Advertisement

Category: ಅಂಕಣ

ಒಗ್ಗಟ್ಟು, ಒಡಕುಗಳ ವಿಚಲತೆ: ಡಾ. ವಿನತೆ ಶರ್ಮ ಬರೆಯುವ ಅಂಕಣ

ಆಂಗ್ಲೋ-ಆಸ್ಟ್ರೇಲಿಯನ್ ಅಂದರೆ ಬಿಳಿ-ವಸಾಹತುಶಾಹಿ-ಸೆಟ್ಟ್ಲರ್ ಸಮಾಜಕ್ಕೆ ಸೇರಿದ ಪೌಲಿನ್ ಹ್ಯಾನ್ಸನ್ ತನ್ನನ್ನು ಕಟ್ಟಾ ಆಸ್ಟ್ರೇಲಿಯನ್ ಎಂದು ಕರೆದುಕೊಳ್ಳುತ್ತಾರೆ. ಅಂದರೆ ಬ್ರಿಟಿಷರು ಹುಟ್ಟುಹಾಕಿದ ಬಿಳಿ ಆಸ್ಟ್ರೇಲಿಯಾ. ಆಸ್ಟ್ರೇಲಿಯಾದಲ್ಲಿ ಬದುಕುತ್ತಿರುವವರು ಕಡ್ಡಾಯವಾಗಿ ಆಸ್ಟ್ರೇಲಿಯನ್ ಸಂಸ್ಕೃತಿಯನ್ನು ಅಂದರೆ ಬಿಳಿಯರ ಸಂಸ್ಕೃತಿಯನ್ನು ಪಾಲಿಸಬೇಕು, ಇಲ್ಲವಾದರೆ ದೇಶ ತೊರೆದು ಹೋಗಬೇಕು, ಎನ್ನುತ್ತಾರೆ. ಹಿಂದೊಮ್ಮೆ ಇಲ್ಲಿನ ಮೂಲನಿವಾಸಿಗಳು ಆಸ್ಟ್ರೇಲಿಯನ್ನರಲ್ಲ ಎಂದು, ನಂತರ ಏಷ್ಯನ್ನರಿಗೆ ಈ ದೇಶದಲ್ಲಿ ಪ್ರವೇಶ ಇಲ್ಲ ಎಂದು ಹೇಳಿ ಎಲ್ಲರ ಗಮನ ಸೆಳೆದಿದ್ದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

“ಶಿಲ್ಪಕ್ಕೆ ತುಟಿಯುಂಟು, ಇಲ್ಲ ಮಾತು”: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಪ್ರೀತಿ ಅಭಿಮಾನ ಗೌರವದಿಂದ ಸೀತೆಯನ್ನು ಬರಮಾಡಿಕೊಳ್ಳಬೇಕಾಗಿದ್ದ ಕ್ಷಣ ಅದು. ಎಲ್ಲರೂ ಅಂತಹದೊಂದು ಕ್ಷಣಕ್ಕೆ ಸಾಕ್ಷಿಯಾಗಲು ಅಲ್ಲಿ ನಿಂತವರು. ಆದರೆ ತುಂಬು ನಿರೀಕ್ಷೆಯಿಂದ ರಾಮನ ಎದುರು ಬಂದು ನಿಲ್ಲುವ ಸೀತೆಗೆ ಸಿಕ್ಕಿದ ಸ್ವಾಗತವಾದರೂ ಎಂಥದ್ದು? ಪ್ರೀತಿ ಮತ್ತು ಸಂಭ್ರಮದಲ್ಲಿ ಅರಳಬೇಕಾಗಿದ್ದ ರಾಮನ ಮುಖ ಸಿಟ್ಟಿನಿಂದ ಉಗ್ರವಾಗುತ್ತದೆ. ಲಕ್ಷ್ಮಣ, ವಿಭೀಷಣ, ಆಂಜನೇಯರಿಗೆ ಇದು ನಿಜಕ್ಕೂ ಗಾಬರಿ ಹುಟ್ಟಿಸುತ್ತದೆ. ಮುಂದೆ ರಾಮ ಆಡುವ ಮಾತುಗಳನ್ನು ಕೇಳಿಸಿಕೊಂಡ ಸೀತೆಗೆ ಅಗ್ನಿ ಪ್ರವೇಶ ಮಾಡುವುದು ಬಿಟ್ಟು ಬೇರೆ ವಿಕಲ್ಪವೇನೂ ಉಳಿಯುವುದಿಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”

Read More

ಕೋಟಿ ಯೋಜನವಿರಲಿ, ದಾಟಿ ಬರುವೆನು… ಬಿಳಿಮಲೆಗೆ: ಸುಕನ್ಯಾ ಕನಾರಳ್ಳಿ ಅಂಕಣ

ಸುಖವಾದ ಊಟವಾದ ಮೇಲೆ ಸುಮಾರು ಎರಡು ರಾತ್ರಿಗಳಿಂದ ನಿದ್ದೆಯಿಲ್ಲದೇ ಬಳಲಿದ್ದ ನನ್ನ ಕಣ್ಣುಗಳನ್ನು ಇನ್ನಿಲ್ಲದಂತೆ ಅಗಲವಾಗಿ ತೆರೆದು ಇರಿಸಿದ್ದು ‘ಕೃಷ್ಣಸಂಧಾನ’ ಪ್ರಸಂಗದ ತಾಳಮದ್ದಳೆ ಕಾರ್ಯಕ್ರಮ. ಸುಮಾರು ಎರಡು ಗಂಟೆಗಳ ಕಾಲ ಆ ಭಾಷೆ, ವಾಗ್ವೈಖರಿ, ಹಾಸ್ಯ, ಅಭಿನಯಗಳು ಅದೆಂತಹ ಬೌದ್ಧಿಕ ಸಾಂತ್ವನವನ್ನು ನೀಡಿದವೆಂದರೆ ಅಮೆರಿಕಾದ ವಿಶ್ವವಿದ್ಯಾಲಯದಲ್ಲಿ ಸತತವಾಗಿ ಮೂರು ಗಂಟೆಗಳ ಉಪನ್ಯಾಸವನ್ನು ತಲ್ಲೀನಳಾಗಿ ಕೇಳಿಸಿಕೊಂಡು ನಂತರ ಅದನ್ನು ಅರಗಿಸಿಕೊಳ್ಳಲು ಮುಂದಿನ ಒಂದು ವಾರದ ಮಟ್ಟಿಗೆ ಹೆಣಗುತ್ತಿದ್ದೆನಲ್ಲ, ಇದು ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಇನ್ನೊಂದು ಹತ್ತು ದಿನವಾದರೂ ನಿನ್ನ ತಲೆಗೆ ಬಿಡುವಿರುವುದಿಲ್ಲ, ಬಿಡು ಎಂದು ಕಣ್ಣು ಹೊಡೆಯುತ್ತಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ನಾಕವೋ? ನರಕವೋ?!: ಜಯಲಕ್ಷ್ಮಿ ಪಾಟೀಲ್ ಅಂಕಣ

ಕಾಶ್ಮೀರವನ್ನು ನೋಡಿಯೇ ಇಲ್ಲದ ಆದರೆ ಮತ್ತೂ ಮತ್ತೂ ಆತಂಕವಾದಿಗಳ ದಾಳಿಗೆ, ಧರ್ಮಗಳ ಮೂಲಕ ಅಲ್ಲಿನ ಜನರನ್ನು ಒಡೆದು ಆಳುತ್ತಿರುವವರ ದಾಳಿಗೆ ಒಳಗಾಗುತ್ತಲೇ ಇರುವ ಕಾಶ್ಮೀರ ಕುರಿತು ನನಗೆ ಯಾವಾಗಲೂ ಭಯ ಮಿಶ್ರಿತ ಕುತೂಹಲ. ಕಾಶ್ಮೀರ ನನಗೆ ರಮ್ಯವಾಗಿ ಎಂದಾದರೂ ಕಂಡಿದ್ದರೆ ಅದು ಅದು ಶಮ್ಮಿ ಕಪೂರ್, ಶಶಿ ಕಪೂರ್ ಅವರ ಸಿನಿಮಾಗಳಲ್ಲಿ. ಇತ್ತೀಚಿನ ಪೆಹಲ್‌ಗಾಮ್ ಅಟ್ಯಾಕ್‌ವರೆಗೂ ಉಗ್ರಗಾಮಿಗಳ ಅಟ್ಟಹಾಸದ ಪ್ರಕರಣಗಳನ್ನೆ ಕೇಳುತ್ತಾ ಬಂದಿದ್ದೇನೆ. ಹೊರಗಿನವರು ಸಾಲದು ಅಂತ ನಮ್ಮ ರಾಜಕಾರಣಿಗಳ ಧರ್ಮದಾಟ ಬೇರೆ! ಅಯ್ಯೋ ಭಾರತಮಾತೆ…
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣದ ನಾಲ್ಕನೆಯ ಬರಹ

Read More

ಪುರಂದರದಾಸರು ಕನ್ನಡಮಾತೆಯ ಸುಪುತ್ರರಾಗಬಹುದು, ಕನಕದಾಸರಿಗೆ ಆ ಭಾಗ್ಯವಿಲ್ಲ!: ಸುಕನ್ಯಾ ಕನಾರಳ್ಳಿ ಅಂಕಣ

ಕನ್ನಡ ಸಿನೆಮಾ ಪುರಂದರದಾಸ ಮತ್ತು ಕನಕದಾಸರನ್ನು ಅರಿವಿಗೆ ದಕ್ಕಿಸಿಕೊಂಡ ರೀತಿಯಲ್ಲಿ ವ್ಯತ್ಯಾಸವಿರುವುದನ್ನು ಗಮನಿಸದೇ ಇರುವುದು ಕಷ್ಟ. ಎರಡೂ ಕಥಾನಕಗಳಲ್ಲಿ ಸಾಮಾನ್ಯ ಅಂಶಗಳಿರುವುದೂ ಸರಿಯೆ. ಉದಾಹರಣೆಗೆ ಬ್ರಾಹ್ಮಣ, ಬ್ರಾಹ್ಮಣೀಯತೆ, ಬ್ರಾಹ್ಮಣಿಕೆ ಮುಂತಾದ ಪರಿಕಲ್ಪನೆಗಳು ಎರಡರಲ್ಲೂ ಸಾಕಷ್ಟು ಲೇವಡಿಗೆ ಒಳಗಾಗುತ್ತವೆ. ಹಾಗೆ ನೋಡಿದರೆ ಕನ್ನಡದ ಹೆಚ್ಚಿನಂಶ ಎಲ್ಲ ಸಂತಚರಿತೆಗಳಲ್ಲಿ ಅದು ಸಾಮಾನ್ಯವೇ. ಕನಕ ಒಬ್ಬ ಅಬ್ರಾಹ್ಮಣ. ಕ್ಷತ್ರಿಯನೊ ಕುರುಬನೋ ಆಗಿದ್ದಿರಬೇಕು. ಚಿತ್ರದ ಹೆಚ್ಚಿನಂಶ ಅವನು ಬ್ರಾಹ್ಮಣ ವಿರೋಧವನ್ನು ನಿಭಾಯಿಸುವುದಕ್ಕೇ ಮೀಸಲಾಗುತ್ತದೆ. ಅವರಿಗಿಂತ ಅವನು ಹೇಗೆ ‘ಹೆಚ್ಚು’ ಬುದ್ಧಿವಂತ, ವಿವೇಕಿ, ಮತ್ತು ಅವನೂ ಸಹ ತನ್ನ ಪರಮಭಕ್ತಿಯ ಕಾರಣದಿಂದ ಮೋಕ್ಷಕ್ಕೆ ಅರ್ಹ ಎನ್ನುವುದನ್ನು ಸಾಬೀತುಪಡಿಸಲು ಚಿತ್ರ ಉದ್ದಕ್ಕೂ ಹೆಣಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ