Advertisement

Category: ಅಂಕಣ

ಉದ್ದೇಶಪೂರ್ವಕವಲ್ಲದ ಒಂದು ಮಾತು ಕೊಲ್ಲಬಹುದು

ನಮ್ಮಲ್ಲಿನ್ನೂ ಮಾನವೀಯ ಸಂಬಂಧಗಳಿಗೆ ಬಹಳಷ್ಟು ಮೌಲ್ಯವಿದೆ, ಅರ್ಥವಿದೆ. ಯಾವುದೋ ಒಂದು ಅಪನಂಬಿಕೆ, ತಪ್ಪುಕಲ್ಪನೆ, ಅಪಾರ್ಥ ಎಲ್ಲವನ್ನು ಮುರಿದು ಹಾಕಬಾರದು. ಸಂಬಂಧಗಳೇನು ಪಟಕ್ಕನೇ ಕತ್ತರಿಸುವಷ್ಟು ತೆಳುವಾಗಿರುತ್ತವೆಯೇ? ತಾಳ್ಮೆಯಿಂದ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಯುದ್ಧಗಳೆ ನಿಂತಿರುವ ಉದಾಹರಣೆಗಳು ಕಣ್ಣಮುಂದಿವೆ. ಸಣ್ಣ ಪುಟ್ಟ ತಪ್ಪುಗಳಿಗೆ, ಜಗಳಗಳಿಗೆ, ಮುನಿಸುಗಳಿಗೆ ಮತ್ಯಾವುದೋ ಉದ್ದೇಶಪೂರ್ವಕವಲ್ಲದ ಮಾತಿಗೆ ಸಂಬಂಧಗಳು ಮುರಿದು ಬೀಳುತ್ತವೆ ಎಂದರೆ ಸಂಬಂಧಗಳಿಗೆ ಬೆಲೆ ಏನು?
ಇಸ್ಮಾಯಿಲ್‌ ತಳಕಲ್‌ ಅಂಕಣ

Read More

“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…

ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಪೇಟೇಸರದಲ್ಲಿ ನೋಡಿದ ಯಕ್ಷಗಾನ ಬಯಲಾಟದ ಸುತ್ತಮುತ್ತ

ಮಂಡಕ್ಕಿ ಅಂಗಡಿ ಇಡುವವರು ನಮ್ಮ ಚರ್ಚೆಯಲ್ಲಿ ಭಾಗವಹಿಸಿದರು, ಆದರೆ ಅವರು ಫೋಟೊ ತೆಗೆಯೋದು ಬೇಡ ಅಂದರು. ಮುಂಚೆ ಬಳೆ ವ್ಯಾಪಾರ ಮಾಡುತ್ತಿದ್ದರು. ಯಕ್ಷಗಾನವು ಇಷ್ಟ ಆಗುವುದರಿಂದ ಮಂಡಕ್ಕಿ ವ್ಯಾಪಾರ ಮಾಡುತ್ತಾರೆ. ಟೆಂಟ್ ಮೇಳದಲ್ಲಿ ಬರಿ ಭಾಗವತಿಕೆ ಕೇಳೋಕಾಗತ್ತೆ. ಭಾಗವತಿಕೆನೆ ಮುಖ್ಯ ಅವರ ಪ್ರಕಾರ. ‘ಯಕ್ಷಗಾನ ನೋಡಿದ ಹಾಗೂ ಆತು, ಗಂಜಿಗೆ ಕಾಸು ಆತು’, ಅದಕ್ಕೆ ಮಂಡಕ್ಕಿ ವ್ಯಾಪಾರ ಶುರುಮಾಡಿದೆ ಅಂದರು. ಇಲ್ಲಿಯ ಎಲ್ಲಾ ಕಲಾವಿದರೂ ಯಾವ ಪಾತ್ರವನ್ನಾದರೂ ಪದ್ಯ ನೋಡಿಕೊಂಡು ಮಾಡಬಲ್ಲವರಾಗಿದ್ದರು.
ಕೃತಿ ಪುರಪ್ಪೇಮನೆ ಬರಹ

Read More

ಆಸ್ಟ್ರೇಲಿಯದ ಮಳೆ ಪ್ರವಾಹಗಳು, ಸೋಲುಗೆಲುವುಗಳು

ಈ ಬಾರಿ ವಿಕ್ಟೊರಿಯಾ ರಾಜ್ಯವಷ್ಟೇ ಅಲ್ಲ ಅದರ ಕೆಳಗಿನ ಟಾಸ್ಮೆನಿಯಾ ರಾಜ್ಯದ ಭಾಗಗಳಲ್ಲೂ ಪ್ರವಾಹವುಂಟಾಗಿದೆ. ಟಾಸ್ಮೆನಿಯಾವು ಕಡಿಮೆ ಜನಸಂಖ್ಯೆ, ಎಲ್ಲೆಲ್ಲೂ ಕಂಗೊಳಿಸುವ ಪುರಾತನ ಹಸಿರು ಕಾಡುಗಳಿಗೆ ಹೆಸರಾದದ್ದು. ಹಾಗಾಗಿ ಪ್ರವಾಹದ ವಿಷಯ ಇನ್ನೂ ಅಪರೂಪದ ಸಂಗತಿ ಇಲ್ಲಿ. ಹೆಚ್ಚು ಕಡಿಮೆ ದೇಶದ ಇಡೀ ಪೂರ್ವಭಾಗದಲ್ಲಿ ಮಳೆಮೋಡಗಳ ಜೊತೆ ಚಿಂತೆಮೋಡಗಳು ಕೂಡ ಕವಿದಿವೆ. ದೇಶದ ಆಚೆಕಡೆಯ ಮರುಭೂಮಿಗಳು ಬೆಂದು ಕಾದು ಅಲ್ಲಿನ ಕಾವುಮೋಡಗಳು ಮರುಭೂಮಿಯನ್ನು ದಾಟಿಬಿಟ್ಟಿವೆ.
ಡಾ. ವಿನತೆ ಶರ್ಮ ಅಂಕಣ

Read More

ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ‌ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ‌. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ