Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ದೊಡ್ಡ ದ್ವೀಪ ಅಕ್ಷರ ದೀಪ ಕ್ಯೂಬಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

1903ರಿಂದ ಕ್ಯೂಬಾ ದೇಶವು ಗ್ವಾಂಟನಾಮೊ ಹೆಸರಿನ ಕೊಲ್ಲಿಯನ್ನು ಅಮೇರಿಕಾಕ್ಕೆ ಗುತ್ತಿಗೆ ನೀಡಿತ್ತು. ಇದಕ್ಕೆ ಸಂಬಂಧಪಟ್ಟ ಒಪ್ಪಂದವನ್ನು ಮಾಡಿಕೊಂಡಿತ್ತು. ಇದರ ಹೊರತಾಗಿಯೂ ಕೆರಿಬಿಯನ್ ಸಮುದ್ರದಲ್ಲಿ ಸೈನಿಕ ನೆಲೆಯಾಗಿ ಈ ಕೊಲ್ಲಿಯನ್ನು ಬಳಸಲು ಅಮೇರಿಕಾ ಪ್ರಯತ್ನಿಸಿತ್ತು. ಶಸ್ತ್ರಾಸ್ತ್ರಗಳ ಬಳಕೆಯ ಮೂಲಕ ಕ್ಯೂಬಾವನ್ನು ಮೆತ್ತಗಾಗಿಸುವ ಪ್ರಯತ್ನವನ್ನೂ ನಡೆಸಿತ್ತು. ಅಮೇರಿಕಾದ ಈ ಬಗೆಯ ನಡತೆಯಿಂದಾಗಿ ಅದರ ಜೊತೆಗಿನ ಒಪ್ಪಂದ ಅನ್ಯಾಯಕರವಾದದ್ದು ಎನ್ನುವುದು ಕ್ಯೂಬಾದ ಜನರ ಅರಿವಿಗೆ ಬಂತು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಕ್ಯೂಬಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ನಾಗರಿಕತೆಯಿಂದ ಅನಾಗರಿಕತೆಯೆಡೆಗೆ ಇರಾಕ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

2003ರಲ್ಲಿ ಇರಾಕ್ ಯುದ್ಧದ ಮೂಲಕ ಈ ನಿರ್ದಯಿಯ ಆಡಳಿತ ಕೊನೆಗೊಂಡಾಗಲೇ ಇರಾಕ್‌ನ ಜನತೆ ನಿರಾಳತೆಯ ನಿಟ್ಟುಸಿರು ಬಿಟ್ಟದ್ದು. ಇರಾಕ್‌ನಲ್ಲಿ ರಾಜಕೀಯ ಸಂಕೀರ್ಣತೆ ಇರುವುದರ ಜೊತೆಗೆ ರಾಜಕೀಯ ವಿಡಂಬನೆಯೂ ಇದೆ. ಅಲ್ಲಿನ ಜನರು ತಮಾಷೆಯ ಮೂಲಕವೇ ರಾಜಕಾರಣಿಗಳಿಗೆ ಚುರುಕು ಮುಟ್ಟಿಸುತ್ತಾರೆ. ಆಡಳಿತ ವ್ಯವಸ್ಥೆಯ ಅಸಮರ್ಥತೆಯಿಂದಾಗಿ ದಿನನಿತ್ಯದ ಜೀವನದಲ್ಲಿ ಉಂಟಾಗುವ ಏರಿಳಿತಗಳನ್ನು ನಿಭಾಯಿಸಬೇಕಾದರೆ ಇಂತಹ ಹಾಸ್ಯಪ್ರವೃತ್ತಿ ಇರಬೇಕಾಗುತ್ತದೆ ಎನ್ನುವುದು ನಿಜ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ ಕತೆ

ಪಕ್ಕದ ಮನೆಯ ಹುಡುಗಿ ವಿಹಿತಾ ತರಗತಿಗೆ ಫಸ್ಟ್ ಬಂದಿದ್ದಳು. ಲಚ್ಚಿಗೆ ಎರಡನೇ ಸ್ಥಾನ. ಈ ವಿಷಯ ತಿಳಿದಾಗಲೇ ಸೀಮಾ ಅಪ್‌ಸೆಟ್ ಆಗಿದ್ದಳು. ವಿಹಿತಾಳ ತಾಯಿಯ ಜೊತೆಗೆ ಸರಿಯಾಗಿ ಮಾತನಾಡುವುದಕ್ಕೂ ಆಗಿರಲಿಲ್ಲ ಅವಳಿಗೆ. ಅಕ್ಕನ ಮಗಳು ನಾಲ್ಕು ವರ್ಷಗಳಿಂದಲೂ ತರಗತಿಗೆ ಫಸ್ಟ್ ಬರುತ್ತಲೇ ಇದ್ದಾಳೆ. ಸ್ನೇಹಿತೆಯ ಮಗ ವಿಹಾನ್ ಕೀಬೋರ್ಡ್ ತರಗತಿಗೆ ಹೋಗುತ್ತಲೇ ಕಲಿಕೆಯಲ್ಲೂ ಎರಡನೇ ಸ್ಥಾನ ಪಡೆಯುತ್ತಿದ್ದಾನೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ಲಚ್ಚಿಯ ಒಂದು ದಿನ” ನಿಮ್ಮ ಓದಿಗೆ

Read More

ಗುರುತರ ಗುರಿಯೆಡೆಗೆ ಓಡಲಿ ಜಮೈಕಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಜಮೈಕಾದ ಜನರು ಕಲೆಗಳ ಬಗೆಗೆ ಅತೀವ ಆಸಕ್ತಿಯನ್ನು ಹೊಂದಿದ್ದಾರೆ. ದೃಶ್ಯ ಕಲೆಗಳು ಮತ್ತು ಪ್ರದರ್ಶನ ಕಲೆಗಳು ಜಮೈಕಾದ ಜನರ ಬದುಕಿನ ಅವಿಭಾಜ್ಯ ಅಂಗಗಳು. ಕಲ್ಪನೆ, ಉತ್ಸುಕತೆ ಮತ್ತು ಸೃಜನಶೀಲತೆಗಳ ಮೂಲಕ ವಿವಿಧ ಕಲೆಗಳನ್ನು ರೂಪಿಸಿಕೊಂಡಿದೆ ಜಮೈಕಾ. ಕಲೆಗಳು ಅಲ್ಲಿಯ ಜನರ ಬದುಕಿನ ಸ್ಫೂರ್ತಿಯ ಸೆಲೆಯಾಗಿದೆ. ಬ್ಯಾರಿಂಗ್ಟನ್ ವ್ಯಾಟ್ಸನ್, ಆಲ್ಬರ್ಟ್ ಹುಯಿ ಇವರು ಜಮೈಕಾದ ಚಿತ್ರಕಲಾವಿದರು. ಎಡ್ನಾ ಮ್ಯಾನ್ಲಿ ಎನ್ನುವವರು ಪ್ರಸಿದ್ಧ ಶಿಲ್ಪಿಯಾಗಿದ್ದಾರೆ. ಇವರು ಜಮೈಕಾದಲ್ಲಿ ಮಾತ್ರವಲ್ಲದೆ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ