Advertisement

Category: ದಿನದ ಅಗ್ರ ಬರಹ

ಪ್ರತಿಭೆಯ ತಿಜೋರಿಯಿಂದ ಜಗತ್ತನ್ನು ಶ್ರೀಮಂತಗೊಳಿಸಿದವನು

ಬರಹಗಾರನಾಗಲು ಲಂಡನ್ ಗೆ ಬಂದಿಳಿದ ಷಾ ಸರಿಯಾದ ಉದ್ಯೋಗ ಇಲ್ಲದೆ ತಾಯಿಯಿಂದ ಮತ್ತು ಆಕೆಯ ಹೊಸ ಗಂಡನಿಂದ ವಾರಕ್ಕೆ ಸಿಗುವ ಒಂದು ಪೌಂಡ್ ಹಣದ ಮೇಲೆ ಅವಲಂಬಿತನಾಗಿದ್ದ. ಮಧ್ಯಾಹ್ನಗಳನ್ನು ಬ್ರಿಟಿಷ್ ಮ್ಯೂಸಿಯಮ್‌ನ ಓದುವ ಕೋಣೆಯಲ್ಲಿ ಕಳೆಯುತ್ತಿದ್ದ. ಶಾಲೆಯಲ್ಲಿ ಯಾವುದನ್ನು ಪಡೆಯಲಾಗಲಿಲ್ಲವೋ ಲೈಬ್ರರಿಯ ಓದಿನಲ್ಲಿ ಅವನ್ನು ಓದಿ ಗಳಿಸುವ ಪ್ರಯತ್ನ ಮಾಡುತ್ತಿದ್ದ. ಕಾದಂಬರಿ ಬರೆಯಲು ಶುರು ಮಾಡಿದ. ಇನ್ನು ಸಂಜೆಯ ಹೊತ್ತಿಗೆ ಉಪನ್ಯಾಸಗಳು ಚರ್ಚೆಗಳು ನಡೆಯುವ ಲಂಡನ್ ನ ತಾಣಗಳನ್ನು ಹುಡುಕಿಕೊಂಡು ಅಲೆಯುತ್ತಿದ್ದ.
‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ನಾಟಕಕಾರ ಬರ್ನಾರ್ಡ್‌ ಷಾ ಬಗ್ಗೆ ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಮನುಷ್ಯ ಮೃಗ ಸತ್ತೇ ಇಲ್ಲ

ಪ್ರಾಯದಲ್ಲಿ ಸ್ಪರ್ಶವೇ ಸ್ವರ್ಗಸುಖ. ಮುಪ್ಪಾದಾಗ ಕೈಗೆಟುಕದೆ ಕಳೆದು ಹೋದದ್ದರ ನೆನಪೇ ನರಕ. ಅಶ್ವಥ್ ಅವರ ಮುಂದೆ ತಣ್ಣಗೆ ಹೊಂಗೆ ಮರದ ಕೆಳಗೆ ಮಧ್ಯೆ ಮಧ್ಯೆ ಚಹಾ ಕುಡಿಯುತ್ತ ಸಾಕಷ್ಟು ಹೊತ್ತು ಮಾತಾಡಿದ್ದೆ. ಪೋಲಂಕಿ ಅವರು ಹೇಳಿದ್ದನ್ನೆಲ್ಲ ನನಗೆ ಬೇಕಾದಂತೆ ಮರು ಸೃಷ್ಟಿ ಮಾಡಿಕೊಂಡಿದ್ದೆ. `ವುಮೆನ್ ಇನ್ ಲವ್’ ಹಾಗೂ `ಲೇಡಿ ಚಾಟೆರ್‍ಲೀಸ್ ಲವರ್’ ಹೆಸರಿನ ಲಾರೆನ್ಸ್‌ ಕಾದಂಬರಿಗಳ ತಿರುವಿ ಹಾಕಿದ್ದೆ. ಯಾರಾದರು ಬಲ್ಲವರು ಒಂದು ಅಪರೂಪದ ಸಂಗತಿಯ ಹೇಳಿದ ಕೂಡಲೆ ಅದನ್ನು ಅರೆದು ಕುಡಿದು ನನಗೆ ಬೇಕಾದಂತೆ ಮಾರ್ಪಡಿಸಿಕೊಳ್ಳುತ್ತಿದ್ದೆ.
ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಮೂವತ್ತನೆಯ ಕಂತು

Read More

ಬ್ರಿಟಿಷ್ ಹ್ಯಾಟ್ ಮತ್ತು ಗಾಂಧಿಟೋಪಿ

ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು. ನನ್ನ ಜೀವನದಲ್ಲಿ ನಾನು ನೋಡಿದ ಮೊದಲ ದೊಡ್ಡವ್ಯಕ್ತಿ ಅವರಾಗಿದ್ದರು. ನಾನು ಒಂದನೆಯ ಇಯತ್ತೆಯ ವಿದ್ಯಾರ್ಥಿಯಾಗಿದ್ದಾಗಲೇ ಮನುಷ್ಯರು ಹೇಗೆ ಇರಬೇಕು ಎಂಬುದರ ಪಾಠವನ್ನು ಅವರನ್ನು ನೋಡುವುದರ ಮೂಲಕ ಕಲಿತೆ. ಇಂದಿಗೂ ಆ ಪಾಠವೇ ನನ್ನ ಬದುಕನ್ನು ರೂಪಿಸುತ್ತಿದೆ. ಹೀಗಾಗಿ ಅವರ ನೆನಪು ನನ್ನಲ್ಲಿ ಸದಾ ಹಸಿರಾಗಿದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 38ನೆಯ ಕಂತು ಇಲ್ಲಿದೆ.

Read More

ತಿಂಡಿ ಪೋತರ ಸ್ವರ್ಗದಲ್ಲಿ ವೆಜ್ ವೈವಿಧ್ಯ

ರೈಲು ಅಥವಾ ಬಸ್ಸು ಹತ್ತಿ ದಿನದ ಪ್ರಯಾಣ ಪ್ರಾರಂಭಿಸಿ ನಗರ ಪ್ರದೇಶವನ್ನು ದಾಟಿದರೆ ಕಣ್ಣು ಹಾಯಿಸುವಷ್ಟು ದೂರಕ್ಕೂ ಕಿತ್ತಳೆ ಅಥವಾ ನಿಂಬೆಯ ತೋಟಗಳು! ಕಾಪುವಿನ ಲೈಟ್ ಹೌಸ್ ಹತ್ತಿ ಸಮುದ್ರದ ವಿರುದ್ಧದ ದಿಕ್ಕಿಗೆ ನೋಡಿದರೆ ತೆಂಗಿನ ತೋಟ ಹೇಗೆ ಕಾಣುತ್ತದೆಯೋ ಹಾಗೆ! ಇದು ಹೊಸದಾಗಿ ಕಂಡಿದ್ದರಿಂದ ನಮಗೆ ಆಶ್ಚರ್ಯ. ಇವರು ಇಷ್ಟು ನಿಂಬೆ ಬೆಳೆದು ಏನು ಮಾಡುತ್ತಾರೆ? ಕಿತ್ತಳೆಯನ್ನು ಲೋಡುಗಟ್ಟಲೆ ಗೂಡ್ಸ್ ರೈಲಿನಲ್ಲಿ ತುಂಬಿ ಕಳಿಸಿದರೂ ಉಳಿಯುವಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ.
‘ದೂರದ ಹಸಿರು’ ಅಂಕಣದಲ್ಲಿ ಸಿಸಿಲಿಯನ್‌ ಓಡಾಟದಲ್ಲಿ ಸವಿದ ಹಲವು ಖಾದ್ಯಗಳ ಜೊತೆಗೆ ಅಲ್ಲಿನ ವಿಶೇಷ ಹಣ್ಣುಗಳ ಕುರಿತು ಬರೆದಿದ್ದಾರೆ ಗುರುದತ್ ಅಮೃತಾಪುರ

Read More

ಮೌಂಟ್‌ಅಬುವಿನ ಒಳಹೊರಗೆಲ್ಲ ಸುತ್ತುತ್ತಾ…

ಬೆಟ್ಟದ ದಾರಿ. ಸಂಜೆಯಾಗುವ ಮೊದಲೇ ಮೇಲೇರಬೇಕು ಎನ್ನುವ ಧಾವಂತದಲ್ಲೇ ಹೊರಟೆ. ಇಕ್ಕೆಲಗಳಲ್ಲೂ ಅರಾವಳಿ ಪರ್ವತಶ್ರೇಣಿಯ ಸ್ನಿಗ್ಧ ಸೌಂದರ್ಯಾಸ್ವಾದನೆ. ಸ್ವಪ್ನಲೋಕದ ದಾರಿಯಲ್ಲಿ ಪಯಣಿಸಿ ಸೂರ್ಯಾಸ್ತದ ವೇಳೆಗೆ ತಲುಪಿದ್ದು ಸಮುದ್ರಮಟ್ಟದಿಂದ 1200 ಮೀಟರುಗಳಷ್ಟು ಮೇಲಿರುವ, ಬೇಸಿಗೆ ಅರಮನೆಗಳ ನಗರ ಮೌಂಟಬುವನ್ನು. ಥಾರ್ ಮರುಭೂಮಿಯ ಈ ನಾಡಿಗೆ ಉಣ್ಣೆ ಬಟ್ಟೆಯನ್ನು ಹೊತ್ತಿ ಹೋಗುವ ಕಲ್ಪನೆಯೂ ನನಗಿರಲ್ಲಿಲ್ಲ. ಆದರೆ ಕಾಲಿಟ್ಟೊಡನೆ ಮೈನಡುಗಿಸಿತ್ತು ಅಲ್ಲಿನ ಹವೆ.
‘ಕಂಡಷ್ಟೂ ಪ್ರಪಂಚʼ ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ