Advertisement

Category: ಅಂಕಣ

ಕಾಡು, ಪುಸ್ತಕ, ಅಭಿಮಾನ ಹಾಗೂ ಅಂತರ್ಜಾಲ ಸಮುದಾಯಗಳ ಆಹ್ಲಾದಕರ ಲೋಕ: ಎಲ್.ಜಿ.ಮೀರಾ ಅಂಕಣ

ಮನುಷ್ಯ ಎಂಬ ಜೀವಿ ಈ ಭೂಮಿಯ ಮೇಲೆ ವಿಕಾಸಗೊಂಡಾಗಿನಿಂದ ಒಂದಲ್ಲ ಒಂದು ರೀತಿಯ ಸಮುದಾಯಗಳನ್ನು ಕಟ್ಟಿಕೊಂಡು ಬದುಕುತ್ತಿದ್ದಾನೆ. ಎಷ್ಟೇ ಜಗಳ, ಭಿನ್ನಾಭಿಪ್ರಾಯ, ಇರಿಸುಮುರಿಸು, ವೈಯಕ್ತಿಕ ಇಚ್ಛೆಗಳ ಬಲ್ಮೆ ಇದ್ದರೂ ನೆರೆಹೊರೆಯೋ, ವೃತ್ತಿ ಸಮುದಾಯವೋ, ಸ್ನೇಹಿತರ ಬಳಗವೋ, ನೆಂಟರಿಷ್ಟರ ಜೊತೆಗಾರಿಕೆಯೋ, ವಠಾರವೋ, ಅನೇಕ ಮನೆಘಟಕಗಳಿರುವ ಸಮುಚ್ಚಯಗಳೋ(ಅಪಾರ್ಟ್ಮೆಂಟ್)… ಒಟ್ಟಿನಲ್ಲಿ ಮನುಷ್ಯರಿಗೆ ಮನುಷ್ಯರ ಸಂಗ-ಸಹವಾಸ ಬೇಕು ಅಷ್ಟೆ. ಇದನ್ನು ಹೆಚ್ಚು ವಿವರಿಸುವ ಅಗತ್ಯ ಇಲ್ಲ ಅನ್ನಿಸುತ್ತೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ನಾಲ್ಕನೆಯ ಬರಹ

Read More

ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ

ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಆಸ್ಟ್ರೇಲಿಯಾದ ಐತಿಹಾಸಿಕ ಮೈಲಿಗಲ್ಲು: ಡಾ. ವಿನತೆ ಶರ್ಮಾ ಅಂಕಣ

ಒಂದೆಡೆಯಿಂದ ಇನ್ನೊಂದು ಎಡೆಗೆ ಹೋಗುವ ದಾರಿಯ ಬಗ್ಗೆ ಹೇಳಲು ಕರಾರುವಾಕ್ಕಾದ ಸೂಚನೆಗಳನ್ನು ಹಾಡುಗಳಲ್ಲಿ ಅಡಕಿಸಿದ್ದಾರೆ. ಎಲ್ಲಿ ಕುಡಿಯಲು ನೀರು ಸಿಗುತ್ತದೆ, ತಿನ್ನಲು ಗೆಡ್ಡೆಗೆಣಸು, ತಂಗಲು ಸ್ಥಳ ಸಿಗುತ್ತದೆ, ಅನ್ನುವುದೂ ಈ ಹಾಡುಗಳಲ್ಲಿ ತಿಳಿಯುತ್ತದೆ. ಆಕಾಶದಲ್ಲಿ ಬೆಳಗಿನ ಸೂರ್ಯರಶ್ಮಿ ಇನ್ನೂ ಕೆಳಗಿರುವಾಗ ಈ ನೀರಿನ ತೊರೆಯಿಂದ ನಡೆಯುತ್ತಾ, ಓಡುತ್ತಾ ಹೊರಟು ಆ ದೊಡ್ಡ ಗಮ್ ಮರದ ಉತ್ತರಕ್ಕಿರುವ ಕುರುಚಲು ಪೊದೆಕಾಡು ದಾಟಿ ಬಿಸಿಲು ನಡುನೆತ್ತಿಯ ಮೇಲಿದ್ದಾಗ ಆ ಕಿರುದಿಣ್ಣೆ ಸಿಗುತ್ತದೆ. ಅದೇ ದಾರಿಯಲ್ಲಿ ಸೂರ್ಯನ ಇಳಿಬಿಸಿಲಿನ ಜಾಡನ್ನು ಹಿಂಬಾಲಿಸುತ್ತಾ ಹೋದರೆ ಬಂಡೆರಾಶಿ ಕಾಣುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹೊಸ ಸಹಸ್ರಮಾನದವರಿಂದ ಹಿರಿಯರು ಕಲಿಯಬೇಕಾದ ಪಾಠಗಳು: ಎಲ್.ಜಿ.ಮೀರಾ ಅಂಕಣ

ಒಂದಂತೂ ನಿಜ. ಅಂತರ್ಜಾಲದಿಂದಾಗಿ ಇಡಿ ಪ್ರಪಂಚವೇ ಇವತ್ತು ಒಂದು ಹಳ್ಳಿಯಾಗಿದೆ. ಯಾವುದನ್ನು ಹಿಂದಿನ ಬಾಗಿಲಿನ ವಸಾಹತೀಕರಣ ಎಂದು ಕರೆಯಲಾಗುವುದೋ ಅಂತಹ ಜಾಗತೀಕರಣದಿಂದಾಗಿ ಪ್ರಪಂಚ ಮಟ್ಟದಲ್ಲಿ ತಮ್ಮ ವ್ಯವಹಾರಗಳನ್ನು, ಉದ್ಯಮಗಳನ್ನು ಸ್ಥಾಪಿಸುವ ದೈತ್ಯ ಬಹುರಾಷ್ಟ್ರೀಯ ಕಂಪೆನಿಗಳು ಚಿಕ್ಕಪುಟ್ಟ ದೇಶಗಳಲ್ಲೂ ತಮ್ಮ ಅಸ್ತಿತ್ವವನ್ನು ಸಾರಿ ಹೇಳುತ್ತಿವೆ. ಇವು ನಮ್ಮ ರಸ್ತೆಗಳ ನೋಟಗಳನ್ನು ಮಾತ್ರವಲ್ಲ, ಬದುಕು, ಹಣಕಾಸು ಮತ್ತು ಸಂಬಂಧಗಳನ್ನು ನಾವು ನೋಡುವ ರೀತಿಯನ್ನು ಸಹ ಬದಲಿಸಿವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ