Advertisement

Category: ಅಂಕಣ

ಈ ಹೃದಯವೆಂಬ ಏಕಾಂಗಿ ಬೇಟೆಗಾರ

ಕೆಲ್ಲಿಯವರ ಮಗಳು ಹನ್ನೆರಡು ವರ್ಷದ ಮಿಕ್‌ಳೊಂದಿಗೆ ಸಿಂಗರ್‌ನ ಸ್ನೇಹ ಶುರುವಾಗುತ್ತದೆ. ಸಂಗೀತದಲ್ಲಿ ತೀವ್ರ ಆಸಕ್ತಿಯಿರುವ ಮಿಕ್‌ಳಿಗೆ ರೆಕಾರ್ಡ್ ಪ್ಲೇಟುಗಳನ್ನು ಉಡುಗೊರೆಯಾಗಿ ಕೊಡುತ್ತಾನೆ ಸಿಂಗರ್. ಆದರೆ ತನ್ನ ಸುತ್ತಲಿನ ಲೋಕದೊಂದಿಗೆ ಈತನ ಸಂವಹನವೇನಿದ್ದರೂ ಏಕ ಮುಖವಾದುದು. ಇವನ ಮನಸ್ಸು ಉಳಿದವರಿಗೆಲ್ಲ ಮುಚ್ಚಿದ ಬಾಗಿಲು. ಯಾರೇ ಮಾತನಾಡಬೇಕಿದ್ದರೂ, ಅವರ ತುಟಿಯ ಚಲನೆ ನೋಡಿದರೆ ಸಾಕು ಅವರು ಏನನ್ನು ಹೇಳುತ್ತಿದ್ದಾರೆ ಅನ್ನುವುದು ಸಿಂಗರ್‌ನಿಗೆ ತಿಳಿದು ಹೋಗುತ್ತದೆ.

Read More

ಯಾವುದನ್ನು ಬರೆದರೆ ಓದುಗರನ್ನು ತಲುಪಬಹುದೆಂಬ ಕುತೂಹಲ

ವಾಕ್ಯದ ಕೊನೆಗೆ ಎಲಿಪ್ಸನ್ನು ಉಪಯೋಗಿಸಿದರೆ, ಇನ್ನೂ ಏನೋ ಮಾತು ಉಳಿದಿದೆ ಎಂದು ಅರ್ಥ. ಸಂಭಾಷಣೆಯ ರೂಪದಲ್ಲಿರುವ ವಾಕ್ಯದ ನಡುವೆ ಎಲಿಪ್ಸ್ ಬರೆದರೆ, ಮಾತನಾಡುವ ವ್ಯಕ್ತಿ ಮಾತನ್ನು ನುಂಗಿದ ಎಂದು ಅರ್ಥ. ಒಟ್ಟಿನಲ್ಲಿ ಎಲಿಪ್ಸನ್ನು ಬಳಸಿದರೆ ಎಲ್ಲೋ ಏನೋ ಬಿಟ್ಟುಹೋಗಿದೆ ಎಂದು ಅರ್ಥ. ಆದ್ದರಿಂದ ಈ ಎಲಿಪ್ಸನ್ನು ಎಷ್ಟು ಕಡಿಮೆಯಾಗುತ್ತೋ ಅಷ್ಟು ಕಡಿಮೆ ಬಳಸುವುದು ಒಳ್ಳೆಯದು ಎನ್ನುತ್ತದೆ ಇಂಗ್ಲೀಷ್ ವ್ಯಾಕರಣ. ಎಲಿಪ್ಸ್ ಚಿಹ್ನೆಯನ್ನು ಎಲ್ಲಿ ಉಪಯೋಗಿಸಬೇಕು, ಎಲ್ಲಿ ಉಪಯೋಗಿಸಬಾರದು…”

Read More

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಲಾಂಡೇಯ್: ಅಫ್ಘನ್ ಹೆಣ್ಣುಮಕ್ಕಳ ಅಕ್ಷರಸಮರ

ಲಾಂಡೇಯ್ ಸುತ್ತಲಿನ ಲೋಕದ ಕುರಿತಾದ ಗಹನ ವಿಚಾರಗಳನ್ನು, ಕಟುವಾಸ್ತವಗಳನ್ನು ಹಿಡಿದಿಡುವ ಮತ್ತು ಇತರರೊಂದಿಗೆ ಹಂಚಿಕೊಳ್ಳುವ ಮಾಧ್ಯಮ. ಹಾಗಾಗಿ, ಲಾಂಡೇಯ್ ರಚನೆಗಳು ನೋವಿನಿಂದ ಕೂಡಿರಬಹುದು ಅಥವಾ ಕಠೋರ ಟೀಕೆಯಿಂದ; ಹಾಸ್ಯದಿಂದ ತುಂಬಿರಬಹುದು ಅಥವಾ ವ್ಯಂಗ್ಯದಿಂದ. ಹಾಗೆಂದು, ಲಾಂಡೇಯ್ ಕೇವಲ ಬಂಡಾಯ ಕಾವ್ಯವೆಂದೇನೂ ಅಲ್ಲ; ಶೋಕ, ಪ್ರೇಮ, ದುರಂತಗಳೂ ಅದಕ್ಕೆ ಗ್ರಾಸವಾಗುವ ವಿಷಯವಾಗಬಹುದು. ಎಲ್ಲ ಕಾವ್ಯವೂ ಮೂಲದಲ್ಲಿ ಲಾಂಡೇಯ್ ತರವೇ ಅಲ್ಲವೇ – ಕರೆಯುವುದು…”

Read More

ಹಾಗಾದರೆ ರಾಜಕೀಯದಲ್ಲೂ ಅಡುಗೆ ಮನೆಯದ್ದೇ ಮೌಲ್ಯಮಾಪನವೆಂದಾದರೆ..

ಸ್ಟ್ರೇಲಿಯಾದಲ್ಲಿ  ಜೂಲಿಯಾ ಪ್ರಧಾನಮಂತ್ರಿಯಾದ ಹೊಸತರಲ್ಲೇ ಆಕೆಯ ಬಗ್ಗೆ ನಾನಾತರಹದ ಸುದ್ದಿಗಳು, ಅಪನಿಂದನೆಗಳು, ಅವಹೇಳನಕಾರಿ ಮಾತುಗಳು ಹುಟ್ಟಿದ್ದವು. ಉದಾಹರಣೆಗೆ, ಆಕೆಯ ಮನೆ ಅಡುಗೆಮನೆಯ ಫೋಟೋವನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ, ‘ನೋಡಿ, ಅಡುಗೆಮನೆ ಎಷ್ಟು ಖಾಲಿಯಾಗಿ ಬರಡುಬರಡಾಗಿದೆ, ಆಕೆ ಅಡುಗೆ ಮಾಡುವುದಿಲ್ಲ, ಆಕೆಗೆ ತಾಯ್ತನವೂ ಇಲ್ಲ, ಇಂಥಾ ಹೆಣ್ಣು ನಮ್ಮ ಸಮಾಜಕ್ಕೆ ಮಾದರಿಯಾಗಬಲ್ಲರೇ ಎಂದು ವಿಡಂಬನೆ ಮಾಡಲಾಗಿತ್ತು’. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ