Advertisement

Category: ಅಂಕಣ

 ಲೋಕೋಭಿನ್ನ ರುಚಿಃ – ಲೋಕೋಭಿನ್ನ ಖುಷಿಃ!: ಎಲ್.ಜಿ. ಮೀರಾ ಅಂಕಣ

ಒಬ್ಬೊಬ್ಬರ ಖುಷಿಯ ನಿರ್ವಚನವೂ ಬೇರೆ ಬೇರೆ. ಒಬ್ಬರಿಗೆ ಮಾತಿನಲ್ಲಿ ಖುಷಿ, ಇನ್ನೊಬ್ಬರಿಗೆ ಮೌನದಲ್ಲಿ. ಒಬ್ಬರ ಖುಷಿ ಹಾಡು ಕೇಳುವುದರಲ್ಲಾದರೆ, ಇನ್ನೊಬ್ಬರ ಖುಷಿ ಪದಬಂಧ ಬಿಡಿಸುವುದರಲ್ಲಿ. ಒಬ್ಬರ ಖುಷಿ ಹೊಸರುಚಿಯ ಅಡುಗೆಗಳನ್ನು ಸವಿಯುವುದರಲ್ಲಾದರೆ ಇನ್ನೊಬ್ಬರ ಖುಷಿ ಹೊಸ ಅಡುಗೆಗಳನ್ನು ಕಲಿತು ಮಾಡುವುದರಲ್ಲಿ. ಒಬ್ಬರಿಗೆ ದೇಶವಿದೇಶ ತಿರುಗುವ ಪ್ರವಾಸ ಇಷ್ಟ, ಇನ್ನೊಬ್ಬರಿಗೆ ಮನೆಯ ಆರಾಮಕುರ್ಚಿಯಲ್ಲಿ ಕುಳಿತು ದೇಶವಿದೇಶಗಳ ಬಗ್ಗೆ ಓದುವುದು ಇಷ್ಟ! ಖುಷಿಗಳು ವೈವಿಧ್ಯಮಯ. ಆದರೆ ಇವೆಲ್ಲದರ ಮೂಲದಲ್ಲಿರುವ ಒಂದು ಪ್ರಧಾನ ಸಂಗತಿಯು ಬಹುತೇಕ ಜನರ ಗಮನಕ್ಕೆ ಬರುವುದಿಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಇಲ್ಲಿರಲಾರೆ… ಅಲ್ಲಿಗೆ ಹೋಗಲಾರೆ: ಸುಕನ್ಯಾ ಕನಾರಳ್ಳಿ ಅಂಕಣ

ಕಾಸರವಳ್ಳಿಯವರೇ ಹೇಳುವಂತೆ, ‘ಹಿಂದಿನ ಕಾಲದ ಗ್ರಾಮೀಣ ಬದುಕಲ್ಲಿ ಶಾಂತಿ ಇತ್ತು, ಸೌಹಾರ್ದತೆ ಇತ್ತು ಎನ್ನುವುದು ಒಂದು ರಮ್ಯ ಕಲ್ಪನೆ ಅಷ್ಟೇ. ಇವತ್ತಿನ ನಗರ ಕೇಂದ್ರದ ಬದುಕಿಗೆ ಹೋಲಿಸಿದಾಗ ಸ್ವಲ್ಪ ಮಟ್ಟಿನ ಸೌಹಾರ್ದತೆ ಇತ್ತು ಎನ್ನುವುದು ನಿಜವಾದರೂ ಜಾತಿ, ಅಂತಸ್ತು, ವೃತ್ತಿಯ ನೆಲೆಯಲ್ಲಿ ಅನ್ಯಾಯ, ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದ್ದವು.’ ಅದನ್ನೇ ನಾಗರಾಜನ ಹೆಂಡತಿ, ‘ಆ ದಿನಗಳಲ್ಲಿ ಸುಖ ಇರಲಿಲ್ಲ, ನೆಮ್ಮದಿ ಇತ್ತು. ಆದರೆ ಇವತ್ತು ಸುಖ ಇದೆ, ನೆಮ್ಮದಿ ಇಲ್ಲ’ ಎಂದು ಹೇಳುತ್ತಾಳೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಒಂಭತ್ತನೆಯ ಬರಹ

Read More

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

Read More

“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

ಈ ಅವಾಂತರಗಳೆಲ್ಲಾ ಏನೇ ಆದರೂ ಬರೆಯಬೇಕು ಎಂಬ ಸ್ವಸ್ಥ ಹವ್ಯಾಸವನ್ನು ಮೊಟ್ಟಮೊದಲ ಬಾರಿಗೆ ಅದೆಷ್ಟೋ ಮಕ್ಕಳ ಎದೆಯಲ್ಲಿ ಬಿತ್ತಿದ, ಕೈ ಹಿಡಿದು ಬರೆಸಿದ, ಬರೆದಿದ್ದಕ್ಕೊಂದು ವೇದಿಕೆ ಕಲ್ಪಿಸಿದ ಶ್ರೇಯ ಈ ಎಲ್ಲ ಮಕ್ಕಳ ಪತ್ರಿಕೆಗಳಿಗೇ ಸಲ್ಲಬೇಕು. ಅವರಿಗೆ ಇಷ್ಟವಾದ ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮುಖಾಂತರ ವಿನೋದಮಯವಾದ ಕಥೆಗಳನ್ನು ಹೆಣೆದು, ಅದರೊಳಗೇ ಕಾಣದಂತೆ ನೀತಿಗಳನ್ನು ಬೆರೆಸಿ ಉಣಬಡಿಸುತ್ತಿದ್ದ ಈ ಪತ್ರಿಕೆಗಳು ಓದಿದವರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಸಾಮರಸ್ಯವೇ ಇಲ್ಲಿ ಸಲ್ಲುವುದು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಮುಂದಿನ ದಿನಗಳಲ್ಲಿ ಬಹಳಷ್ಟು ಬದಲಾವಣೆಗಳು ಬರಲಿವೆ. ಬಹುಸೂಕ್ಷ್ಮವಾಗಿ ಅವಲೋಕಿಸಿದರೆ ದಾಳಿಗೀಡಾದ ಧರ್ಮದ ಜನಸಮುದಾಯದ ದನಿಗೆ ಈಗಾಗಲೇ ಒಂದು ನಿರ್ದಿಷ್ಟ ಬಲ ಬಂದಿದೆ. ಇದು ಮತ್ತಷ್ಟು ಬೆಳೆಯುವ ಸೂಚನೆಗಳಿವೆ. ದೂರದ ಅಮೆರಿಕೆಯಲ್ಲಿ ಈ ಜನಸಮುದಾಯವು ಎಲ್ಲಾ ಮಟ್ಟಗಳಲ್ಲೂ ಆಳವಾದ ಪ್ರಭಾವ ಮತ್ತು ಹಿಡಿತವನ್ನು ಹೊಂದಿದೆ. ಮತ್ತೊಂದು ವಸಾಹತುಶಾಹಿ ಸಮಾಜವಾದ ಆಸ್ಟ್ರೇಲಿಯಾದಲ್ಲೂ ಹಾಗಾಗಬಹುದೆ? ದಾಳಿ ನಡೆಸಿದ ಅಪ್ಪ-ಮಗ ಜೋಡಿಯಲ್ಲಿ, ಅಪ್ಪನ ಬಳಿ ಇದ್ದದ್ದು ಭಾರತೀಯ ಪಾಸ್ಪೋರ್ಟ್. ಆತ ಭಾರತದ ಹೈದರಾಬಾದ್ ಮೂಲದವರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ