Advertisement

Category: ಅಂಕಣ

ಪ್ರೀತಿಯ ಅರ್ಥವಾದರೂ ಏನು ಹೇಳು?: ಆಶಾ ಜಗದೀಶ್ ಅಂಕಣ

ಏನೆಲ್ಲಾ ನಮ್ಮ ಆಕಾಂಕ್ಷೆಗಳನ್ನು ನಮ್ಮ ಮಕ್ಕಳ ತಲೆ ಮೇಲೆ ಹೇರಿ ಬೆಳೆಸುತ್ತಾ ಹೋಗುತ್ತೇವೆ. ಆದರೆ ಮುಖ್ಯವಾಗಿ ಏನನ್ನು ಕಲಿಸಬೇಕಿತ್ತೋ ಅದನ್ನೇ ಕಲಿಸದೆ ಹೋಗುತ್ತೇವೆ. ನಾವು ಕಲಿಸಲೇ ಬೇಕಾದದ್ದು ಎನ್ನುವ ಎಷ್ಟೋ ಇದೆ. ನಮ್ಮನ್ನು ಜೋಪಾನ ಮಾಡುವ ಅದಷ್ಟೋ ಗುಣಗಳಿವೆ. ಒಬ್ಬರನ್ನು ನಿಷ್ಕಲ್ಮಷವಾಗಿ ಇಷ್ಟಪಡುವುದನ್ನು, ಪ್ರೀತಿಸುವುದನ್ನು ಕಲಿಸುವುದೇ ಇಲ್ಲ ಯಾಕೆ… ಹುಟ್ಟಂದಿನಿಂದ ಬಂದ ಮುಗ್ಧತೆಯನ್ನ ಕೊಂದು ಅಲ್ಲಿ ಸ್ವಾರ್ಥ ಮತ್ತು ಲೋಭವನ್ನ ಮಾತ್ರ ತುಂಬಿ ನೀರೆರೆದು ಬೆಳೆಸುತ್ತಾ ಹೋಗುತ್ತೇವೆ ಯಾಕೆ…
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಇಂತಹ ಸಮುದಾಯ ಶಾಂತಿ ಕದಡುವ ಘಟನೆಗಳು ನಡೆಯುವುದು ಅಪರೂಪ. ಕನಿಷ್ಟ ಶಿಕ್ಷಣ, ಮಧ್ಯಮ ವರ್ಗ ಸಮಾಜದ ಹೆಚ್ಚು ಜನರು ದುಡಿದು ಗಳಿಸಿ ಸಾಮಾನ್ಯ ಜೀವನ ನಡೆಸುವ ಮೌಲ್ಯವನ್ನಿಟ್ಟುಕೊಂಡು ಬದುಕುವವರು. ಒಂದು ರೀತಿಯಲ್ಲಿ ಹೇಳುವುದಾದರೆ ಏಕತಾನದಲ್ಲಿ ಚಲಿಸುವ ಸಮಾಜದ ಸ್ತರಕ್ಕೆ ಕುಂದು ಬಂದರೆ ಎಲ್ಲರಿಗೂ ತಬ್ಬಿಬ್ಬಾಗಿ ಬಿಡುತ್ತದೆ. ಸಿಡ್ನಿಯಲ್ಲಿ ನಡೆದ ಕಳೆದ ವಾರಾಂತ್ಯದ ಘಟನೆಯಿಂದ ಜನರು ವಿಚಲಿತರಾಗಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕೊಡು ಶಿವನೆ ಕುಡುಕನಲ್ಲದ ಗಂಡನ: ಸುಧಾ ಆಡುಕಳ ಅಂಕಣ

ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಗ್ರೀನ್ ಕಾರ್ಡ್ ಎನ್ನುವ ದೇವರು: ಎಂ.ವಿ. ಶಶಿಭೂಷಣ ರಾಜು ಅಂಕಣ

ಎಷ್ಟೋ ಸಲ ಸ್ವದೇಶಕ್ಕೆ ಹಿಂತಿರುಗುವ ಎನ್ನುವ ಅನಿಸಿಕೆ ಮೂಡುತ್ತದೆ, ಅದೊಂದು ಅನಿಸಿಕೆ ಅಷ್ಟೆ. ಅಮೇರಿಕಾದ ಜೀವನ ಶೈಲಿ, ಉತ್ತಮ ಜೀವನ, ತಮ್ಮ ಪಾಡಿಗೆ ತಾವು ಜೀವಿಸಲು ಇರುವ ಪ್ರಾಮುಖ್ಯತೆ, ಸರ್ಕಾರಿ ಕಚೇರಿಗಳಲ್ಲಿ ಇರದ ಲಂಚದ ಹಾವಳಿ, ಗುಣಮಟ್ಟದ ಆಹಾರ, ಎಲ್ಲಕಿಂತ ಹೆಚ್ಚಾಗಿ ತವರಲ್ಲಿ ಸಿಗುವ ಗೌರವ ಮುಂತಾದುವುಗಳನ್ನು ಬಿಡಲು ಮನಸಾಗದೆ ಅಮೆರಿಕೆಯಲ್ಲಿಯೇ ಕೊನೆಯವರೆಗೂ ಜೀವನ ಸಾಗುವುದು.
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ”

Read More

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ