್ಮ ಮನಸ್ಸನ್ನು ನಿಯಂತ್ರಿಸುವ ಬಗೆಯಂತೂ ಅತ್ಯದ್ಭುತ. ಮನಸ್ಸನ್ನು ನಿಭಾಯಿಸುವ ಕಲೆಯನ್ನು ಕಲಿತುಕೊಂಡರೆ ಮನುಷ್ಯ ಯಶಸ್ಸನ್ನು ಗಳಿಸಿಕೊಳ್ಳುವುದು ಸುಲಭವಾಗುತ್ತದೆ. ಹಾಗೆಂದು ಈ ಪ್ರಯತ್ನದಲ್ಲಿ ಎಡವಿದರೆ ಬದುಕು ಸಮಸ್ಯೆಗಳ ಗೂಡಾಗುತ್ತದೆ.
ನೇರಳೆಕಟ್ಟೆ ಅವರು ಮನಸ್ಸಿನ ಅಗಾಧತೆಯ ಕುರಿತು ಬರೆದ ಲೇಖನ ಇಂದಿನ ಓದಿಗಾಗಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ