Advertisement

Category: ಅಂಕಣ

ಲೆಕ್ಕಕ್ಕೆ ಸಿಗದ ೨೦೨೪ ಏಳು-ಬೀಳುಗಳು: ವಿನತೆ ಶರ್ಮ ಅಂಕಣ

ಕೂತಿದ್ದ ವಿಮಾನವು ನಿಧಾನವಾಗಿ Aotearoa ಸೌತ್ ಐಲ್ಯಾಂಡ್ ಅಂಚನ್ನು ಸಮೀಪಿಸಿದಾಗ ಎರಡು ಸೀಟ್ ಆಚೆ ಕೂತಿದ್ದ ಹುಡುಗ ‘ಕ್ಯಾನ್ ಯು ಸೀ ದ ಮೌಂಟೆನ್ಸ್?’ ಅಂತ ಕೇಳಿದ. ಕಿಟಕಿಯಿಂದ ಹಿಮಪರ್ವತಗಳನ್ನು ನೋಡುತ್ತಾ ಮೈಮರೆತಿದ್ದ ನನಗೆ ಅವನು ತನ್ನ ಮೊಬೈಲ್ ಫೋನ್ ಕೊಟ್ಟು ‘ಪ್ಲೀಸ್, ವಿಡಿಯೋ ಮಾಡಿ’ ಎಂದಾಗ ಅವನ ಫೋನನ್ನು ಕಿಟಕಿಯ ಮೇಲೆ ಹಿಡಿದು, ನಾನು ಪುನಃ ಪರ್ವತಗಳಲ್ಲಿ ಕಳೆದುಹೋದೆ. ನನ್ನ ಫೋನಿನಲ್ಲಿ ವಿಡಿಯೋ ಹಿಡಿಯುವ ಆಲೋಚನೆ ಕೂಡ ಬರಲಿಲ್ಲ. ಅದನ್ನು ನೆನಪಿಸಿಕೊಂಡರೆ ಯಾಕೋ ಈಗ ನನ್ನಮ್ಮನ ಹಿಮಾಲಯ ಪ್ರವಾಸಗಳ ಡೈರಿ ಜ್ಞಾಪಕಕ್ಕೆ ಬರುತ್ತಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಹಾಡಬೇಕು ನಾವೀಗ ಗೆಳತಿಯರೇ ಸ್ತ್ರೀಸಖ್ಯಗೀತೆಯ..: ಎಲ್.ಜಿ.ಮೀರಾ ಅಂಕಣ

ಹೆಂಗಸರು ಇದೇ ರೀತಿ ತಮ್ಮ ಸಂಜೆಗಳನ್ನು ಕಳೆಯಲು ಸಾಧ್ಯವೇ? ಅಡಿಗೆಮನೆಯ ಜವಾಬ್ದಾರಿ, ಮಕ್ಕಳ ದೇಖರೇಖಿ, ನೆಂಟರಿಷ್ಟರ ಉಪಚಾರ ಮುಂತಾದವುಗಳು ಹೆಣ್ಣಿನ ಸಂಜೆ, ಇಳಿಸಂಜೆಗಳನ್ನು ಕಬಳಿಸುವುದು ವಾಸ್ತವ ಸಂಗತಿ. ಸಂಜೆ ಗಂಡು ಮಾಡುವ `ಚಿಲ್ಲಿಂಗ್’ ಚಟುವಟಿಕೆಗಳನ್ನು ಹೆಣ್ಣು ಮಾಡಿದರೆ ಅವಳನ್ನು ಬೀದಿ ಬಸವಿ, ಬೇಜವಾಬ್ದಾರಿ ಹೆಣ್ಣು, ಚೆಂಗ್ಲು ಹೊಡೆಯುವವಳು ಎಂದೆಲ್ಲ ಅಂದು ಆಡಿ ಕೆಟ್ಟ ಹಣೆಪಟ್ಟಿಗಳನ್ನು ಹಚ್ಚಲಾಗುತ್ತದೆ. ಸನ್ನಿವೇಶ ಹೀಗಿರುವಾಗ, ಹೆಣ್ಣುಗಳು ಸಾಯಂಕಾಲಗಳಲ್ಲಿ ಮನೆಯಿಂದ ಹೊರಗೇ ಬರದಿರುವಾಗ ಅವರ ನಡುವೆ ಸ್ನೇಹ ಸಂಬಂಧಗಳು ಮೂಡುವುದು ಹೇಗೆ?
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಆ ಹೊಳೆವ ಕಂಗಳು…: ಸುಧಾ ಆಡುಕಳ ಅಂಕಣ

ಅದೇನು ಜಾದೂ ನಡೆಯಿತೋ ತಿಳಿಯದು, ಅಲ್ಲಿಂದ ತಿರುಗಿ ಬಂದ ಮಂಜಿಯ ಅಪ್ಪ ಗಡುಸಾಗಿ ಮಾತನಾಡತೊಡಗಿದ, “ಮಗಳು ನಂದು, ಏನು ಮಾಡಬೇಕಂತ ನಂಗೊತ್ತದೆ. ನೀವು ಇನ್ನೂ ಮೀಸೆ ಸರಿಯಾಗಿ ಬರದಿರೋರೆಲ್ಲ ಕಾನೂನು ಮಾತಾಡೂದು ಬ್ಯಾಡ. ಅವಳ ದೇಹ ಬಿಡುಗಡೆಗೆ ಕಾಯ್ತದೆ. ನಮ್ಮ ಕುಟುಂಬದ ದೆಯ್ಯಗಳು ಅವಳನ್ನು ಕಳಿಸಿಕೊಡು ಅಂತ ಕೂಗ್ತಿವೆ. ನೀವು ಪೋಲೀಸು, ಕಾನೂನು ಅಂತ ವರಾತ ಸುರುಮಾಡಿ ಅವಳ ದೇಹ ಕೊಳೆಯೂ ಹಾಗೆ ಮಾಡಬೇಡಿ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಕೀವೀ-ಕಾಂಗರೂ ದೇಶಸ್ಥರ ನೆಂಟಸ್ತನ: ವಿನತೆ ಶರ್ಮ ಅಂಕಣ

“ಈ ನಾಯಕರ ನಿಲುವು ಏನೆಂದರೆ ತಾವು ಆಸ್ಟ್ರೇಲಿಯಾವನ್ನು ಒಂದು ಆಧುನಿಕ ದೇಶವನ್ನಾಗಿ ಮಾತ್ರ ನೋಡುವುದು. ವಸಾಹತು ಚರಿತ್ರೆಯನ್ನು ಸಮರ್ಥಿಸುವುದಿಲ್ಲ ಮತ್ತು ಬಿಳಿಯರು ಬಂದು ಅಭಿವೃದ್ಧಿಪಡಿಸಿದ್ದರಿಂದ ನಾವು ಈ ಅದೃಷ್ಟದ ನಾಡಿನಲ್ಲಿದ್ದೀವಿ. ಮೂಲಜರಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳು ಈ ಆಧುನಿಕ ಆಸ್ಟ್ರೇಲಿಯಾದಲ್ಲಿ ಅದಕ್ಕೆ ಹೊಂದಿಕೊಂಡು ಇರಬೇಕು, ತಮಗೆ ಪ್ರತ್ಯೇಕ ಅಸ್ಮಿತೆ ಬೇಕು ಎಂದು ಕೇಳಬಾರದು. ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಈ ರೆಫೆರೆಂಡಮ್ ಮುಂತಾದ ಬೇಡಿಕೆಗಳಿಗೆ ಆಸ್ಪದ ಕೊಡುವುದಿಲ್ಲ, ಎಂದಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಾಣದ ಮುಳ್ಳನ್ನು ಕಾಣದ ಮುಳ್ಳಿಂದ…..: ಎಲ್.ಜಿ.ಮೀರಾ ಅಂಕಣ

“ನೀಲಿ… ಈ ನರಕಸಮ ರೋಗ ಯಾರಿಗಿರುತ್ತೋ ಅವರನ್ನು ಹಚ್ಚಿಕೊಂಡವರಿಗೂ ಒಂದು ಭಯಾನಕ ಅಸ್ವಸ್ಥತೆ ಉಂಟಾಗುತ್ತೆ ಕಣೇ. ಅದೇ ಆಗ್ಲೇ ಹೇಳಿದ್ನಲ್ಲಾ ಯಾತನಾಬಂಧ ಅಂತ, ಅದೇ ಕಣೆ ನಂಗೆ ಆಗಿದ್ದು. ಇದು ಹೇಗೆ ಅಂದ್ರೆ ನಾವು ಮಾಡ್ತಿರೋದು ನಮಗೆ ಅಪಾಯಕರ ಅಂತ ಗೊತ್ತಿದ್ರೂ ಮನಸ್ಸು ಅದನ್ನೇ ಮತ್ತೆ ಮತ್ತೆ ಮಾಡುವಂತೆ ನಮ್ಮನ್ನ ಬಲವಂತಿಸುತ್ತೆ!”.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎಂಟನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ