Advertisement

Category: ಅಂಕಣ

ರಾಜರಥದಲ್ಲಿ ವಿರಾಜಮಾನರಾದ ಭುವನಮ್ಮನ ಕತೆ

‘ನಮ್ಮನೆಯವನಿಗೆ ಊಟಾನು ನಾನೇ ತಿನಿಸಬೇಕು. ತಿಂಡಿನೂ ನಾನೆ ತಿನಿಸಬೇಕು. ಅವ್ನ ಪ್ರತಿ ಕೆಲ್ಸನೂ ನಾನೇ ಮಾಡಿಕೊಡಬೇಕು. ಸದಾ ನನ್ ಹಿಂದೇನೆ ಸುತ್ತುತ್ತಾ ಇರುತ್ತೆ ಅಸಾಮಿ. ಪ್ರೀತಿ ವಿಷಯಕ್ಕೆ ಬಂದಾಗ ಒಂದು ಎಳ್ಳಷ್ಟೂ ಕೂಡ ಕಡಿಮೆ ಮಾಡಿಲ್ಲ. ನನ್ನನ್ನು ಜೀವಕ್ಕೆ ಜೀವಕ್ಕಿಂತ ಪ್ರೀತಿಸ್ತಾರೆ. ಆ ವಿಷ್ಯದಲ್ಲಿ ನಾನು ತುಂಬಾ ತುಂಬಾ ಪುಣ್ಯವಂತೆ.’ಎಂದು ಮಿಂಚುಗಣ್ಣಾಗಿ ಆಕೆ ಹೇಳಿದ್ದು ಇಂದಿಗೂ ನೆನಪಿದೆ.  ‘ಆದ್ರೆ ದುಡ್ಡಿನ ಜವಾಬ್ದಾರಿ ಅಂದ್ರೆ ಉಹೂ ಎಂದುಬಿಡುತ್ತಾರೆ’  ಎಂದು ಆಕೆ ಸೇರಿಸಿದರು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ ಬರಹ 

Read More

ಮತ್ತೊಂದು ಜನಪದವನ್ನು ಗೌರವಿಸುವ ವಿನಯಶೀಲತೆಗೆ ಕಾಯುತ್ತಾ..

ಒಂದು ಕರಕುಶಲ ಮಳಿಗೆಯಲ್ಲಿ ಇರಿಸಿದ್ದ ಗಣೇಶನ ವಿಗ್ರಹಕ್ಕೆ ‘ಬುದ್ಧ’ ಎಂದು ಲೇಬಲ್ ಇತ್ತು. ನಾನು ಮಾಲೀಕಳ ಬಳಿ ಹೋಗಿ ‘ನೋಡಿ, ಅದು ಗಣೇಶನ ಪ್ರತಿಮೆ, ದಯವಿಟ್ಟು ಆ ‘ಬುದ್ಧ’ ಲೇಬಲ್ ತೆಗೆದುಹಾಕಿ’ ಎಂದರೆ ಆಕೆ ಉಡಾಫೆಯಿಂದ ‘ನನ್ನ ಸ್ಟಾಫ್ ಒಬ್ಬಳು ಆ ಲೇಬಲ್ ಹಚ್ಚಿದ್ದು. ನಾಳೆ ಬಂದಾಗ ಅವಳಿಗೆ ಹೇಳುತ್ತೀನಿ’ ಎನ್ನುವುದೇ! ಅಂದರೆ ಬೇರೆ ಸಂಸ್ಕೃತಿ, ಧರ್ಮ, ನಂಬಿಕೆಗಳಿಗೆ ಅಲ್ಲಿ ಕಿಂಚಿತ್ತೂ ಬೆಲೆಯಿರಲಿಲ್ಲ. ಹತ್ತು ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಧಾರಾಳವಾಗಿ ಕಾಣಿಸುತ್ತಿದ್ದ ಅಬೊರಿಜಿನಲ್ ಜನ ಈಗ ಯಾಕಿಲ್ಲ ಎನ್ನುವ ನನ್ನ ಪ್ರಶ್ನೆಗೆ ಸ್ವಲ್ಪಮಟ್ಟಿಗೆ ಉತ್ತರ ದೊರಕಿತ್ತು.
ಡಾ. ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಅಂಕಣ

Read More

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಹೆಸರು ಧರಿಸಲೊಲ್ಲದ ಅನಾಮಧೇಯರು

ಈ ಮಿಡಲ್ ಸಿಸ್ಟರ್, ಹದಿನೆಂಟು ವರ್ಷದ ಯುವತಿ. ಅವಳಿಗೆ ಪಕ್ಕದೂರಿನಲ್ಲಿ ತನ್ನ ಮತಕ್ಕೆ ಸೇರದ ಒಬ್ಬ ‘ಮೇ ಬಿ’ ಬಾಯ್‍ಫ್ರೆಂಡ್ ಕೂಡ ಇದ್ದಾನೆ. “ನಾನು ಯಾವತ್ತೂ ಹತ್ತೊಂಬತ್ತನೆಯ ಶತಮಾನದ ಕಾದಂಬರಿಗಳನ್ನೇ ಓದುತ್ತೇನೆ, ಇಪ್ಪತ್ತನೆಯ ಶತಮಾನದ ರಾಜಕೀಯದಿಂದ ತಪ್ಪಿಸಿಕೊಳ್ಳಲು ನಾನೇ ಕಂಡುಕೊಂಡ ಶಾಂತಿಮಾರ್ಗವಿದು” ಎನ್ನುವ ಮಿಡಲ್ ಸಿಸ್ಟರ್ ಮನೆಯಿಂದ ಕೆಲಸಕ್ಕೆ, ಕೆಲಸದಿಂದ ಮನೆಗೆ ಸಾಗುವ ರಸ್ತೆಯಲ್ಲಿ ಪುಸ್ತಕ ಓದುತ್ತ ನಡೆಯುತ್ತಾಳೆ. ಓದುವ ಸಂಸ್ಕೃತಿ ಇರದ, ಅಷ್ಟೇನೂ ವಿದ್ಯಾವಂತರಿಲ್ಲದ ಈ ಪ್ರಾಂತ್ಯದಲ್ಲಿ ಅವಳ ಈ ವಿಚಿತ್ರ ಹವ್ಯಾಸಕ್ಕೆ ಮೂಗು ಮುರಿಯುವವರೇ ಎಲ್ಲ.
ಕಾವ್ಯಾ ಓದಿದ ಹೊತ್ತಿಗೆ ಅಂಕಣ.

Read More

ಆಲೋಚನೆಗಳನ್ನು ರೂಪಿಸಿದ ಪತ್ರಿಕೆಗಳೂ, ಕಾಡುವ ಸೋಂಕುಗಳ ವಿಚಾರವೂ..

‘ತರಂಗ’ವಾಗಲಿ, ‘ಸುಧಾ’ ಆಗಲಿ ಮನೆಗೆ ಬರುವುದು ಒಂದು ದಿನ ತಡವಾದರೂ ಚಡಪಡಿಕೆಯಾಗುತ್ತಿತ್ತು. ಪತ್ರಿಕೆ ಹಾಕುವ ಹುಡುಗ ಬರುವ ವೇಳೆಗೆ ಹದ್ದಿನಂತೆ ಕಾಯುತ್ತ ಕೂತಿರುತ್ತಿದ್ದೆವು. ಪತ್ರಿಕೆಯ ಹುಡುಗ ‘ಸುಧಾ’ ಅಥವಾ ‘ತರಂಗ’ವನ್ನು ಬಾಗಿಲಿನಿಂದ ಎಸೆಯುತ್ತಿದ್ದಂತೆ ಆ ಪತ್ರಿಕೆಯ ಮೇಲೆ ಮುಗಿಬೀಳುತ್ತಿದ್ದೆವು. ಎಷ್ಟೊಂದು ಸಲ ನಮ್ಮ (ನನ್ನ ಸಹೋದರರು) ನಡುವೆ ಮಿನಿಯುದ್ಧಗಳು ಮಹಾಯುದ್ಧಗಳು ಜರುಗಿವೆ. ಒಮ್ಮೆಯಂತೂ ಅದೇ ತಾನೆ ಮನೆಯ ಹೊಸ್ತಿಲ ಒಳಗೆ ಬಂದ ‘ತರಂಗ’ ಇಂಥದ್ದೇ ಯುದ್ಧದಲ್ಲಿ ಹರಿದು ಹೋದದ್ದಿದೆ!
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ