ಸಂಸ್ಕೃತಿಗಳ ಮರುಜೇವಣಿಯಲ್ಲಿ ತೊಡಗಿರುವ ಶಿವಪ್ರಕಾಶರ ಕಾವ್ಯ
ಈ ಬಹುಮುಖಿ ಸಂವಾದದ ಮೂಲಕ ಶಿವಪ್ರಕಾಶರ ಕಾವ್ಯ ಕನ್ನಡ ಸಂಸ್ಕೃತಿಯ ಅಷ್ಟೇ ಏಕೆ ಭಾರತೀಯ ಸಂಸ್ಕೃತಿಯ ಮುಖ್ಯಗುಣವಾದ ಬಹುರೂಪಿತನವನ್ನು ಆವಾಹಿಸಿಕೊಂಡಿದೆ. ಕನ್ನಡ ಸಂವೇದನೆಯ ಅಸಲೀ ಗುಣವೆಂದರೆ ಅದು ಆದಿಮ ಕಾಲದಿಂದಲೂ ಅಂದರೆ ಶಂಗಂ ಸಾಹಿತ್ಯ, ಕವಿರಾಜ ಮಾರ್ಗದ ಕಾಲದಿಂದಲೂ ಹಲವು ಭಾಷೆ-ಸಂಸ್ಕೃತಿ-ಮೌಲ್ಯಗಳನ್ನು ಪ್ರತಿನಿಧಿಸುವ ಮಾರ್ಗ. ದೇಸಿ ಲೌಕಿಕ ಸಾಮಾಜಿಕ ಅನುಭಾವಿಕ ಧಾರ್ಮಿಕ ತತ್ವಶಾಸ್ತ್ರೀಯ ಅನುಭವಗಳೆಲ್ಲವನ್ನೂ ಏಕೀಭವಿಸಿಕೊಳ್ಳುವ ಗುಣವನ್ನು ಹೊಂದಿದೆ.
ಎಚ್.ಎಸ್. ಶಿವಪ್ರಕಾಶ್ ಅವರ ಕಾವ್ಯದ ಕುರಿತು ಎಸ್. ಸಿರಾಜ್ ಅಹಮದ್ ಬರಹ