Advertisement

ಎಸ್. ಗಂಗಾಧರಯ್ಯ

ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ. ದುರ್ಗುಣಗಳಿಗೆ ಈಡಾದರೆ ಸಿದ್ಧಿಯಾದ ಮಂತ್ರಾಸ್ತ್ರಗಳೂ ಪ್ರಯೋಜನಕ್ಕೆ ಬರುವುದಿಲ್ಲ ಮೊದಲಾದ ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಅರ್ಜುನನ ಚಾಪವಿದ್ಯಾ ಚಾತುರ್ಯದ ಸಮಯದಲ್ಲಿ ಕರ್ಣ ಅರ್ಜುನನ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಜನರಿಗೆ ಅವನ ಬೆಂಬಲ ದೊರಕುತ್ತದೆ.
ರಾಧಾಕೃಷ್ಣ ಕಲ್ಚಾರ್ ಬರೆದ “ಕವಚ” ಕಾದಂಬರಿಯ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ

Read More

ಉತ್ತರ ಕೊರಿಯಾ, ಇದು ಸರಿಯಾ?: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಉತ್ತರ ಕೊರಿಯಾದಲ್ಲಿ ಕಲೆ, ಸಂಸ್ಕೃತಿ ಇವೆಲ್ಲವೂ ಕೂಡಾ ಬೆಳವಣಿಗೆ ಕಾಣುತ್ತಿರುವುದು ರಾಷ್ಟ್ರೀಯತೆಯ ಹೆಸರಿನಲ್ಲಿ. ಎಲ್ಲಾ ರೀತಿಯ ಕಲಾಕೃತಿಗಳ, ಪ್ರದರ್ಶನ ಕಲೆಗಳ ಅಂತಿಮ ಉದ್ದೇಶ ರಾಷ್ಟ್ರದ ಪ್ರಗತಿ ಮತ್ತು ರಾಷ್ಟ್ರಕ್ಕೆ ಸಾಂಸ್ಕೃತಿಕ ಅಸ್ಮಿತೆಯನ್ನು ಒದಗಿಸಿಕೊಡುವುದು ಎಂಬ ಭಾವನೆಯನ್ನು ಬಲವಾಗಿ ರೂಪಿಸಲಾಗುತ್ತಿದೆ. ಉತ್ತರ ಕೊರಿಯಾದ ಪ್ರಮುಖ ಶಿಲ್ಪಕಲಾಕೃತಿಗಳು ಯಾವುವು ಎಂದು ಗಮನಹರಿಸಿದಾಗ ಕಿಮ್ ಇಲ್ ಸುಂಗ್ ಅವರ ಪ್ರತಿಮೆಗಳು ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತವೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಆದರೂ ದಕ್ಕಿದ್ದು ಏನಿಲ್ಲ
ತತ್ಕಾಲದ ಸೊತ್ತಾಗಿ ಹೋಯಿತು
ನನ್ನ ದೇಹಬಲದ ಪ್ರದರ್ಶನ
ತಂತ್ರ- ಕುತಂತ್ರಗಳ ನಡುವೆ
ಬೌದ್ಧಿಕತೆ ದೈಹಿಕತೆಗಳ
ಸೆಣಸಾಟದಲ್ಲಿ ನಾನು
ಹತ್ತರಲ್ಲಿ ಒಂದಾಗದೆ
ಹತ್ತರೊಡನೆ ಇನ್ನೊಂದಾಗಿ
ಉಳಿದುಬಿಟ್ಟೆ”-ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ತಿಳಿವಳಿಕೆಯ ಚಳುವಳಿಗಳಿಂದ ಅರಳಿನಿಂತ ಫ್ರಾನ್ಸ್: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಫ್ರಾನ್ಸ್ ಕಲಾವಲಯದ ಕುರಿತ ವಿವರಣೆಯು ಪ್ಯಾಬ್ಲೋ ಪಿಕಾಸೊ ಅವರ ಪ್ರಸ್ತಾಪವಿಲ್ಲದೆ ಪೂರ್ಣವಾಗಲಾರದು. ಶಿಲ್ಪಕಲೆಯನ್ನು ಪ್ರಧಾನವಾಗಿಸಿಕೊಂಡು ಇತರ ಕಲೆಗಳಲ್ಲಿಯೂ ತೊಡಗಿಸಿಕೊಂಡ ಇವರು ಸ್ಪೇನ್ ಮೂಲದವರು. ಇಪ್ಪತ್ತನೇ ಶತಮಾನದ ಫ್ರಾನ್ಸ್ ಶಿಲ್ಪಕಲೆಯ ಮೊದಲ ಅರ್ಧಭಾಗ ಪಿಕಾಸೊ ಅವರಿಗೆ ಮೀಸಲಾಗಿದೆ. ‘ಮ್ಯಾನ್ ವಿದ್ ಅ ಲ್ಯಾಂಬ್’ ಎನ್ನುವ ಅವರ ಶಿಲ್ಪಕಲಾ ಕೆತ್ತನೆಯಲ್ಲಿ ಮಾನವೀಯತೆ ಅಭಿವ್ಯಕ್ತಗೊಂಡಿದ್ದರೆ, ‘ಡೆತ್ಸ್ ಹೆಡ್’ ಎನ್ನುವ ಕೆತ್ತನೆಯು ಯುದ್ಧದ ಭೀಕರತೆಯನ್ನು ಮನದಟ್ಟು ಮಾಡಿಕೊಡುವಂತಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಪಶ್ಚಿಮ ಪೂರ್ವಗಳ ಅಪೂರ್ವ ಸಂಗಮ ಟರ್ಕಿ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಸಂವಿಧಾನದ ಪ್ರಕಾರ ಟರ್ಕಿ ಜಾತ್ಯತೀತ ರಾಷ್ಟ್ರವಾಗಿದ್ದರೂ, ಅನುದಿನದ ಬದುಕಿನಲ್ಲಿ ಅದು ಪಾಲನೆಯಾಗುತ್ತಿಲ್ಲ. ಶಾಲೆಗಳಲ್ಲಿ ಧಾರ್ಮಿಕ ವಿಚಾರಗಳನ್ನು ಬೋಧಿಸಲಾಗುತ್ತಿದೆ. ಧರ್ಮವನ್ನು ಮಕ್ಕಳಿಗೆ ಕಲಿಸುವುದಕ್ಕಾಗಿಯೇ ಪಠ್ಯಕ್ರಮವನ್ನು ರೂಪಿಸಲಾಗಿದೆ. ಟರ್ಕಿಯಲ್ಲಿರುವ ಹೆಚ್ಚಿನ ಜನರು ಮುಸ್ಲಿಂ ಧರ್ಮಕ್ಕೆ ನಿಷ್ಠರಾಗಿದ್ದು, ಇಸ್ಲಾಂ ಜಗತ್ತು ಸ್ಥಾಪನೆಯಾಗಬೇಕೆಂಬ ಆಶಯವನ್ನು ಇಟ್ಟುಕೊಂಡಿದ್ದಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ “ಟರ್ಕಿ” ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ