Advertisement

Category: ಅಂಕಣ

ಗಣೇಶ ತರುವ ಸುಖ, ಸಂತೋಷ…: ವಿನತೆ ಶರ್ಮಾ ಅಂಕಣ

ಈ ಪ್ರಪಂಚದ ಒಂದಷ್ಟು ದೇಶಗಳನ್ನು ಸುತ್ತುವಾಗ ಗಣೇಶನ ಖ್ಯಾತಿ ಅಚ್ಚರಿ ತಂದಿತ್ತು. ಯೂರೋಪ್, ಯುನೈಟೆಡ್ ಕಿಂಗ್ಡಮ್ ಅಲ್ಲಂತೂ ಗಣೇಶನ ಪರಿಚಯ ಸುಮಾರು ಜನರಿಗಿದೆ. ಅಂದಚೆಂದಕ್ಕೆಂದು ಅವನ ಮೂರ್ತಿಗಳನ್ನು ಇಟ್ಟಿರುವುದು ದಿಟ. ನಮ್ಮ ಆಸ್ಟ್ರೇಲಿಯದಲ್ಲೇಕೋ ಗಣಪನ ಹೆಸರು ಜನರಿಗೆ ಅಷ್ಟೊಂದು ಗೊತ್ತಿಲ್ಲ. ‘ಯು.ಕೆ. ಮತ್ತು ಅಮೇರಿಕಕ್ಕೆ ಹೋಲಿಸಿದರೆ ಆಸ್ಟ್ರೇಲಿಯಾ ಇಪ್ಪತ್ತು ವರ್ಷಗಳಷ್ಟು ಹಿಂದಿದೆ’ ಎನ್ನುವ ಜಾಣ್ಣುಡಿ ನಿಜವೇನೂ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ

ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”

Read More

ಹೊಳೆಸಾಲಿಗೆ ಬಂದ ಕೆಂಪು ಬಸ್ಸು: ಸುಧಾ ಆಡುಕಳ ಅಂಕಣ

ಈ ವಾರ ಅಣ್ಣ ಬಂದಾಗ ನೀಲಿ ಅಣ್ಣನಲ್ಲಿ ತನ್ನ ದುಗುಡವನ್ನು ಹೇಳಿಕೊಂಡಳು. ಅಣ್ಣ ಅವಳಿಗೆ ಸಮಾಧಾನ ಹೇಳಿದ. “ನೋಡು, ನೀನು ಮುಂದೆ ಓದುವ ಸ್ಕೂಲು ಇಲ್ಲಿಂದ ಅಷ್ಟೇನೂ ದೂರವಿಲ್ಲ. ದಿನವೂ ನಡೆದು ಹೋಗುವುದೊಂದು ಕಷ್ಟ. ಬೆಳಿಗ್ಗೆ, ಸಂಜೆ ಒಂದು ಬಸ್ ಆಯಿತೆಂದರೆ ಮನೆಯಿಂದಲೇ ಮುಂದಿನ ಶಾಲೆಗೆ ಹೋಗಬಹುದು.”
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನಾರನೆಯ ಕಂತು ನಿಮ್ಮ ಓದಿಗೆ

Read More

ಮತ್ತೆ ಮಹಿಳಾ ದಿನಾಚರಣೆ ಬಂದಂತೆ…: ವಿನತೆ ಶರ್ಮಾ ಅಂಕಣ

ಇದೆ ಮೊದಲ ಬಾರಿ ಬಿಳಿಯರಲ್ಲದ ಒಬ್ಬ ಮಹಿಳೆ ಅಮೆರಿಕೆಯ ಅಧ್ಯಕ್ಷ ಚುನಾವಣೆಯನ್ನು ಎದುರಿಸುತ್ತಿರುವುದು ಬಹಳ ವಿಶೇಷ. ಈ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಎದುರಿಸುತ್ತಿರುವ ಎದುರಾಳಿ ಸಾಮಾನ್ಯರೇನಲ್ಲ. ಅವರು ಏನನ್ನು ಬೇಕಾದರೂ ಮಾಡುವ, ನ್ಯಾಯನೀತಿಗಳನ್ನು ನಗೆಪಾಟಲು ಮಾಡುವ ಸಾಮರ್ಥ್ಯವಿರುವ ಗಂಡು. ಈ ಗಂಡಿನ ಚಾಣಾಕ್ಷತೆಯನ್ನು ಕಮಲಾ ಹ್ಯಾರಿಸ್ ಹೇಗೆ ಸಂಭಾಳಿಸುತ್ತಾರೆ, ನಿಭಾಯಿಸುತ್ತಾರೆ, ಎದುರಿಸುತ್ತಾರೆ ಎನ್ನುವುದು ಅತ್ಯಂತ ಕುತೂಹಲಕಾರಿಯಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ದಾರಿ ಯಾವುದಯ್ಯಾ….?: ಸುಧಾ ಆಡುಕಳ ಅಂಕಣ

“ನಿಮ್ಮ ದೇವರ ಜಮೀನು ಕೇಳ್ತೇನೆ ಅಂತ ತಪ್ಪು ತಿಳಿಯಬೇಡಿ. ಒಂದು ಮನೆಗಾಗುವಷ್ಟು, ಜತೆಗೆ ರಸ್ತೆಗೊಂದು ದಾರಿಯಾಗುವಷ್ಟು ಜಾಗ ಬಿಟ್ಟುಕೊಟ್ಟರೆ ನಾವು ಮುಂದಿನ ಮಳೆಗಾಲದಲ್ಲಿ ಬದುಕ್ತೀವಿ. ಇಲ್ಲಾಂದ್ರೆ ಎಲ್ಲೋ ದೂರದಲ್ಲಿ ಮನೆಕಟ್ಟಿ ಈ ಜಮೀನಿಗೆ ಓಡಿಯಾಡೋದೆಲ್ಲ ಆಗಿಹೋಗುವ ಮಾತಲ್ಲ. ನೋಡಿ, ಒಂದು ಮನಸು ಮಾಡಿ. ಮತ್ತೆ ನಂಗೆ ನೀವು ಧರ್ಮಕ್ಕೆ ಕೊಡೂದೇನೂ ಬ್ಯಾಡ…..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ