Advertisement

Category: ದಿನದ ಅಗ್ರ ಬರಹ

ಅಮ್ಮ , ಆಸ್ಪತ್ರೆ ಮತ್ತು ಮೇಟ್ರಾನ್

ಆಸ್ಪತ್ರೆಗೆ ಬಂದ ಕೆಲವು ರೋಗಿಗಳ ಸಂಬಂಧಿಕರು ಮಾತ್ರ ಇಲ್ಲಿ ನಿಂತು ತಮ್ಮ ಕಡೆಯವರು ಬೇಗ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದರಾದರೂ ಶಿವ ಮಾತ್ರ ಕಿವುಡನಂತೆ ನಿಮೀಲನೇತ್ರನಾಗಿ ನಿಂತಿರುತ್ತಿದ್ದ. ಶಿವನನ್ನು ಸುತ್ತುವರಿದು ಬೆಳೆದಿದ್ದ ಹಸಿರ ಬಳ್ಳಿಗಳು ಆಗ ಶಿವನ ಹಿನ್ನಲೆಯ ಸೊಬಗನ್ನು ಇಮ್ಮಡಿಸಿದ್ದವು. ಈಗ ಅಲ್ಲಿ ಬಳ್ಳಿಯ ಬದಲು ಗೋಡೆಯ ದೇವಸ್ಥಾನ ತಲೆಯೆತ್ತಿದೆ. ಆಗಿನ ಹಸಿರ ವೈಭವವಿಲ್ಲದ ಶಿವ ಮತ್ತು ಅವನ ತಲೆಯ ಮೇಲಿನ ಗಂಗೆಯರು ಬಳಲಿದವರಂತೆ ಕಾಣುತ್ತಾರೆ. ಯಾರೋ ಕಲಾವಿದ ಶಿವನಿಗೆ ಪೊಲೀಸ್ ಮೀಸೆ ಮಾಡಿದ್ದು ಮಾತ್ರ ಆಗಿನಂತೆ ಈಗಲೂ ತಮಾಷೆಯಾಗಿ ಕಾಣುತ್ತದೆ.
ಡಾ. ಎಚ್.ಎಸ್. ಸತ್ಯನಾರಾಯಣ ಅವರ ಹೊಸ ಪ್ರಬಂಧ ಸಂಕಲನ “ಪನ್ನೇರಳೆ” ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ನೇಯ್ಗೆಯೆಂಬ ಸುದೀರ್ಘ ನಡಿಗೆ

ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರದೇಶದ ನೇಕಾರರು ನೇಯುವ ಈ ಸೀರೆಯ ವಿನ್ಯಾಸ ಅಪರೂಪವಾದುದು. ತಿಳಿ ಬಣ್ಣದ ಮೈ ಮತ್ತು ಗಾಢ ಬಣ್ಣದ ಅಂಚುಸೆರಗಿನ ಸೀರೆಯು ಕರಾವಳಿಯ ಹವಾಮಾನಕ್ಕೆ ಕ್ಷೇಮಭಾವ ಕೊಡುವಂತಹುದು. ಪರಿಸರಕ್ಕೆ ಧಕ್ಕೆ ಮಾಡದ ಸಾವಯವ ಉಡುಪು ಮಮತಾ ರೈ ಅವರಿಗೆ ಇಷ್ಟವಾಗಿರುವುದು ಕೇವಲ ವಿನ್ಯಾಸದ ಕಾರಣದಿಂದಲ್ಲ.ಬದುಕು ಪರಿಸರಕ್ಕೆ ಹತ್ತಿರವಾಗಿರಬೇಕು ಎಂಬಅವರ ಆಶಯವೇ ಅವರ ಈ ಕಾಯಕಕ್ಕೆ ಪ್ರೇರಣೆ. ಸೀರೆಯ ಪಯಣವೊಂದರ ಕುರಿತು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಜೀವನ ರೂಪಿಸಿಕೊಳ್ಳುವ ನಿರೀಕ್ಷೆಯಲ್ಲಿ ಕೆಲವು ಮಾತುಗಳು

ಗಂಟಿಚೋರ ಸಮುದಾಯ ಬಹುಶಃ ಹೊಟ್ಟೆಪಾಡಿನ ಕೆಲಸವಾಗಿ ಈ ಭಾಗದಲ್ಲಿ ಸ್ಥಳೀಯವಾಗಿ ಬಾವಿ ತೋಡುವ ಕೆಲಸಕ್ಕೆ ಹೊಂದಿಕೊಂಡಿರಬಹುದು ಅನ್ನಿಸುತ್ತದೆ. ಹಾಗಾಗಿ ಪರ್ಯಾಯ ವೃತ್ತಿಗಳನ್ನು ಕೈಗೊಳ್ಳಲು ಸರಕಾರ ತನ್ನ ಯೋಜನೆಗಳಲ್ಲಿ ಸಹಾಯ ಮಾಡಿದರೆ, ಈ ಸಮುದಾಯ ಈ ಅಪಾಯಕಾರಿ ವೃತ್ತಿಯಿಂದ ಬಿಡುಗಡೆ ಪಡೆಯಲು ಸಾಧ್ಯವಿದೆ. ಅಂತೆಯೇ ಇದೇ ವೃತ್ತಿಯನ್ನು ಸುರಕ್ಷಿತವಾಗಿ ಮುಂದುವರೆಯಲು ಸರಕಾರ ಆಧುನಿಕ ತಾಂತ್ರಿಕ ಸೌಲಭ್ಯವನ್ನು ಪಡೆಯಲು ಸಹಕರಿಸಬಹುದಾಗಿದೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಕೊನೆಯ ಕಂತು

Read More

ಪ್ರೀತಿ, ಕ್ರಾಂತಿ, ಸಾಹಿತ್ಯಕ್ಕೆ ಅಂತಃಕರಣವೇ ಅಂತರ್ಜಲ

ಕಥಾ ಪ್ರಕಾರದಲ್ಲಿ ನಾಗರೇಖ ಪ್ರಯೋಗಶೀಲರು ಎಂಬುದಕ್ಕೆ ‘ಸ್ಟಾಕ್ ಹೋಮ್ ಸಿಂಡ್ರೋಮ್’ನ್ನು ಹೆಸರಿಸಬಹುದು. ಕಥೆಗೆ ಮನಃಶಾಸ್ತ್ರದ ಹಿನ್ನೆಲೆ ಇದೆ. ನೋಯಿಸಿದವರನ್ನು ನಿಷ್ಠುರವಾಗಿ ನಿರಾಕರಿಸಲಾರದ ಅಸಹಾಯಕತೆಯಲ್ಲಿ ಅವರ ಬಾಂಧವ್ಯಕ್ಕೆ ಅಂಟಿಕೊಳ್ಳುವ ವಿಚಿತ್ರ ಮನೋವ್ಯಾಕುಲತೆಯಿದು. ಸಂಪ್ರೀತ, ಸಾತಮ್ಮ ಮತ್ತು ಡಾ. ಸುದತಿಯರ ಮನೋಮಾರ್ಗದ ಮೂಲಕ ಚಲಿಸುವ ಕಥಾ ರಥದ ನಿರೂಪಣೆ ವಿಶಿಷ್ಟವಾಗಿದೆ. ಡಾ. ಸುದತಿ ತನ್ನಂತೆಯೇ ಗಂಡನ ವ್ಯಗ್ರತೆಯನ್ನು ಪ್ರೀತಿಸುವ ಸಾತಮ್ಮನನ್ನು ವಿಷಾದದ ಕನ್ನಡಿಯಲ್ಲಿ ನೋಡುತ್ತಾಳೆ. ಸಿದ್ಧಾಂತವೊಂದರ ಅಳತೆಗೆ ಕಥೆಯನ್ನು ಹೊಲಿಯುವ ತಂತ್ರ ಹೊಸತನ್ನು ಹೇಳಲಾರದು.
ನಾಗರೇಖಾ ಗಾಂವಕರ ಹೊಸ ಕಥಾ ಸಂಕಲನ “ಮೌನದೊಳಗೊಂದು ಅಂತರ್ಧಾನ” ಕ್ಕೆ ಶ್ರೀಧರ ಬಳಗಾರ ಬರೆದ ಮುನ್ನುಡಿ

Read More

ಕಳೆದುಕೊಂಡವರ ನೆನಪಿನಲ್ಲಿ…

ಕರ್ಫ್ಯೂ ಆಗಿ ಅಂಚೆ ವ್ಯವಸ್ಥೆ ನಿಂತು ಹೋಗಿತ್ತು. ಒಂದು ಮುಖ್ಯವಾದ ಪಾರ್ಸೆಲ್ ಅಂಚೆ ಇಲಾಖೆಯಲ್ಲಿ ಸಿಕ್ಕಿಹಾಕಿಕೊಂಡಿತ್ತು. ಊರಿನಲ್ಲಿರುವ ಹೈಸ್ಕೂಲ್ ಗೆಳೆಯ ಆನಂದನಿಗೆ ಫೋನ್ ಮಾಡಿದ್ದೆ. ಅವರ ತಂದೆ ಊರಿನಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದರು. ‘ಏನಾದರೂ ಮಾಡಕ್ಕಾಗತ್ತಾ?’ ಕೇಳಿದ್ದೆ. ಆಗ ಚೆನ್ನಾಗೆ ಮಾತಾಡಿದ್ದ. ಅದಾಗಿ ಒಂದು ವಾರಕ್ಕೆ ಫೇಸಬುಕ್ಕಲ್ಲಿ ‘ರೆಸ್ಟ್ ಇನ್ ಪೀಸ್ ಆನಂದ್’ ಎಂದು ಸುದ್ದಿ ಬಂತು. ಕೋವಿಡ್ ಇಷ್ಟು ಹತ್ತಿರಕ್ಕೆ ಬಂತು. ಒಂದು ಸಾಂಕ್ರಾಮಿಕ ರೋಗ ಎಲ್ಲವನ್ನೂ ಹೀಗೆ ಕಸವನ್ನು ಬುಟ್ಟಿಯಲ್ಲಿ ಹಾಕಿ ಹೊತ್ತೊಯ್ಯುವಂತೆ ಮನುಷ್ಯರನ್ನು ಹೊತ್ತೊಯ್ಯಲು ಆರಂಭಿಸಿತ್ತು. ವ್ಯಾಪಾರವೇ ಇಲ್ಲದೆ ಜನ ಊಟಕ್ಕಾಗಿ ಪರದಾಡಿದ್ದರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್‌” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ