Advertisement

Category: ಅಂಕಣ

ಅಕ್ಕ ಕೇಳವ್ವ, ನಾನೊಂದು ಕನಸು ಕಂಡೆ!: ಸುಕನ್ಯಾ ಕನಾರಳ್ಳಿ ಅಂಕಣ

ಗಂಡಸು-ಸಮಾಜ ಹೆಣ್ಣಿಗೆ ತನಗೆ ಬೇಕಾದ ಕನಸನ್ನು ಕಾಣಲೂ ಸುಲಭವಾಗಿ ಬಿಡುವುದಿಲ್ಲ. ಅವಳ ತನ್ಮಯತೆಯೂ ಆವನಿಗೆ ಅಪಾಯದಂತೆಯೇ ಕಾಣಿಸುತ್ತದೆ. ಅವನು, ಅವನು ಕಟ್ಟಿದ ಮನೆ, ಅವನಿಂದ ಹುಟ್ಟಿದ ಮಕ್ಕಳು, ಇತ್ಯಾದಿಗಳ ಸುತ್ತಲೇ ಅವಳ ಬದುಕು ಗಿರಕಿ ಹೊಡೆಯುತ್ತಿರಬೇಕು. ಅವಳು ಅದೂ ಇದೂ ಎಂದು ಗೊಣಗೊಣವೆನ್ನುತ್ತಿರಬೇಕು. ಅವನು ಯಾಂತ್ರಿಕವಾಗಿ ಹೂಂಗುಡುತ್ತಾ ಪೇಪರ್ ಓದುತ್ತಲೊ, ಟಿವಿ ನೋಡುತ್ತಲೊ, ಫೋನಿನಲ್ಲಿ ಮಾತಾಡುತ್ತಲೊ ಇರಬೇಕು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನೈದನೆಯ ಬರಹ

Read More

ಕ್ರೌರ್ಯಕ್ಕೆ ಸಿಕ್ಕ ಮಕ್ಕಳು…: ಜಯಲಕ್ಷ್ಮಿ ಪಾಟೀಲ್ ಅಂಕಣ

ನಮ್ಮಲ್ಲೂ ಕೆಲಸ ಕೇಳಿ ಬಂದ ನೂರಾರು ಜನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ರಾಜಕಾರಣಿ ಇದ್ದಾನೆ, ಹೈಸ್ಕೂಲು ಓದುತ್ತಿದ್ದ ದಾನಮ್ಮ ಎಂಬ ಹೆಣ್ಣುಮಗುವನ್ನು ಅತ್ಯಾಚಾರವೆಸಗಿ ಕೊಂದ ಸಹಪಾಠಿಗಳಿದ್ದಾರೆ, ಸೌಜನ್ಯಾ ಎಂಬ ಹುಡುಗಿ ಕಾಲೇಜಿಗೆ ಹೋದವಳು ಮರಳಿ ಮನೆ ತಲುಪದಂತೆ ಅತ್ಯಾಚಾರವೆಸಗಿ ಕೊಂದುಹಾಕಿದ ದುರುಳರಿದ್ದಾರೆ, ಜಾತಿಯ ಕಾರಣಕ್ಕಾಗಿ ಕರುಳ ಕುಡಿಯನ್ನೆ ಹೊಸಕಿಹಾಕಿದ ಹೆತ್ತವರಿದ್ದಾರೆ, ಧರ್ಮದ ಹೆಸರಲ್ಲಿ ಒಂಬತ್ತು ವರ್ಷದ ಹೆಣ್ಣುಮಗುವಿನ ಮೇಲೆ ದೇವಸ್ಥಾನದಲ್ಲೆ ಮುಗಿಬಿದ್ದು ಅತ್ಯಾಚಾರವೆಸಗಿದ ಮಹಾಮಹಿಮರಿದ್ದಾರೆ, ಹೆಂಗಸರು ಮನೆಯ ಹೊರಗೆ ದುಡಿಯತೊಡಗಿದರೆ ಅತ್ಯಾಚಾರಗಳಾಗುವುದು ಸಹಜ ಎಂಬರ್ಥದಲ್ಲಿ ಮಹಾಜ್ಞಾನಿ ರಾಜಕಾರಣಿಯೊಬ್ಬ ಹೇಳಿಕೆ ನೀಡಿ ಮೀಸೆ ತಿರುವುತ್ತಾನೆ…
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಅದೇ ದಾರಿ… ಅದೇ ತಿರುವು…:  ವಿನಾಯಕ ಅರಳಸುರಳಿ ಅಂಕಣ

ರಾತ್ರಿಯಾದರೆ ಸಾಕು, ಒಂದೊಂದು ಮನೆಯೂ ಒಂದೊಂದು ಬೆಳಕಿನ ಡಬ್ಬಿ. ಒಂದೊಂದು ಕಿಟಕಿಯಲ್ಲಿ ಕತ್ತಲು, ಇನ್ನೊಂದರಲ್ಲಿ ಬೆಳಕು. ಆ ಬೆಳಕಿನ ಪರದೆಯ ಹಿಂದೆಯೇ ಕಪ್ಪು ನೆರಳಾಗಿ ಕದಲುವ ಮನುಷ್ಯರು. ವಾಹನಗಳ ಭರಾಟೆ ತಗ್ಗಿರುವ ರಾತ್ರಿ ಹತ್ತರ ನೀರವದಲ್ಲಿ ಸಮೀಪದಲ್ಲೇ ಕೇಳಿಸುವ ರೈಲಿನ ಕೇಕೆ. ಅರೆರೇ, ರೈಲಿನ ಹಳಿ ಇಷ್ಟು ಹತ್ತಿರದಲ್ಲೇ ಇದೆಯೇ? ಈ ಕ್ಷಣಕ್ಕೆ ಕೇಳಿಸಿದ ಕೇಕೆಯಲ್ಲೇ ಅದು ಹಾದು ಹೋಗಲಿರುವ ನದಿ-ಬೆಟ್ಟ-ಸುರಂಗ-ಕಾಡುಗಳ ಸುಂದರ ಪ್ರಯಾಣದ ಕಲ್ಪನೆಯಾಗಿ ಮನಸ್ಸಿನಲ್ಲೇನೋ ಖುಷಿಯ ಭಾವ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಸಮರ್ಥ ಕೆಲಸದ ಗುಟ್ಟು… ಎಂದಾದರೂ ಆದೀತೇ ರಟ್ಟು?: ಎಲ್.ಜಿ.ಮೀರಾ ಅಂಕಣ

ಆ ಇಬ್ಬರು ಹಿರಿಯ ಅಧ್ಯಾಪಕಿಯರ ಮುಖ ನೋಡಿದೆ. ಅವರಲ್ಲೊಬ್ಬರು `ಹೇ… ಸುಲಭ ಇದು. ನೋಡಿ, ಒಬ್ರು ಈ ಕಡೆ, ಇನ್ನೊಬ್ರು ಆ ಪಕ್ಕದ ಕುರ್ಚೀಲಿ ಕೂತ್ಕೊಳಿ. ನಾನು ಇಲ್ಲಿ ಕೂತ್ಕೋತೀನಿ. ನೂರರಿಂದ ಶುರುವಾಗೋ ಅರ್ಜಿ ಎಲ್ಲಾ ನೀವು ತಗೊಳ್ಳಿ, ಇನ್ನೂರರಿಂದ ಶುರುವಾಗೋದು ನೀವು, ಮುನ್ನೂರರಿಂದ ಶುರುವಾಗೋದು ನಾನು ತಗೋತೀನಿ.. ಬೇಗ ಬೇಗ ಇವುಗಳನ್ನ ನಾವು ಪ್ರತ್ಯೇಕ ಮಾಡ್ಬಹುದು’ ಅಂದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತಾರನೆಯ ಬರಹ

Read More

ಕೆಂಪು ಕಾರು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಹೊಸ ಕಾರ್ ಬುಕ್ ಮಾಡಿ ಈ ಕಾರನ್ನು ಎಕ್ಸ್ಚೇಂಜ್‌ನಲ್ಲಿ ಕೊಡುವ ಮಾತುಕತೆ ಆದ ನಂತರ ಮೊದಲಿನ ಲವಲವಿಕೆಯನ್ನು ಈ ಕಾರು ಕಳೆದುಕೊಂಡು ಬಿಟ್ಟಿತು ಅಂತ ಯಾಕೋ ನನ್ನ ಮನಸ್ಸಿಗೆ ತೀವ್ರವಾಗಿ ಅನ್ನಿಸಿತು. ಮರುದಿನ ಕಾರ್ ಸ್ಟಾರ್ಟ್ ಮಾಡುವಾಗ ಇಂಜಿನ್ ಶಬ್ಧ ಬೇರೆಯೇ ತರಹ ಕೇಳಿಸಿದ ಹಾಗಾಯ್ತು. ಏನೋ ಸಮಸ್ಯೆ ಆಗಿದೆ ತೋರಿಸಿಕೊಂಡು ಬನ್ನಿ ಅಂದ ಹೆಂಡತಿ ಮಾತಿಗೆ ಇಲ್ಲ ಅನ್ನಲಾಗದೆ ಸುರತ್ಕಲ್ ಪೇಟೆಗೆ ಒಂದು ಸುತ್ತು ಹಾಕಿ ಬಂದು ಏನಾಗಿಲ್ಲ ಅಂತೆ, ಅಂತ ಸುಳ್ಳು ಹೇಳಿದ್ದರ ಹಿಂದೆ ಕಾರ್ ಮೇಲೆ ನನಗಿದ್ದ ನಂಬಿಕೆಯೇ ಕಾರಣವಾಗಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಏಳನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ