Advertisement

Category: ಅಂಕಣ

ಮನೆವಾಳ್ತೆ ಎಂಬ ಹೊನ್ನ ಸಂಕೋಲೆ: ಎಲ್.ಜಿ.ಮೀರಾ ಅಂಕಣ

ಅವಳ ಗಂಡನ ಮನೆಯವರು, ಸೊಸೆ ತಮ್ಮ ಮನೆಯನ್ನು ಬಿಟ್ಟು ಹೋದದ್ದು ದೊಡ್ಡ ವಿಷಯವೇನಲ್ಲ ಎಂಬಂತೆ ಇನ್ನೊಂದು ಹುಡುಗಿಯನ್ನು ಸೊಸೆಯಾಗಿ ತಂದುಕೊಳ್ಳುತ್ತಾರೆ! ಸಿನಿಮಾ ಕೊನೆಯಾಗುವ ಹೊತ್ತಿನಲ್ಲಿ ಈ ಹೊಸಹುಡುಗಿಯ ಮೂಕದುಡಿಮೆ ಪ್ರಾರಂಭವಾಗಿರುತ್ತದೆ! ಅಲ್ಲಿಗೆ `ಒಬ್ಬ ಸೊಸೆಯ `ಪ್ರತಿಭಟನೆ’ಯಿಂದ ಅಸೂಕ್ಷ್ಮ, ಪುರಾತನ, ಹಾಗೂ ಕೋಣನ ಚರ್ಮದ ಗಂಡಾಳಿಕೆಯ ವ್ಯವಸ್ಥೆಗೆ ಏನೂ ಪರಿಣಾಮವಾಗುವುದಿಲ್ಲ, ಅದರ ಕೂದಲು ಸಹ ಕೊಂಕುವುದಿಲ್ಲ, ಅದು ಮಾಡಿಟ್ಟಿರುವ `ಮನೆ’ಗಳಲ್ಲಿ ಮನೆವಾಳ್ತೆ ದುಡಿತ ಮಾಡಲು ಒಬ್ಬ ಮೂಗಬಸವಿ ಹೋದರೆ ಇನ್ನೊಬ್ಬ ಮೂಗಬಸವಿ ಬರುತ್ತಾಳೆ, ಮೂಗಬಸವಿಯರಿಗೇನೂ ಕೊರತೆ ಇಲ್ಲ ನಮ್ಮ ಸಮಾಜದಲ್ಲಿ’ ಎಂಬ ನಿರ್ದಯಿ ಸಂದೇಶ ಸಿಗುತ್ತದೆ ನೋಡುಗರಿಗೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಆತಿಥ್ಯದ ಮುಖಗಳು: ಎಸ್. ನಾಗಶ್ರೀ ಅಜಯ್ ಅಂಕಣ

ಮಾತಾಡಿದರೂ ಅಂತಸ್ತು ಪ್ರದರ್ಶಿಸುವ, ತಾವೆಷ್ಟು ಅನುಕೂಲಸ್ಥರು, ಬುದ್ಧಿವಂತರು, ಜಗದ ಎಲ್ಲ ಸಮಾಚಾರ ಬಲ್ಲವರು ಎಂಬ ಒಣಪ್ರತಿಷ್ಠೆ ತೋರ್ಪಡಿಸುವ ಪ್ರಚಾರತಂತ್ರದ ಗಿಮಿಕ್ಕು ಮಾತ್ರವೇ. ಗಂಡ-ಹೆಂಡತಿ ಮನೆಯಲ್ಲಿ ಕಾದಾಡುವ ಬದಲು ಅಲ್ಲಿ ಕಣ್ಣಲ್ಲೇ ಗುರಾಯಿಸ್ತಾ, ‘ನಿಂಗಿದು ಬೇಕಿತ್ತಾ ಮಗನೆ?’ ಎಂಬ ಸಂದೇಶ ರವಾನಿಸುತ್ತಾ ಕಾಲ ತಳ್ಳಬೇಕು. ಸದ್ಯ ಗಂಟೆಗೆ ಅರವತ್ತೇ ನಿಮಿಷ ಅನ್ನಿಸುವಾಗಲೇ ತರಬೇತುಗೊಂಡ ನಾಯಿಯಂತೆ ಊಟ, ತಿಂಡಿ, ಕಾಫಿ ವಾಸನೆ ಹಿಡಿದು ಊಟದ ಆಟ ಮುಗಿಸಿ, ತಾಂಬೂಲ ಪಡೆದು ‘ಬರ್ತೀವಿ’ ಎನ್ನಬೇಕು. ‌’ಸಂತೋಷ’ ಎನ್ನುವರು. ಅದು ಬಂದಿದ್ದಕ್ಕೋ ಹೊರಟಿದ್ದಕ್ಕೋ ಯೋಚಿಸದೆ ಮನೆಯ ದಾರಿ ಹಿಡಿಯಬೇಕು.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಕನ್ನಡ –ಇಂಗ್ಲಿಷ್ ಅನುವಾದಗಳಲ್ಲಿ ಪದ ಕಚಗುಳಿ: ಸುಮಾವೀಣಾ ಸರಣಿ

ಇತ್ತೀಚೆಗೆ ಕೆಪಿಎಸ್ಸಿ ಪೂರ್ವಭಾವೀ ಪರೀಕ್ಷೆ ನಡೆಯಿತು. ಆ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅಚ್ಚಾಗಿದ್ದ ಪ್ರಶ್ನೆಗಳು ಸರಿ ಇದ್ದವು. ಅವೇ ಪ್ರಶ್ನೆಗಳು ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳು ಸಂಭವಿಸಿದ್ದವು. ಆದಕಾರಣ ಪರೀಕ್ಷೆಯನ್ನೆ ರದ್ದುಮಾಡಿ ಇಲ್ಲವಾದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರನ್ನು ಪಾಸು ಮಾಡಿ ಎನ್ನುವ ಬೇಡಿಕೆಗಳು ಬಂದವು. ಕಳೆದ ಶನಿವಾರದ ವರದಿಯ ಪ್ರಕಾರ ಪೂರ್ವಭಾವಿ ಪರೀಕ್ಷೆಯ ಗೊಂದಲಗಳು ಇತ್ಯರ್ಥವಾಗುವವರೆಗೆ ಮುಖ್ಯ ಪರೀಕ್ಷೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ತಂತಿ ಮೇಲೆ ನಡೆದು ಮುಳ್ಳು ತೆಗೆದವರು: ಎಲ್.ಜಿ.ಮೀರಾ ಅಂಕಣ

ಮಾರನೆಯ ದಿನ ಬೆಳಿಗ್ಗೆ ಮಹೇಶ್ ನಾಯ್ಡು ಬಂದಾಗ ಅವನನ್ನು ಕಾಲೇಜಿನ ಮೈದಾನದ ದೂರದ ಒಂದು ಕಲ್ಲುಬೆಂಚಿಗೆ ಕರೆದುಕೊಂಡು ಹೋಗಿ ಆತ ಮಾಡಿದ ತಪ್ಪು ಕೆಲಸದ ಬಗ್ಗೆ ಮತ್ತು ಇದು ಇಡೀ ಕಾಲೇಜಿಗೆ ಗೊತ್ತಾದರೆ ತಾನು ಯಾವ ಪರಿಸ್ಥಿತಿಯಲ್ಲಿರಬಹುದು ಎಂದು ಊಹಿಸುವಂತೆ ಅವನಿಗೆ ಹೇಳಿದರು. ಮೊದಮೊದಲು ತಾನು ಏನೂ ತಪ್ಪು ಮಾಡಿಲ್ಲ ಎಂದು ವಾದಿಸಿದ ಆತ ನಂತರ ಕಾಂತಿ ಮೇಡಂರ ಗಂಭೀರ ಮುಖ ಮತ್ತು ತೂಕವಾದ ಮಾತುಗಳ ಮುಂದೆ ನಿರುತ್ತರನಾದ, ಮತ್ತು ತಾನು ಆ ಪದ ಬಳಸಿದ್ದು ತಪ್ಪು ಎಂದು ಒಪ್ಪಿಕೊಂಡ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿಮೂರನೆಯ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ