Advertisement

Category: ಅಂಕಣ

ಕಬೂಲ್…..

ನಿಶ್ಚಿತಾರ್ಥಕ್ಕೆ ಮೂರು ದಿನ ಉಳಿದಿತ್ತು. ಅದೇನಾಯಿತೋ ಕಾಣೆ. ರಾತ್ರಿ ಮನೆಯಲ್ಲಿ ಮಲಗಿದ್ದವಳು ಬೆಳಗ್ಗಿಗೆ ಕಾಣಲಿಲ್ಲ. ಊರೆಲ್ಲಾ ಹುಡುಕಾಯಿತು. ಸುಳಿವಿಲ್ಲ, ಸುದ್ದಿಲ್ಲ. ಅಮ್ಮ ಪಕ್ಕದೂರಿನ ದರ್ಗಾಕ್ಕೆ ಹೋಗಿ ”ಎಲ್ಲಾರ ಇರ್ಲಿ ಸುಖವಾಗಿರ್ಲಿ” ಅಂತ ದುವಾ ಕೇಳಿಕೊಂಡು ಬಂದ್ಲು. ಬಾಬಾ ‘ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ’ ಅನ್ನೊ ಗಾದೆ ನಿಜವಾಗಬಾರದೆಂದು ಉಳಿದ ನಾವು ನಾಲ್ಕು ಹೆಣ್ಣು ಮಕ್ಕಳನ್ನ ಹೆಚ್ಚು ಹೆಚ್ಚು ಕಾಯಲು ಶುರುಮಾಡಿದ. ಸಹಜವಾಗಿಯೇ ಪಾತಿ ಮತ್ತು ಸಯೀದನ ಮದುವೆ ಮುರಿದುಬಿದ್ದಿತ್ತು. ದಾದಾಪೀರ್‌ ಜೈಮನ್‌ ಬರಹ

Read More

ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

 ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಗುರುಪ್ರಸಾದ ಕುರ್ತಕೋಟಿ ಹೊಸ ಅಂಕಣ ‘ಗ್ರಾಮಡ್ರಾಮಾಯಣ’

ಸಾಕಷ್ಟು ಸಂಬಳ ಒದಗುವ ಐಟಿ ವಲಯದಲ್ಲಿ ಉದ್ಯೋಗ ನಿರ್ವಹಿಸುವಾಗ, ಕಂಪ್ಯೂಟರ್ ಗಳ ಪರದೆ ಕಣ್ಣು ಕೀಲಿಸಿ ಕುಳಿತು ದಣಿವಾದಾಗ ಹಳ್ಳಿ ಮನೆಯ, ಹೊಲಗದ್ದೆಗಳ ಕಂಪು ಮನಸ್ಸನ್ನು ಕಾಡುವುದುಂಟು. ಹಾಗೆಯೇ ತಾನೂ ಕೃಷಿ ಮಾಡುವ ಅವಕಾಶವಿದ್ದಿದ್ದರೆ ಎಷ್ಟು ಚೆನ್ನಾಗಿತ್ತು ಎಂಬ ಕನಸೂ ಮೊಳಕೆಯೊಡೆಯುವುದು. ಹೀಗೆ ಕನಸುಗಳ ಬೆನ್ನತ್ತಿ ಕೃಷಿ ಕ್ಷೇತ್ರದತ್ತ ಮುಖ ಮಾಡಿದವರು ಗುರುಪ್ರಸಾದ ಕುರ್ತಕೋಟಿ. ತಮ್ಮ ಕನಸಿನ ಹಾದಿಯಲ್ಲಿ ಕಂಡ ವಿಚಾರಗಳನ್ನು, ತಮ್ಮ ಅನುಭವಗಳನ್ನು ಅವರು ‘ಗ್ರಾಮ ಡ್ರಾಮಾಯಣ’  ಎಂಬ ಈ ಅಂಕಣದಲ್ಲಿ ಬರೆಯಲಿದ್ದಾರೆ.  ಅವರ ಮೊದಲ ಬರಹ  ಇಲ್ಲಿದೆ. 

Read More

ಚಿತ್ತಾಲರ ಕಾದಂಬರಿ ಪ್ರಪಂಚದಲ್ಲಿ ಒಂದೆರಡು ಹೆಜ್ಜೆ

ಕಥಾನಾಯಕ ಪುರುಷೋತ್ತಮ, ಆತನ ತಾಯಿ ಮತ್ತು ಬಳಗದ ನಡುವೆ ನಡೆಯುವ ಕಥಾನಕಗಳೇ ಈ ಕಾದಂಬರಿಯ ವಸ್ತು. ಜೊತೆಗೆ ಒಂದು ಮಹಾನಗರ ಮತ್ತೂ ದೊಡ್ಡದಾಗಿ ವಿಸ್ತರಣೆಯಾಗಬೇಕಾದರೆ ನಡೆಯುವ ತಲ್ಲಣಗಳು, ಹಣ ಅಧಿಕಾರದ ಮುಂದೆ ಮಾನವೀಯತೆ ಗೌಣವಾಗಿ ತನ್ನ ಸ್ವಾರ್ಥಕ್ಕಾಗಿ ಯಾವ ಕೆಲಸಕ್ಕೂ ಇಳಿಯಬಹುದಾದ ಮನುಜನ ಕ್ರೂರತನ, ತನ್ನ ಪ್ರೀತಿಯ ನೆಲವನ್ನು ಉಳಿಸಿಕೊಳ್ಳಲು ಎಲ್ಲಾ ಸ್ವಾರ್ಥಗಳ ಬಿಟ್ಟು ಮಾಡುವ ಹೋರಾಟ ಎಲ್ಲವೂ ಬಹಳ ಸುಂದರವಾಗಿ‌ ನಿರೂಪಿತಗೊಂಡಿದೆ
ಓದುವ ಸುಖ ಅಂಕಣದಲ್ಲಿ ಯಶವಂತ ಚಿತ್ತಾಲರ ಮೂರು ಕೃತಿಗಳ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ವಿಯೆಟ್ನಾಮ್ ನಲ್ಲಿರುವ ಚಂಪಾ ಸಾಮ್ರಾಜ್ಯದ ನೋಟಗಳು

ನಾಲ್ಕನೇ ಶತಮಾನದಿಂದ ೧೩ ನೇ ಶತಮಾನದ ವರೆಗೂ ಆಳಿದ ಚಂಪಾ ಸಾಮ್ರಾಜ್ಯವು ಆಮೇಲೆ ಚೈನಿಸ್ , ಡ ವಿಯೆಟ್ ಹಾಗೂ ಪ್ರಬಲರಾದ ಕಾಂಬೋಡಿಯಾದ ಖ್ಮೇರ್ ರಾಜರುಗಳಿಗೆ ಮಣಿದು ಕೊನೆಗೆ ಅಳಿದೇಹೊಯಿತು. ಅವರ ಭೌಗೋಳಿಕ ಪ್ರದೇಶಗಳನ್ನು ಇಂದ್ರಪುರ, ಅಮರಾವತಿ, ವಿಜಯಾ ಕೌತುರಾ ಮತ್ತು ಪಾಂಡುರಂಗ ಎಂದು ಕರೆಯುತ್ತಿದ್ದರು. ಮಿಸಾನ್ ಕಣಿವೆಯು ಅಮರಾವತಿಯ ಭಾಗವಾಗಿತ್ತು. ಅಲ್ಲಿಂದ ಅವರು ಶತ್ರುಗಳಿಂದ ಹಿಮ್ಮೆಟ್ಟಿ ಹೋದಂತೆ ಕಣಿವೆಯೂ ಅನಾಥವಾಗುತ್ತಾ ಹೋಯಿತು. ‘ದೇವ ಸನ್ನಿಧಿ’ ಅಂಕಣದಲ್ಲಿ ಗಿರಿಜಾ ರೈಕ್ವ ವಿಯೆಟ್ನಾಂ ಕುರಿತು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ