Advertisement

Category: ಅಂಕಣ

ಹೊಸ ಸಹಸ್ರಮಾನದವರಿಂದ ಹಿರಿಯರು ಕಲಿಯಬೇಕಾದ ಪಾಠಗಳು: ಎಲ್.ಜಿ.ಮೀರಾ ಅಂಕಣ

ಒಂದಂತೂ ನಿಜ. ಅಂತರ್ಜಾಲದಿಂದಾಗಿ ಇಡಿ ಪ್ರಪಂಚವೇ ಇವತ್ತು ಒಂದು ಹಳ್ಳಿಯಾಗಿದೆ. ಯಾವುದನ್ನು ಹಿಂದಿನ ಬಾಗಿಲಿನ ವಸಾಹತೀಕರಣ ಎಂದು ಕರೆಯಲಾಗುವುದೋ ಅಂತಹ ಜಾಗತೀಕರಣದಿಂದಾಗಿ ಪ್ರಪಂಚ ಮಟ್ಟದಲ್ಲಿ ತಮ್ಮ ವ್ಯವಹಾರಗಳನ್ನು, ಉದ್ಯಮಗಳನ್ನು ಸ್ಥಾಪಿಸುವ ದೈತ್ಯ ಬಹುರಾಷ್ಟ್ರೀಯ ಕಂಪೆನಿಗಳು ಚಿಕ್ಕಪುಟ್ಟ ದೇಶಗಳಲ್ಲೂ ತಮ್ಮ ಅಸ್ತಿತ್ವವನ್ನು ಸಾರಿ ಹೇಳುತ್ತಿವೆ. ಇವು ನಮ್ಮ ರಸ್ತೆಗಳ ನೋಟಗಳನ್ನು ಮಾತ್ರವಲ್ಲ, ಬದುಕು, ಹಣಕಾಸು ಮತ್ತು ಸಂಬಂಧಗಳನ್ನು ನಾವು ನೋಡುವ ರೀತಿಯನ್ನು ಸಹ ಬದಲಿಸಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮನೆಗೆ ಮಾರಿ… ಊರಿಗೆ ಉಪಕಾರಿ: ಎಸ್.‌ ನಾಗಶ್ರೀ ಅಜಯ್ ಅಂಕಣ

ಪ್ರಪಂಚದ ಕಣ್ಣಿಗೆ ಬೀಳುವಾಗಿನ ನಾಟಕವನ್ನಾದರೂ ಸಹಿಸಬಹುದು. ಕುಟುಂಬದೊಳಗೂ ಸಹಜವಾಗಿ ಬೆರೆಯಲಾಗದ ಸ್ಥಿತಿಯೀಗ ಪ್ರತಿ ಮನೆಯ ದುರಂತ. ತೊಟ್ಟಿಲ ಕೂಸು ಕಿಟಾರೆಂದರೆ ಗೂಗಲ್ ರಿಸರ್ಚ್ ಮಾಡುವ, ನಿಂಗೇನ್ಗೊತ್ತು ಈ ಕಾಲದ ಕಷ್ಟಸುಖ ಸುಮ್ಮನಿರಮ್ಮ ಎಂದು ಮೂರು ಮಕ್ಕಳು ಹೆತ್ತಾಕೆಯನ್ನೇ ಮೂಲೆಗೆ ಕೂರಿಸುವ ದಿನ. ಮೊಮ್ಮಕ್ಕಳಿಗೆ ಬಾಯಿಪಾಠ ಹೇಳಿಕೊಡಲು, ಚದುರಂಗ, ಚೌಕಾಬಾರ, ಹುಲಿ ಕರಡಿ ಆಡಿಸಲು, ಅಡುಗೆಯ ಪ್ರಾಥಮಿಕ ತರಬೇತಿ ನೀಡಲು, ರಂಗೋಲಿ, ಕಸೂತಿ, ಹಾಡುಹಸೆ ಕಲಿಸಲು ಹಾತೊರೆಯುವ ಅಜ್ಜ ಅಜ್ಜಿಯರು ಇನ್ನೂ ಇದ್ದಾರೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ

ವಿಮಾನ ಡಿಕ್ಕಿ ಹೊಡೆದ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿದ್ದ ಕೆಲವರು ಏನಾಗುತ್ತಿದೆ ಎಂದು ಕೇಳುತ್ತಾ ಆ ಪ್ರಶ್ನೆಗೊಂದು ಕೊನೆ ಚುಕ್ಕೆ ಇಡದೆಯೆ ಹೋಗಿದ್ದಾರೆ. ರೆಸ್ಟ್ ಇನ್ ಪೀಸ್. ಆತ್ಮಕ್ಕೆ ಶಾಂತಿ ಸಿಗಲಿ. ಕಣ್ಣೀರು, ದಿಗ್ಭ್ರಮೆ, ಪುಂಖಾನುಪುಂಖ ಪ್ರಶ್ನೆಗಳು, ಎಲ್ಲರೂ ಹುಡುಕುತ್ತಿರುವ ಉತ್ತರಗಳ ಸಾಗರ ಅಪ್ಪಳಿಸಿದೆ. ಅದ್ಯಾವುದೊ ಕರುಣಾಳು ಬೆಳಕು ಒಬ್ಬನೇ ಒಬ್ಬ ಪ್ರಯಾಣಿಕನನ್ನು ಕೈಹಿಡಿದು ನಡೆಸಿ ಕಾಪಾಡಿದೆ. ಅವನ ಕಥೆ ಅಪನಂಬಿಕೆಗಳ ಲೋಕದಲ್ಲಿ ಉಳಿದ ಒಂದೇ ಒಂದು ಹುಲ್ಲುಕಡ್ಡಿ ಸತ್ಯವಾಗಿದೆ. ಇದೇನಿದು ಮಿಥ್ಯ-ಸತ್ಯಗಳ ಲೋಕವಿದು!
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನಾರಿ ಮತ್ತು ವಾಹನ ಸವಾರಿ – ಸಬಲೀಕರಣದ ಪರಿಣಾಮಕಾರಿ ದಾರಿ!: ಡಾ.ಎಲ್.ಜಿ.ಮೀರಾ ಅಂಕಣ

ನಮ್ಮ ಜೀವನವೆಂಬ ವಾಹನದ ಚಾಲಕಪೀಠದಲ್ಲಿ ಯಾರಿದ್ದಾರೆ? ನಾವೋ ಅಥವಾ ಬೇರೆ ಯಾರಾದರೂ ಅಧಿಕಾರಸ್ಥರೋ? ಗಂಡಾಳಿಕೆಯ ಸಮಾಜಗಳಲ್ಲಿ ಹೆಣ್ಣು ತನ್ನ ಜೀವನದ ಚಾಲಕ ಪೀಠದಲ್ಲಿ ಕುಳಿತಿದ್ದು ತೀರಾ ಅಪರೂಪ. ಅವಳು ಏನು ತಿನ್ನಬೇಕು, ಕುಡಿಯಬೇಕು, ಯಾವ ಬಟ್ಟೆ ತೊಡಬೇಕು ಮುಂತಾದ ಸಾಧಾರಣ, ದೈನಿಕ ಸಂಗತಿಗಳಿಂದ ಹಿಡಿದು ಓದು, ಕೆಲಸ, ಮದುವೆ, ಆಸ್ತಿಗಳಿಕೆಗಳಂತಹ ಮುಖ್ಯ ವಿಷಯಗಳ ತನಕ ಮನೆಯ ಗಂಡಸರೋ ಅಥವಾ ಅವರ ಪ್ರತಿನಿಧಿಗಳಾದವರೋ ನಿರ್ಧರಿಸುವ ಕಾಲ ಅನೇಕ ಶತಮಾನಗಳ ತನಕ ಇತ್ತಲ್ಲ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ