Advertisement

ಡಾ. ಸಿ. ಬಿ. ಐನಳ್ಳಿ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ತೀರದಲ್ಲಿ ಹರಹಿಕೊಂಡ
ಮರಳಿನ ಕಣಗಳು
ಅವನಲ್ಲಿ ಅಗಾಧತೆಯ
ಅರಿವನ್ನು ಮೂಡಿಸುತ್ತವೆ
ಎನಗಿಂತ ಕಿರಿಯರಿನ್ನಿಲ್ಲ
ಎನ್ನುವಂತೆ ಮಾಡುತ್ತವೆ”- ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಪರಿಸರ ರಕ್ಷಣೆಯ ಕಠಿಣ ವಜ್ರ ನಮೀಬಿಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನಿಸರ್ಗವನ್ನು ಆಧಾರವಾಗಿಟ್ಟುಕೊಂಡ ಜೀವನಶೈಲಿಯನ್ನು ಈಗಲೂ ಉಳಿಸಿಕೊಂಡಿರುವ ಅಲ್ಲಿನ ಹಲವು ಸಮುದಾಯಗಳು ಬದುಕನ್ನು ನಡೆಸುವುದರ ಜೊತೆಗೆ ಪ್ರಕೃತಿಯನ್ನೂ ಉಳಿಸಿ, ಬೆಳೆಸುತ್ತಿವೆ. ಇದರಿಂದಾಗಿ ನಮೀಬಿಯಾದ ಪ್ರವಾಸೋದ್ಯಮವೂ ಸಹ ಅಭಿವೃದ್ಧಿ ಕಂಡಿದೆ. ಪ್ರವಾಸೋದ್ಯಮಕ್ಕೆ ದೊರಕಿರುವ ಉತ್ತೇಜನದಿಂದಾಗಿ ಈ ಬುಡಕಟ್ಟು ಸಮುದಾಯಗಳು ಸಶಕ್ತಗೊಳ್ಳುತ್ತಿವೆ. ನಮೀಬಿಯಾದ ಬುಡಕಟ್ಟು ಸಮುದಾಯಗಳು ಅಲ್ಲಿನ ನಿಸರ್ಗವನ್ನು ಸಂರಕ್ಷಿಸಲು ನೀಡಿರುವ ಕೊಡುಗೆಯನ್ನು ವಿಶ್ವ ವನ್ಯಜೀವಿ ನಿಧಿ ಎಂಬ ಅಂತಾರಾಷ್ಟ್ರೀಯ ಸಂಘಟನೆಯು ಗುರುತಿಸಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಬಟ್ಟೆ ಅಂಗಡಿಯಲ್ಲಿದ್ದ ಸುಮುಖ ಪ್ಯಾಂಟೊಂದರ ಕಡೆಗೆ ಕೈ ತೋರಿಸಿದ್ದ. ಬಟ್ಟೆ ತೋರಿಸುತ್ತಿದ್ದ ಯುವತಿ ಇವನು ಕೈತೋರಿಸಿದೆಡೆಗೆ ನೋಡಿದಳು. ಆರು ಜೇಬುಗಳು, ಸುತ್ತಮುತ್ತೆಲ್ಲಾ ಉದ್ದುದ್ದ ಬಳ್ಳಿ ಬೆಳೆದಂತಿದ್ದ ಗಿಲಿಗಿಲಿ ಪ್ಯಾಂಟೊಂದು ಅಲ್ಲಿತ್ತು. ಅದು ಸುಮುಖ ಯಾವಾಗಲೂ ಹೋಗುತ್ತಿದ್ದ ಬಟ್ಟೆ ಅಂಗಡಿ. ಅದರ ಮಾಲೀಕರಿಂದ ಹಿಡಿದು ಎಲ್ಲರನ್ನೂ ಪರಿಚಯವಿತ್ತು ಸುಮುಖನಿಗೆ. ಈಗ ಬಟ್ಟೆ ತೋರಿಸುತ್ತಿದ್ದ ಯುವತಿಯೂ ಸಹ ಇವನ ಪರಿಚಯದವಳೇ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಕತೆ “ಸುಮುಖ ಮತ್ತು ಗಾಂಧಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಯುದ್ಧದ ಬಿಸಿ ನೀಗಿಕೊಂಡು ತಂಪಗಾಗಬೇಕಿದೆ ರಷ್ಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಕಮ್ಯುನಿಸ್ಟ್‌ ಆಳ್ವಿಕೆಯ ಸಮಯದಲ್ಲಿ ರಷ್ಯನ್ ಬರಹಗಾರರು ನಿರ್ಬಂಧಕ್ಕೆ ಒಳಗಾದರು. ಮುಕ್ತವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾಗದ ದುಃಸ್ಥಿತಿಗೆ ಸಿಲುಕಿಕೊಂಡರು. ಮರೀನಾ ಟ್ವೆಟೇವಾ ಅವರು ರಷ್ಯಾದ ಹೊರಗಡೆ ಇದ್ದುಕೊಂಡೇ ಕಾವ್ಯರಚನೆ ಮಾಡಿದ್ದು, ರಷ್ಯಾಕ್ಕೆ ಮರಳಿ ಬಂದು ಎರಡೇ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು ಇವೆಲ್ಲಾ ಸಾಹಿತ್ಯ ಕ್ಷೇತ್ರದ ಮೇಲೆ ಕಮ್ಯುನಿಸ್ಟ್‌ ಪ್ರಾಬಲ್ಯವನ್ನು ಸೂಚಿಸುತ್ತವೆ. ಸ್ಟಾಲಿನ್ ಮರಣದ ಬಳಿಕ ರಷ್ಯನ್ ಸಾಹಿತ್ಯದಲ್ಲಿ ಹೊಸ ಬಗೆಯ ಬರಹಗಳು ಮತ್ತು ಪ್ರವೃತ್ತಿಗಳು ಕಾಣಿಸಿಕೊಂಡವು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ. ದುರ್ಗುಣಗಳಿಗೆ ಈಡಾದರೆ ಸಿದ್ಧಿಯಾದ ಮಂತ್ರಾಸ್ತ್ರಗಳೂ ಪ್ರಯೋಜನಕ್ಕೆ ಬರುವುದಿಲ್ಲ ಮೊದಲಾದ ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಅರ್ಜುನನ ಚಾಪವಿದ್ಯಾ ಚಾತುರ್ಯದ ಸಮಯದಲ್ಲಿ ಕರ್ಣ ಅರ್ಜುನನ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಜನರಿಗೆ ಅವನ ಬೆಂಬಲ ದೊರಕುತ್ತದೆ.
ರಾಧಾಕೃಷ್ಣ ಕಲ್ಚಾರ್ ಬರೆದ “ಕವಚ” ಕಾದಂಬರಿಯ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ