Advertisement

Category: ಅಂಕಣ

ಮನುಷ್ಯನ ಒಂದೇ ಜನ್ಮದಲ್ಲಿ ಹಲವು ಜನ್ಮಗಳು – ಏನಿದರ ಮರ್ಮ?: ಎಲ್. ಜಿ. ಮೀರಾ ಅಂಕಣ

ನಮ್ಮ ಗುರುತು ನಮಗೇ ಸಿಗದಷ್ಟು ನಾವು ಬದಲಾವುಗುವುದರ ಮರ್ಮ ಏನು? ಅದೂ ಅಲ್ಲದೆ ಎಲ್ಲರೂ ಹೀಗಾಗುವುದಿಲ್ಲ. ಎಲ್ಲ ಸಿದ್ಧಾರ್ಥರೂ ಬುದ್ಧರಾಗುವುದಿಲ್ಲ, ಎಲ್ಲ ನವಕೋಟಿ ನಾರಾಯಣರೂ ಪುರಂದರದಾಸರಾಗುವುದಿಲ್ಲ, ಎಲ್ಲ ಅಂಗುಲಿಮಾಲರೂ ಬೌದ್ಧಭಿಕ್ಷುವಾಗುವುದಿಲ್ಲ. ಹೀಗೆ ತಮ್ಮನ್ನು ತಾವು ಗುರುತೇ ಸಿಗದಂತೆ ನವೀಕರಿಸಿಕೊಳ್ಳಲು ಎಲ್ಲರಲ್ಲೂ ಇಲ್ಲದ ಏನೋ ಒಂದು ಗುಣವಿಶೇಷ ಈ ವ್ಯಕ್ತಿಗಳಲ್ಲಿ ಇರಬೇಕು ಅಥವಾ ಹೀಗೆ ಬದಲಾವುಗುವುದಕ್ಕಾಗಿ ಏನೋ ಒಂದು ಬಲವಾದ ಕಾರಣವನ್ನು ಬದುಕು ನಿರ್ಮಿಸಿರಬೇಕು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಹೆಣ್ಣು ನೋಡಲೆಂದು ಬಂದವರು!: ಸುಕನ್ಯಾ ಕನಾರಳ್ಳಿ ಅಂಕಣ

ಅದೂ ಸರಿಯೇ. ಅಂತಾರಾಷ್ಟ್ರೀಯ ಕರೆ ದುಬಾರಿ ತಾನೇ? ಟಿಪಿಕಲ್ ಅಮೆರಿಕನ್ ಎಂದು ಗೊಣಗಿಕೊಂಡು ನಾನು ಸುಮ್ಮನಾದರೂ ಮನೆಯಲ್ಲಿ ರಂಪವಾಗುವುದೇನೂ ತಪ್ಪಲಿಲ್ಲ. ‘ಅಲ್ಲಿಂದಾ ಫೋನ್ ಮಾಡಿದವನ ಹತ್ತಿರ ಒಳ್ಳೆಯ ಮಾತಾಡೋದು ಬಿಟ್ಟು, ನಾನು ಕರಮಿ, ನಾನು ಕುಳ್ಳಿ, ನಾನು ಡುಮ್ಮಿ ಅಂತ ಹೇಳಿಕೊಳ್ತಾಳಲ್ಲ ನಿನ್ನ ಮಗಳು, ಏನನ್ನಬೇಕು ಇದಕ್ಕೆ?’ ಎಂದು ಚಂದ್ರಣ್ಣ ತಲೆ ಮೇಲೆ ಕೈಹೊತ್ತುಕೊಂಡಿದ್ದರು. ‘ಅಲ್ಲಿಂದಾ ಫೋನ್ ಮಾಡಿದವನ ಪ್ರಶ್ನೆ ಅಷ್ಟು ಸ್ಪಷ್ಟವಾಗಿದ್ದರೆ ಇಲ್ಲಿಂದಾ ಮಾತಾಡುವ ನನ್ನ ಉತ್ತರ ಸಹ ಸ್ಪಷ್ಟವಾಗಿರಬೇಕು ತಾನೇ?’ ಎಂದು ವಿಶಾಲಮ್ಮನ ಹತ್ತಿರ ನಾನು ಬೇತುಕೊಂಡಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಕಾಸರವಳ್ಳಿ, ಕಾಯ್ಕಿಣಿ ಮತ್ತು ಟ್ರಾಫಿಕ್!: ಸುಕನ್ಯಾ ಕನಾರಳ್ಳಿ ಅಂಕಣ

ನಮ್ಮ ಅಪಾರ್ಟ್ಮೆಂಟಿನ ತನಕವೂ ಇದ್ದ ಪೊಲೀಸರನ್ನು ಕಂಡಾಗ ಮಾತ್ರ ಇದು ಜಯಂತ ಎಫೆಕ್ಟ್ ಅಲ್ಲ ಅಂತ ಅರಿವಾಗಿತ್ತು. ಸೆಕ್ಯೂರಿಟಿ ಹತ್ತಿರ ನಿಲ್ಲಿಸಿ ಏನ್ರೀ ಇದು ಅವಾಂತರ ಎಂದು ವಿಚಾರಿಸಿದೆ. ‘ಅಯ್ಯೋ, ಮೇಡಮ್. ಸಿಎಂ ಬರ್ತಾ ಇದಾರೆ. ಪಕ್ಕದ ಹೋಟೆಲ್ಲಿನಲ್ಲಿ ಪ್ರಜಾವಾಣಿ ವಾರ್ಷಿಕ ಸಾಧಕಿಯರಿಗೆ ಅಭಿನಂದನೆ ಸಮಾರಂಭ ಇದೆ. ನಿಮ್ಮ ಹೆಸರು ಸಹ ಒಂದಲ್ಲಾ ಒಂದು ದಿನ ಬರುತ್ತೆ ನೋಡ್ತಾ ಇರಿ,’ ಎಂದು ರೇಗಿಸಿದಾಗ, ‘ಆ ಹೊತ್ತಿಗೆ ನಾನು ಇರೊಲ್ಲ. ಇದ್ದರೂ ಹೋಗೊಲ್ಲ,’ ಎಂದು ಉಡಾಫೆಯಿಂದ ನಕ್ಕು ಗೇಟನ್ನು ದಾಟಿ ಒಳಹೊಕ್ಕು ಸಮಾಧಾನದ ನಿಟ್ಟುಸಿರು ಬಿಟ್ಟೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣ

Read More

ಮೊಬೈಲ್ ಬಂದುದು.‌..: ವಿನಾಯಕ ಅರಳಸುರಳಿ ಅಂಕಣ

ದೂರವಿದ್ದಷ್ಟೂ ನಕ್ಷತ್ರದ ಅಂದ ಜಾಸ್ತಿಯಂತೆ. ಪಕ್ಕದ ಮನೆಯಲ್ಲಿದ್ದಾಗ ಯಕ್ಷಲೋಕದ ಮಾಯಾಗೋಲದಂತೆ ಭಾಸವಾಗುತ್ತಿದ್ದ, ಮರದ ಕೊರಡಿನಲ್ಲಿ ಕೆತ್ತಿ ಆಡುವಂತೆ ಪ್ರೇರೇಪಿಸಿದ್ದ ಮೊಬೈಲು ತನ್ನದೇ ಅಂಗೈಗೆ ಬಂದ ಕೆಲವೇ ದಿನಗಳಲ್ಲಿ ಮರದ ಕೊರಡಿನಷ್ಟೇ ಸಾಮಾನ್ಯ ಸಂಗತಿಯಾಗಿಹೋಯಿತು. ಅದರಲ್ಲಿ ಬರುತ್ತಿದ್ದ ಮೆಸೇಜ್, ಕಾಲ್‌ಗಳ ಜೊತೆ ಆಚೆ ಬದಿಯಿಂದ ಅವನ್ನು ಕಳಿಸುತ್ತಿದ್ದ ವ್ಯಕ್ತಿಗಳೂ ಹಳಸಿಹೋಗಿದ್ದರಿಂದ ಮೊಬೈಲು ಹಳೆಯ ಹೆಂಡತಿ/ಹಳೆಯ ಗಂಡನಂತೆ ತನ್ನಲ್ಲಿನ ಹೊಸತನವನ್ನು ಕಳೆದುಕೊಂಡುಬಿಟ್ಟಿತು.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಆಸ್ಟ್ರೇಲಿಯಾದಲ್ಲಿ ಪರಿಸರ ಹೋರಾಟ ಮತ್ತೂ…: ಡಾ. ವಿನತೆ ಶರ್ಮ ಅಂಕಣ

ಅವರ ಈ ಎಲ್ಲಾ ನಡೆಗಳಿಂದ ನಾಶವಾಗಿದ್ದು ಆಸ್ಟ್ರೇಲಿಯಾದ ಮೂಲನಿವಾಸಿಗಳಾದ ಅಬೊರಿಜಿನಲ್ ಮತ್ತು ಟೊರ್ರೆ ಸ್ಟ್ರೈಟ್ ದ್ವೀಪವಾಸಿಗಳ ಜನಪಂಗಡಗಳಲ್ಲಿ ಇದ್ದ ಬಹುಭಾಷೆಗಳು, ಬಹುಸಂಸ್ಕೃತಿಗಳು ಮತ್ತು ಬಹುತ್ವವನ್ನು ಅಪ್ಪಿಕೊಂಡಿದ್ದ ನೆಲ-ನಾಡುಗಳ ಸಂಬಂಧಗಳು, ಅಸ್ಮಿತೆ, ಪ್ರಾಪಂಚಿಕ ದೃಷ್ಟಿಕೋನಗಳು. ಅದೃಷ್ಟಕ್ಕೆ, ಅವು ಸಂಪೂರ್ಣವಾಗಿ ನಿರ್ನಾಮವಾಗದೆ, ನಿಧಾನವಾಗಿ ಮೂಲವಾಸಿಗಳು ಸುಧಾರಿಸಿಕೊಂಡರು. ನ್ಯಾಯಕ್ಕಾಗಿ, ತಮ್ಮ ನೆಲಕ್ಕಾಗಿ, ಅಸ್ತಿತ್ವಕ್ಕೆ, ಅಸ್ಮಿತೆಗೆ ಹೋರಾಡಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ