Advertisement

Category: ಅಂಕಣ

ಪಿಜ್ಜಾ ಡೆಲಿವರಿ ಹುಡುಗನೂ ಹಾಗೂ ಓಲ್ಡ್ ಮಾಂಕ್ ಪರಮಾತ್ಮನೂ

ಹೊರಗಡೆಯಿಂದ ನಿಂತು ನಾವು ಸಾವಿರ ಹೇಳಬಹುದು. ಆದರೆ ಒಳಗಿದ್ದು ಕೆಂಡ ಹಾಯುತ್ತಿರುವವರ ಪರಿಸ್ಥಿತಿಗಳು ಭಿನ್ನವಾಗಿರುತ್ತವೆ. ಪ್ರೀತಿ ಮತ್ತು ಯುದ್ಧದಲ್ಲಿ ಎಲ್ಲವೂ ಹಿತ ಎನ್ನುವ ಹಾಗೆ; ಏಕ್ತಾ ಕಪೂರ್ ಸೀರಿಯಲ್ಲುಗಳಲ್ಲಿರುವಂತೆ ಅದೆಷ್ಟೋ ಬಾರಿ ಬೇರೆಯಾಗಿ ಮತ್ತೆ ಮತ್ತೆ ಕೂಡಿಕೊಳ್ಳಲೂಬಹುದು. ಮಾತಿನ ಕೊನೆಯಲ್ಲಿ ‘ಹೋಗ್ಲಿ ಬಿಡೋ ಯಣ. ಬಿಟ್ಟೆ ಬಿಡ್ತೀನಿ ಅತಾಗ. ಹೊಯ್ಕೋತ ಹೋಗ್ಲಿ!’ ಎಂದೇನೋ ಅಂದ. ದಾದಾಪೀರ್‌ ಜೈಮನ್ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ದೂರದೂರಿನ ನೆಂಟತನವೂ, ನೆರೆಹೊರೆಯವರ ಸ್ನೇಹಹಸ್ತವೂ

ಆಸ್ಟ್ರೇಲಿಯ ವಸಾಹತುಶಾಹಿ ಆಡಳಿತದಿಂದ ಕ್ರಮೇಣ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬದಲಾದರೂ ದೇಶವನ್ನು ಆಳುವುದು ಬಿಳಿಯ ರಾಜಕಾರಣಿಗಳೆ ಎನ್ನುವುದು ಸರ್ವೇಸಾಮಾನ್ಯ ಸತ್ಯ. ಇಂಗ್ಲಿಷ್ ಭಾಷೆಯ ಜೊತೆ ಆಮದಾಗಿ ಬಂದಿದ್ದು ವ್ಯವಸ್ಥೆ. ಹೀಗಾಗಿ ಆಸ್ಟ್ರೇಲಿಯಾವು ಇಂಗ್ಲಿಷ್ ಭಾಷೆಯ ಪಾಶ್ಚಾತ್ಯ ದೇಶ. ಈ ಪಟ್ಟದೊಡನೆ ಬಳುವಳಿಯಾಗಿ ಬಂದಿರುವುದು, ನಂಬಿರುವುದು ದೂರದೂರಿನ ನೆಂಟತನ. ಮಾತೃದೇಶ ಬ್ರಿಟನ್, ಅಣ್ಣನಾಗಿ ಅಮೆರಿಕ, ಕಿರಿತಂಗಿಯಾಗಿ ನ್ಯೂ ಝಿಲಂಡ್, ಬಂಧುಬಾಂಧವರು ಯುರೋಪಿಯನ್ ದೇಶದವರು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜೋಕು ಮಾಡಲು ಬಳಸುತ್ತಿದ್ದ ಪದದ ನಿಜ ಅರ್ಥ ತಿಳಿಯಿತು

ಮೋಹನ ಸ್ವಾಮಿ ಒಂದು ಕಥಾ ಸಂಕಲನವಾದರೂ ನಿಧಾನವಾಗಿ LGBT ಸಮುದಾಯದೆಡೆಗಿನ ನನ್ನ ಮನೋಭಾವನೆಯನ್ನು ಬದಲಾಯಿಸಿಕೊಳ್ಳಲು ಸಹಾಯಮಾಡಿತು. ನನ್ನೆದುರು ಆ ಸಮುದಾಯದ ವ್ಯಕ್ತಿಗಳು ಸಿಕ್ಕಾಗ ಮಾಮೂಲಿ ಗಂಡು ಹೆಣ್ಣುಗಳ ಹಾಗೇ ಮಾತನಾಡಲು, ಹರಟೆ ಹೊಡೆಯಲು ಸಾಧ್ಯವಾಯಿತು. ಹಾಗಾದರೆ ನಾನು ಈ ವಿಚಾರಲ್ಲಿ ನನ್ನ ಯೋಚನೆಯನ್ನು ನೂರಕ್ಕೆ ನೂರು ಬದಲಿಸಿಕೊಂಡೆನೇ? ಎಂದು ಕೇಳಿದರೆ ಉತ್ತರ ಗೊತ್ತಿಲ್ಲ, ಅಥವಾ ಇಲ್ಲವೆನ್ನಿಸುತ್ತದೆ.
ಓದುವ ಸುಖ ಅಂಕಣದಲ್ಲಿ ವಸುಧೇಂದ್ರರ “ಮೋಹನಸ್ವಾಮಿ” ಕೃತಿಯ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ನಂಬಿ ಬದುಕಿದವರ ಕಥೆ

ಝುಹೆಬಾನ್ ಎಂಬ ಮಧ್ಯವಯಸ್ಕನೊಬ್ಬರನ್ನು ಮಾತಿಗೆಳೆದಾಗ ಅವರು ದರ್ಗಾಹದ ಇತಿಹಾಸವನ್ನು ಬಿಚ್ಚಿಡುತ್ತಾ ಹೋದರು. ಸುಮಾರು ಎರಡುನೂರ ಎಪ್ಪತ್ತೈದು ವರ್ಷಗಳ ಹಿಂದೆ ಟಿಪ್ಪು ಮಸ್ತಾನ್, ಮಾಣಿಕ್ ಮಸ್ತಾನ್ ಮತ್ತು ತವಕ್ಕಲ್ ಮಸ್ತಾನ್ ಎಂಬ ಮೂವರು, ನವಾಬ್ ಹೈದರ್ ಆಲಿ ಕಟ್ಟಿಸುತ್ತಿದ್ದ ಕಲ್ಲಿನರಮನೆಯ ಕೆಲಸಕ್ಕೆಂದು ಬಂದರು. ಧರ್ಮನಿಷ್ಠರಿದ್ದ ಆ ಮೂವರೂ ಕೆಲಸವೇ ದೇವರೆಂದು ದುಡಿಯುತ್ತಿದ್ದರೂ ಪಗಾರದ ದಿನ ಮಾತ್ರ ಕಾಣೆಯಾಗಿಬಿಡುತ್ತಿದ್ದರಂತೆ!
ದಾದಾಪೀರ್‌ ಜೈಮನ್‌ ಬರೆಯುವ ‘ಜಂಕ್ಷನ್‌ ಪಾಯಿಂಟ್‌’ ಅಂಕಣ

Read More

‘ಊಲುರು ಮಾತು’ ಎಂಬ ಹೊಸ ಭಾಷ್ಯ

ದೇಶೀಯ ಮಟ್ಟದಲ್ಲಿ ಆಡಳಿತ ನಡೆಸುವ ಪಾರ್ಲಿಮೆಂಟಿಗೆ ಅಬೊರಿಜಿನಲ್ ಜನರ ಸಮಿತಿಯನ್ನು ನೇಮಿಸಿ ಅವರ ದನಿಗೆ ಪುನಃಶ್ಚೇತನ ಕೊಡುವ ಭರವಸೆಯನ್ನು ಆಸ್ಟ್ರೇಲಿಯಾದ ಹೊಸ ಸರ್ಕಾರ ನೀಡಿದೆ.  ಅಷ್ಟೇ ಅಲ್ಲ, ದೇಶದ ಸಂವಿಧಾನದಲ್ಲಿ ಅವರ ದನಿಯನ್ನು ಸೇರ್ಪಡಿಸುವ ಮಾತನ್ನು ಕೊಟ್ಟಾಗಿದೆ. ಹೊಸ ಪ್ರಧಾನಮಂತ್ರಿಗಳ ಮಾತಿನಿಂದ ಅಬೊರಿಜಿನಲ್ ಜನಸಮುದಾಯಗಳ ನಾಯಕರಲ್ಲಿ, ಹಿರಿಯರಲ್ಲಿ ಸಂಚಲನೆ ಮೂಡಿದೆ. ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮಾ ಅವರು ಆಸ್ಟ್ರೇಲಿಯಾದ ವರ್ತಮಾನಗಳನ್ನು ಬರೆದಿದ್ದಾರೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ