ಕವಿಶೈಲದ ಹುಲಿಯೂ ದೂರದ ಕುದುರೆಮುಖವೂ
ಭಯವನ್ನು ಅನಾಮತ್ತಾಗಿ ಎತ್ತಿ ಬೆನ್ನ ಹಿಂದಕ್ಕೆ ಬಿಸಾಡಿ, ಕವಿಶೈಲದ ಕಲ್ಲುಬೆಂಚುಗಳ ಬಳಿ ನಿಂತು ಕಣಿವೆಯ ಕಡೆಗೆ ಕಣ್ಣು ಹಾಯಿಸಿದರೆ, ಅಸ್ಪಷ್ಟ ಬೆಳಕುಗಳಲ್ಲಿ ಕಂಡೂ ಕಾಣದಂತಿದ್ದ ದಟ್ಟ ಕಾಡು. ಬೆಳಗ್ಗೆ ಕಂಡಿದ್ದ ನೋಟದ ಅಂದಾಜಿನ ಮೇರೆಗೆ ಮೆಲ್ಲಗೆ ಗೆರೆಗಳನ್ನು ಒಂದೊಂದಾಗಿ ಜೋಡಿಸಿಕೊಳ್ಳುತ್ತ ಹೋದಂತೆ ರೋಮಾಂಚನ. ಅಷ್ಟೊಂದು ಅಗಾಧ ಕಾಡನ್ನು ಕತ್ತಲಲ್ಲಿ ಕಣ್ತುಂಬಿಕೊಳ್ಳುವುದೊಂದು ಅದ್ಭುತ ಪುಳಕ. ನಿಮ್ಮ ಕಂಗಳು ಬರೀ ಕಂಗಳಾಗಿಯಷ್ಟೇ ಉಳಿಯದಂಥ ಜಾದೂ ಅದು.
ಸಹ್ಯಾದ್ರಿ ನಾಗರಾಜ್ ಬರೆಯುವ ‘ಸೊಗದೆ’ ಅಂಕಣ
