Advertisement

Category: ಅಂಕಣ

ಅವನ ಸಂಗೀತದ ಸರಪಳಿಯಲ್ಲಿ…: ಆಶಾ ಜಗದೀಶ್ ಅಂಕಣ

ಒಂದು ತಾನ್ ನಿಂದ ಮತ್ತೊಂದಕ್ಕೆ ಸಂಚರಿಸುವಾಗ ಒಂದು ಸೆಕೆಂಡ್ ಮಾತ್ರದಲ್ಲಿ ನಿನ್ನ ಧ್ವನಿ ಹೊರಳುತ್ತದಲ್ಲ ಆ ನಾದ ಅದೆಷ್ಟು ಚಂದ… ಅದಕ್ಕೆ ಮುಲಾಮಿನ ಗುಣವಿದೆ. ಕ್ಷಣ ಮಾತ್ರದಲ್ಲಿ ಭಾರವಾದ ಎದೆಯನ್ನು ಹಾರಿ ನಲಿಯುವಂತೆ ಮಾಡಿಬಿಡಬಲ್ಲ ಶಕ್ತಿಯಿದೆ ಅಂತಲೇ ನನಗೆ ಬಲವಾಗಿ ಅನಿಸುತ್ತದೆ. ಆ ಕ್ಷಣ ನಾನು ಯಾರು ಎನ್ನುವುದು ನನಗೆ ಮರೆತು ಹೋಗುತ್ತದೆ. ಯಾವ ವಿಳಾಸ, ನಾಮಧೇಯವಿರದ ಶಕ್ತಿಯ ಸಣ್ಣದೊಂದು ಚೂರಿನಂತೆ ಹೊಳೆಯುತ್ತಿದ್ದೇನೆ ಎಂದು ಭಾಸವಾಗುತ್ತದೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಮಹಿಳಾ ಸಾಮರ್ಥ್ಯ ಮತ್ತು ಸಬಲೀಕರಣ…: ವಿನತೆ ಶರ್ಮ ಅಂಕಣ

ಜಸಿಂಡಾ ಆರ್ಡೆರ್ನ್ ತಮ್ಮ ಹೈಸ್ಕೂಲ್ ದಿನಗಳಿಂದ ಸ್ವಂತ ಸಾಮರ್ಥ್ಯ, ಬುದ್ಧಿವಂತಿಕೆ, ಕಠಿಣ ಶ್ರಮದಿಂದ ರಾಜಕೀಯ ವಲಯದಲ್ಲಿ ಬೆಳೆದವರು. ಮಗುವಿಗೆ ಜನ್ಮ ಕೊಟ್ಟು, ಬಾಣಂತಿಯಾಗಿದ್ದೂ ತಮ್ಮ ಕೆಲಸವನ್ನು ಶಿಸ್ತಿನಿಂದ ನಿರ್ವಹಿಸಿದ ಹೆಮ್ಮೆಯ ಹೆಣ್ಣು ಇವರು. ಹಾಗೆ ನೋಡಿದರೆ ಪ್ರಪಂಚದ ಬೇರೆಬೇರೆ ದೇಶಗಳಲ್ಲಿ ಮಹಿಳಾ ರಾಜಕೀಯ ನಾಯಕರು, ಪ್ರಧಾನಿಗಳು, ಅಧ್ಯಕ್ಷರು, ಚಾನ್ಸಲರ್ ಮುಂತಾದವರ ಉದಾಹರಣೆಗಳು ಇವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಉರಿದು ಮುಗಿದುಬಿಡುವುದಲ್ಲ ಪ್ರೀತಿ: ಎಸ್. ನಾಗಶ್ರೀ ಅಜಯ್ ಅಂಕಣ

ಓದಿ, ಬರೆದು, ಕಣ್ತೆರೆದು ಪ್ರಪಂಚ ನೋಡಿ, ತಿಳಿದು, ವ್ಯಕ್ತಿತ್ವ ರೂಪಿಸಿಕೊಳ್ಳಬೇಕಾದ ವಯಸ್ಸಿನಲ್ಲಿ ಪ್ರೇಮದ ಹೆಸರಿನಲ್ಲಿ ಹುಚ್ಚಾಟಗಳಿಗೆ ಪಕ್ಕಾಗಿ, ನಮ್ಮನ್ನೇ ನಿಭಾಯಿಸಿಕೊಳ್ಳಲು ಬಾರದ ವಯಸ್ಸಿನಲ್ಲಿ ಇನ್ನೊಂದು ಜೀವವನ್ನು ನಿಭಾಯಿಸುವ, ಸಂಬಂಧ ಬೆಸೆಯುವ ಸಾಹಸ ಬೇಕಿದೆಯೆ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಗರತಿಯ ಹಾಡು ಮತ್ತು ಸ್ತ್ರೀ ದೃಷ್ಟಿಕೋನ: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಜನಪದ ಎನ್ನುವದು ಸ್ತ್ರೀ ಕೇಂದ್ರಿತವಾದ ಭಾವುಕ ನೆಲೆ. ಅವಳ ಹಂಬಲ, ಹತಾಶೆ, ಸಡಗರ ಸಂಕಟಗಳು, ಹಾತೊರಿಕೆ, ಕನವರಿಕೆ ಹಾಗೂ ಪ್ರತಿರೋಧಗಳಿಗೆ ಒಂದು ಅಭಿವ್ಯಕ್ತಿ ಮಾಧ್ಯಮವಾಗಿ ಅದು ರೂಪಗೊಂಡಿರುವಂತದ್ದಾಗಿದೆ. ಜನಪದ ಧಾರೆಯುದ್ದಕ್ಕೂ ಹೆಣ್ಣನ್ನು ಉತ್ತಮರ ಮಗಳು ಆಗಿಸುವ ಅಭೀಪ್ಸೆ ಒಂದು ಪುರುಷ ಪ್ರಣೀತವಾದ ಅನುಕೂಲಸಿಂಧು ಗರತಿ ಧರ್ಮವನ್ನು ರೂಪಿಸಿದೆ ಮತ್ತೆ ಅದು ಒಂದು ಹೆಣ್ಣಿನ ಮೂಲಕವೆ ಇನ್ನೊಂದು ಹೆಣ್ಣಿಗೆ ಧಾರೆಯೆರೆಯುವಂತೆ ಸಂಯೋಜಿಸಲಾಗಿದೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ