Advertisement

Category: ಅಂಕಣ

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಅಪರಾಧಕ್ಕೆ ತಕ್ಕ ಶಿಕ್ಷೆ ಅಂದರೇನರ್ಥ?

ಬಿಸಿಲು, ಉಪವಾಸ, ಸುತ್ತಲಿನ ಕೊಳಕು, ದೊಡ್ಡವರ ಸಣ್ಣತನ… ಮುಂತಾದವುಗಳಿಂದ ಅವನು ಬೇಸತ್ತಿದ್ದಾನೆ. ಇವನ ಒಳಿತು ಮತ್ತು ಭವಿಷ್ಯಕ್ಕಾಗಿ ತಂಗಿ ದುನ್ಯಾ ಸಿರಿವಂತನಾದ ಲೂಷನ್‍ನನ್ನು ಇಷ್ಟವಿಲ್ಲದಿದ್ದರೂ ವರಿಸಲು ಸಿದ್ಧವಾಗಿರುವ ವಿಷಯ ಈಗಷ್ಟೇ ಅವನಿಗೆ ತಾಯಿಯ ಪತ್ರದಿಂದ ತಿಳಿದಿದೆ. ಏನನ್ನಾದರೂ ಗಂಭೀರವಾಗಿ ಯೋಚಿಸುವಾಗ ಕೈಕಟ್ಟಿ ಅತ್ತಿಂದಿತ್ತ ಸರಸರನೆ ಓಡಾಡುವ ತಂಗಿಯ ಚಿತ್ರ ಅವನ ಕಣ್ಣ ಮುಂದಿದೆ.
ಕಾವ್ಯಾ ಓದಿದ ಹೊತ್ತಿಗೆ ಅಂಕಣದಲ್ಲಿ ಫ್ಯದೊರ್ ದಾಸ್ತಯೇವ್ಸ್ಕಿಯ ಪ್ರಸಿದ್ಧ ಕಾದಂಬರಿ “ಕ್ರೈಂ ಅಂಡ್‌ ಪನಿಷ್ಮೆಂಟ್‌” ಕುರಿತು ಬರೆದಿದ್ದಾರೆ ಕಾವ್ಯಾ ಕಡಮೆ

Read More

ಕನ್ನಡವ ಪೊರೆದ ಚೇತನಗಳ ನೆನಪಿನಲ್ಲಿ…

‘ಸಿರಿಸಂಪಿಗೆ’ ನಾಟಕದಲ್ಲಿ ಬಹಳ ಹಾಡುಗಳಿವೆ. ಅಲ್ಲಿಯೇ ಹಾರ್ಮೋನಿಯಂ ಹಿಡಿದುಕೊಂಡು ರಾಗ ಹಾಕುತ್ತಿದ್ದರು ಬಸವಲಿಂಗಯ್ಯನವರು. ಅವರದು ಅದ್ಭುತ ಶಾರೀರ. ನಾಟಕದಲ್ಲಿ ಎಲ್ಲ ಹಾಡುಗಳನ್ನು ರಿಹರ್ಸಲ್ ಸಮಯದಲ್ಲೇ ನಮ್ಮ ಕಣ್ಣೆದುರೇ ರಾಗ ಹಾಕಿದರು, ಹಾಡಿಸಿದರು. ನಾವೆಲ್ಲ ಎಲ್ಲ ಹಾಡುಗಳನ್ನೂ ತಾಲೀಮು ಕೂಡ ಮಾಡಿದ್ದೆವು. ಒಂದು ಸಂಜೆ ಅದೇನೆನಿಸಿತೋ, ‘ಇದು ಯಾಕೋ ಸರಿ ಇಲ್ಲ. ನಾಟಕದ ಕಡೀ ಹಾಡು, ಭೈರವಿ ರಾಗದಾಗs ಇರಬೇಕು,’ ಎಂದು ಮತ್ತೆ ಪೇಟಿ ಹಿಡಕೊಂಡು ಭೈರವಿ ರಾಗದಲ್ಲಿ ನಾಟಕದ ಕೊನೆಯ ಹಾಡಿಗೆ ಇನ್ನೊಂದು ಧಾಟಿ ಹಚ್ಚಿದರು.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ರಾಜರಥದಲ್ಲಿ ವಿರಾಜಮಾನರಾದ ಭುವನಮ್ಮನ ಕತೆ

‘ನಮ್ಮನೆಯವನಿಗೆ ಊಟಾನು ನಾನೇ ತಿನಿಸಬೇಕು. ತಿಂಡಿನೂ ನಾನೆ ತಿನಿಸಬೇಕು. ಅವ್ನ ಪ್ರತಿ ಕೆಲ್ಸನೂ ನಾನೇ ಮಾಡಿಕೊಡಬೇಕು. ಸದಾ ನನ್ ಹಿಂದೇನೆ ಸುತ್ತುತ್ತಾ ಇರುತ್ತೆ ಅಸಾಮಿ. ಪ್ರೀತಿ ವಿಷಯಕ್ಕೆ ಬಂದಾಗ ಒಂದು ಎಳ್ಳಷ್ಟೂ ಕೂಡ ಕಡಿಮೆ ಮಾಡಿಲ್ಲ. ನನ್ನನ್ನು ಜೀವಕ್ಕೆ ಜೀವಕ್ಕಿಂತ ಪ್ರೀತಿಸ್ತಾರೆ. ಆ ವಿಷ್ಯದಲ್ಲಿ ನಾನು ತುಂಬಾ ತುಂಬಾ ಪುಣ್ಯವಂತೆ.’ಎಂದು ಮಿಂಚುಗಣ್ಣಾಗಿ ಆಕೆ ಹೇಳಿದ್ದು ಇಂದಿಗೂ ನೆನಪಿದೆ.  ‘ಆದ್ರೆ ದುಡ್ಡಿನ ಜವಾಬ್ದಾರಿ ಅಂದ್ರೆ ಉಹೂ ಎಂದುಬಿಡುತ್ತಾರೆ’  ಎಂದು ಆಕೆ ಸೇರಿಸಿದರು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ ಬರಹ 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ