Advertisement

Category: ಅಂಕಣ

ಸ್ಥಿರವಲ್ಲದ ಕಾಯದ ಸುತ್ತ ‘ಕಾಯಾ’ದ ಕಥಾಹಂದರ

ಸಮಂತಾ ಬೆಳೆಯುತ್ತಾ ‘ಹನಿ’ ಎನ್ನುವ ಹೆಂಗಸಿನೊಡನೆ ಸಲಿಂಗ ಸಂಬಂಧದಲ್ಲಿ ಜೊತೆಯಾಗುತ್ತಾಳೆ. ತನ್ನ ಪ್ರಿಯತಮೆ ಹನಿಯ ಕಲೆಗಳನ್ನು ಹೋಗಲಾಡಿಸಲು ಪ್ಲಾಸ್ಟಿಕ್ ಸರ್ಜರಿಗೆಂದು ಮಲೀಕನ ಹತ್ತಿರ ಬರುತ್ತಾಳೆ. ಮಲೀಕ ಹನಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುವಾಗ, ತಕ್ಕ ಮಟ್ಟಿಗೆ ಧಡೂತಿ ತೂಕದ ಸಮಂತಾಳಿಗೂ ಪ್ಲಾಸ್ಟಿಕ್ ಸರ್ಜರಿಗೆ ಪ್ರಚೋದಿಸಿ ಒಪ್ಪಿಸುತ್ತಾನೆ; ಸಮಂತಾಳಿಗೆ ಮೇಲಿನಿಂದ ಕೆಳಗಿನವರೆಗೂ ಕಾಸ್ಮೆಟಿಕ್ ಸರ್ಜರಿ ಮಾಡುತ್ತಾನೆ. ಸಮಂತಾಳ ಪ್ಲಾಸ್ಟಿಕ್ ಸರ್ಜರಿಯ ಹೊತ್ತಿಗೆ ಮಲೀಕ ಮತ್ತು ಸಮಂತಾ ಇಬ್ಬರೂ ಜೊತೆಗಿದ್ದು ಮದುವೆಯಾಗುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕತ್ತಲಿಗೆ ಬೆಳಕಿನ ಬೊಟ್ಟು ಇಟ್ಟಂತೆ ಇರುವ ಚಂದ್ರ..

‘ಅಸಲಿಗೆ ಇದನ್ನೇ ನಾಟಕ ಅಂದುಕೊಂಡಿದ್ದೆ. ಅಕ್ಷರ ರೂಪದಲ್ಲಿ ಇರುವಷ್ಟು ಹೊತ್ತು ಅದು ನಾಟಕವೇ. ಕೃತಿಯೇ. ಚರ್ಚಿತ ವಸ್ತುವೇ. ಆದರೆ ನಾಟಕ ಅಂದರೆ ಅಷ್ಟೇ ಅಲ್ಲ. ನಮ್ಮ ನಡುವಿನ ಮನುಷ್ಯರ ಢಾಳಾದ ಚಿತ್ರಣ ಅಕ್ಷರಗಳಲ್ಲಿ ರೂಪು ತಳೆಯುತ್ತ ಒಂದು ರೂಪು ಪಡೆಯುವುದನ್ನು ಮೊದಮೊದಲು ನಾನೂ ನಾಟಕ ಅಂತಲೇ ಅಂದುಕೊಂಡಿದ್ದೆ. ಆದರೆ ನಂತರದಲ್ಲಿ ನಾನು ಅರಿತ ಸತ್ಯ ಅಂದರೆ ಈ ಅಕ್ಷರರೂಪದ ನಾಟಕ ರಂಗದ ಮೇಲೆ ರೂಪು ತಳೆಯಬೇಕಾದ ಪೂರ್ವದಲ್ಲಿ ಒಂದು ಮಹಾನ್ ನಾಟಕದ ಅನಾವರಣ ಆಗತೊಡಗುತ್ತದೆ.’
ಎನ್.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ದಾಂಪತ್ಯ ವ್ಯವಸ್ಥೆಯ ಕಟು ವಿಮರ್ಶೆ

ಹಾಗೆ ನೋಡಿದರೆ ಸ್ವಾತಂತ್ರ್ಯ ಚಳವಳಿ- ಮುಖ್ಯವಾಗಿ ರಾಷ್ಟ್ರೀಯತೆಯ ಉಚ್ಛ್ರಾಯದ ಸಂದರ್ಭದಲ್ಲಿ ಹೆಣ್ಣಿನ ಸ್ಥಾನಮಾನ, ಶಿಕ್ಷಣ ಮೊದಲಾದವುಗಳ ಬಗ್ಗೆ ಬಹಳ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಿತು. ಕನ್ನಡದ ಮೊದಲ ಕಾದಂಬರಿಗಳಲ್ಲಿ ಮತ್ತು ಭಾರತದ ಇತರ ಭಾಷೆಗಳ ಆರಂಭದ ಕಾದಂಬರಿಗಳಲ್ಲೂ ಹೆಣ್ಣಿನ ಪ್ರಶ್ನೆ ಬಹಳ ಮುಖ್ಯವಾಗಿ ಚರ್ಚಿತವಾಯಿತು. ಹಾಗಿದ್ದರೂ ಹೆಣ್ಣಿನ ಸ್ಥಿತಿಯಲ್ಲಿ ನಿರ್ಣಾಯಕವಾದ ಬದಲಾವಾಣೆ ಯಾಕೆ ಸಾಧ್ಯವಾಗಲಿಲ್ಲ? ಸ್ವಾತಂತ್ರ್ಯ ಚಳವಳಿ ತನ್ನ ತೀವ್ರತೆಯನ್ನು ಮುಟ್ಟಿದರೂ, ರಾಷ್ಟ್ರೀಯವಾದಿ ಭಾವನೆಗಳು ಪರಾಕಾಷ್ಠೆಗೆ ತಲುಪುತ್ತಿದ್ದರೂ ಸ್ತ್ರೀ ಸ್ವಾತಂತ್ರ್ಯದ ಪ್ರಶ್ನೆ ಯಾಕೆ ಇದ್ದಕ್ಕಿದ್ದಂತೆ ಗೌಣವಾಯಿತು ಎಂಬ ಬಗ್ಗೆ ಪಾರ್ಥಾ ಚಟರ್ಜಿಯಂಥ ಚಿಂತಕರು ಆಳವಾದ ಚಿಂತನೆ ನಡೆಸಿದ್ದಾರೆ.

Read More

ಹೀಗೊಂದು ‘ಭಿನ್ನ ಸಾಮಾನ್ಯ’ರ ಪ್ರೇಮಚರಿತೆ

‘ಜೀವನದಲ್ಲೊಂದು ಘಳಿಗೆ ಬಂದಿತು. ನಾನೊಬ್ಬ ಗೇ ಎನ್ನುವುದೇ ನನ್ನ ಟ್ರು ಐಡೆಂಟಿಟಿ ಎಂದು ಅನಿಸೋಕೆ ಶುರುವಾಯಿತು. ಆಗ ನಾನು ನನ್ನ ತಂದೆ ತಾಯಿಗೆ ಹೇಳಲೇಬೇಕಾಯಿತು. ಅಪ್ಪ ಮೊದಲಿಗೆ ನೀನು ಮನೆಗೆ ವಾಪಸ್ ಬರಬೇಕೆಂದರೆ ಅದೆಲ್ಲ ಬಿಡಬೇಕು ಎಂದರು. ಬಿಡುವುದಕ್ಕೆ ಅದೇನದು? ನನ್ನನ್ನ ನಾನಿರುವ ಹಾಗೆ ಒಪ್ಪಿಕೊಳ್ಳದಿದ್ದರೆ ನಾನು ಬರುವುದಿಲ್ಲ ಎಂದಿದ್ದೆ. ಕೂಡಲೇ ಫೋನ್ ಕಟ್ ಮಾಡಿದ್ದರು. ಆಮೇಲೇನಾಯಿತೋ ಏನೋ ಮತ್ತೆ ಅವರಿಂದ ಫೋನ್ ಬಂದಿತು… ನಾವಿಬ್ಬರು ಬೆಂಗಳೂರಿನಲ್ಲಿ ಜೊತೆಗಿರಲು ಶುರುಮಾಡಿದಾಗ ನಿನಗೊಬ್ಬಳು ಹೆಂಗಸು ಬೇಕೇ ಬೇಕು ಅಂದ್ರು.’

Read More

ಇಂತೀ, ನಿನ್ನ ಪ್ರೀತಿಸುವ…

ನನ್ನನ್ನು ಅನುಕೂಲಕ್ಕೆ ಬಳಸಿಕೊಂಡರೂ, ಅದು ನಾನೆ ಮನಸಾರೆಯಾಗಿ ಕೊಟ್ಟ ಅವಕಾಶ. ನನ್ನ ಮೇಲೆ ಪ್ರೀತಿ ಹೆಚ್ಚಲಿ ಎಂದಿದ್ದ ಸ್ವಾರ್ಥ. ಹಾಗೇನಾದರೂ ಯಾವತ್ತಾದರೂ ಮತ್ತೆ ನನ್ನನ್ನು ನಿನ್ನ ಅನುಕೂಲಕ್ಕೆ ಉಪಯೋಗಿಸಿಕೊಳ್ಳಬೇಕೆನಿಸಿದರೆ ನೆನಪಿಸಿಕೊ. ನನ್ನ ಮನಸ್ಸು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಪ್ರೀತಿ ಎಂದರೆ ಕೊಟ್ಟು ಕೊಳ್ಳುವ ವ್ಯಾಪಾರವಲ್ಲ, ಎಲ್ಲವನ್ನೂ ನೀಡುವ ತ್ಯಾಗವಲ್ಲ, ಕಸಿದುಕೊಳ್ಳುವ ದುರ್ಬುದ್ಧಿಯಲ್ಲ, ನಮಗಾಗಿಯೆ ಕೊಡುವ ಸ್ವಾರ್ಥ. ನೋಡುಗರಿಗೆ ಪ್ರೀತಿಯಲ್ಲಿ ಮೋಸ ಕಾಣಿಸಬಹುದು ಆದರೆ ಪ್ರೀತಿಸುವವರಲ್ಲಿ ಕಾಣಿಸಿದರೆ ಅದು ಪ್ರೀತಿಯೆ ಅಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ