Advertisement

Category: ದಿನದ ಅಗ್ರ ಬರಹ

ಹಣತೆ ಹಿಡಿದ ವನಿತೆ

ಎಳವೆಯಿಂದಲೇ ನೈಟಿಂಗೇಲ್ ಗಣಿತವನ್ನು ಅಭ್ಯಾಸ ಮಾಡಿದ್ದಳು. ಹನ್ನೆರಡನೆಯ ವಯಸ್ಸಿನಲ್ಲಿ ಔಪಚಾರಿಕ ಶಿಕ್ಷಣ ಪಡೆಯುವ ಮೊದಲೇ ಅವಳು ಮಾಹಿತಿ ಸಂಗ್ರಹಿಸುವ, ಸಂಯೋಜಿಸುವ ಮತ್ತು ಪ್ರಸ್ತುತ ಪಡಿಸುವ ಬಗ್ಗೆ ಆಸಕ್ತಿ ವಹಿಸಿದ್ದಳು. ಗಣಿತಶಾಸ್ತ್ರ ಹಾಗು ಸಂಖ್ಯಾಶಾಸ್ತ್ರದ ಕುರಿತಾದ ಆಸಕ್ತಿ ಅವಳ ಜೀವನದುದ್ದಕ್ಕೂ ಜೊತೆಯಲ್ಲಿತ್ತು. ಮಾಹಿತಿಗಳನ್ನು ಸಂಗ್ರಹಿಸಿ ಅವಳು ಬಳಸಿಕೊಳ್ಳುತ್ತಿದ್ದ ರೀತಿ ನರ್ಸಿಂಗ್ ಹಾಗು ವೈದ್ಯಕೀಯ ಸುಧಾರಣೆಗಳ ಮೇಲೆ ಪ್ರಭಾವ ಬೀರಿತು. ಕ್ರಿಮಿಯಾ ಯುದ್ಧದ ಸಮಯದಲ್ಲಿ ಅವಳು ಸಂಗ್ರಹಿಸಿದ ಮಾಹಿತಿ ಒಳಹೊಳಹುಗಳನ್ನು ನೀಡಿತ್ತು.
ಯೋಗೀಂದ್ರ ಮರವಂತೆ ಬರೆಯುವ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಕುರಿತ ಬರಹ ನಿಮ್ಮ ಓದಿಗೆ

Read More

ಅಮ್ಮ , ಆಸ್ಪತ್ರೆ ಮತ್ತು ಮೇಟ್ರಾನ್

ಆಸ್ಪತ್ರೆಗೆ ಬಂದ ಕೆಲವು ರೋಗಿಗಳ ಸಂಬಂಧಿಕರು ಮಾತ್ರ ಇಲ್ಲಿ ನಿಂತು ತಮ್ಮ ಕಡೆಯವರು ಬೇಗ ಗುಣಮುಖರಾಗಲೆಂದು ಪ್ರಾರ್ಥನೆ ಸಲ್ಲಿಸುತ್ತಿದ್ದರಾದರೂ ಶಿವ ಮಾತ್ರ ಕಿವುಡನಂತೆ ನಿಮೀಲನೇತ್ರನಾಗಿ ನಿಂತಿರುತ್ತಿದ್ದ. ಶಿವನನ್ನು ಸುತ್ತುವರಿದು ಬೆಳೆದಿದ್ದ ಹಸಿರ ಬಳ್ಳಿಗಳು ಆಗ ಶಿವನ ಹಿನ್ನಲೆಯ ಸೊಬಗನ್ನು ಇಮ್ಮಡಿಸಿದ್ದವು. ಈಗ ಅಲ್ಲಿ ಬಳ್ಳಿಯ ಬದಲು ಗೋಡೆಯ ದೇವಸ್ಥಾನ ತಲೆಯೆತ್ತಿದೆ. ಆಗಿನ ಹಸಿರ ವೈಭವವಿಲ್ಲದ ಶಿವ ಮತ್ತು ಅವನ ತಲೆಯ ಮೇಲಿನ ಗಂಗೆಯರು ಬಳಲಿದವರಂತೆ ಕಾಣುತ್ತಾರೆ. ಯಾರೋ ಕಲಾವಿದ ಶಿವನಿಗೆ ಪೊಲೀಸ್ ಮೀಸೆ ಮಾಡಿದ್ದು ಮಾತ್ರ ಆಗಿನಂತೆ ಈಗಲೂ ತಮಾಷೆಯಾಗಿ ಕಾಣುತ್ತದೆ.
ಡಾ. ಎಚ್.ಎಸ್. ಸತ್ಯನಾರಾಯಣ ಅವರ ಹೊಸ ಪ್ರಬಂಧ ಸಂಕಲನ “ಪನ್ನೇರಳೆ” ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ನೇಯ್ಗೆಯೆಂಬ ಸುದೀರ್ಘ ನಡಿಗೆ

ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರದೇಶದ ನೇಕಾರರು ನೇಯುವ ಈ ಸೀರೆಯ ವಿನ್ಯಾಸ ಅಪರೂಪವಾದುದು. ತಿಳಿ ಬಣ್ಣದ ಮೈ ಮತ್ತು ಗಾಢ ಬಣ್ಣದ ಅಂಚುಸೆರಗಿನ ಸೀರೆಯು ಕರಾವಳಿಯ ಹವಾಮಾನಕ್ಕೆ ಕ್ಷೇಮಭಾವ ಕೊಡುವಂತಹುದು. ಪರಿಸರಕ್ಕೆ ಧಕ್ಕೆ ಮಾಡದ ಸಾವಯವ ಉಡುಪು ಮಮತಾ ರೈ ಅವರಿಗೆ ಇಷ್ಟವಾಗಿರುವುದು ಕೇವಲ ವಿನ್ಯಾಸದ ಕಾರಣದಿಂದಲ್ಲ.ಬದುಕು ಪರಿಸರಕ್ಕೆ ಹತ್ತಿರವಾಗಿರಬೇಕು ಎಂಬಅವರ ಆಶಯವೇ ಅವರ ಈ ಕಾಯಕಕ್ಕೆ ಪ್ರೇರಣೆ. ಸೀರೆಯ ಪಯಣವೊಂದರ ಕುರಿತು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಜೀವನ ರೂಪಿಸಿಕೊಳ್ಳುವ ನಿರೀಕ್ಷೆಯಲ್ಲಿ ಕೆಲವು ಮಾತುಗಳು

ಗಂಟಿಚೋರ ಸಮುದಾಯ ಬಹುಶಃ ಹೊಟ್ಟೆಪಾಡಿನ ಕೆಲಸವಾಗಿ ಈ ಭಾಗದಲ್ಲಿ ಸ್ಥಳೀಯವಾಗಿ ಬಾವಿ ತೋಡುವ ಕೆಲಸಕ್ಕೆ ಹೊಂದಿಕೊಂಡಿರಬಹುದು ಅನ್ನಿಸುತ್ತದೆ. ಹಾಗಾಗಿ ಪರ್ಯಾಯ ವೃತ್ತಿಗಳನ್ನು ಕೈಗೊಳ್ಳಲು ಸರಕಾರ ತನ್ನ ಯೋಜನೆಗಳಲ್ಲಿ ಸಹಾಯ ಮಾಡಿದರೆ, ಈ ಸಮುದಾಯ ಈ ಅಪಾಯಕಾರಿ ವೃತ್ತಿಯಿಂದ ಬಿಡುಗಡೆ ಪಡೆಯಲು ಸಾಧ್ಯವಿದೆ. ಅಂತೆಯೇ ಇದೇ ವೃತ್ತಿಯನ್ನು ಸುರಕ್ಷಿತವಾಗಿ ಮುಂದುವರೆಯಲು ಸರಕಾರ ಆಧುನಿಕ ತಾಂತ್ರಿಕ ಸೌಲಭ್ಯವನ್ನು ಪಡೆಯಲು ಸಹಕರಿಸಬಹುದಾಗಿದೆ.
ಡಾ. ಅರುಣ್ ಜೋಳದಕೂಡ್ಲಿಗಿ ಬರೆಯುವ ಗಂಟಿಚೋರರ ಕಥನ ಸರಣಿಯ ಕೊನೆಯ ಕಂತು

Read More

ಪ್ರೀತಿ, ಕ್ರಾಂತಿ, ಸಾಹಿತ್ಯಕ್ಕೆ ಅಂತಃಕರಣವೇ ಅಂತರ್ಜಲ

ಕಥಾ ಪ್ರಕಾರದಲ್ಲಿ ನಾಗರೇಖ ಪ್ರಯೋಗಶೀಲರು ಎಂಬುದಕ್ಕೆ ‘ಸ್ಟಾಕ್ ಹೋಮ್ ಸಿಂಡ್ರೋಮ್’ನ್ನು ಹೆಸರಿಸಬಹುದು. ಕಥೆಗೆ ಮನಃಶಾಸ್ತ್ರದ ಹಿನ್ನೆಲೆ ಇದೆ. ನೋಯಿಸಿದವರನ್ನು ನಿಷ್ಠುರವಾಗಿ ನಿರಾಕರಿಸಲಾರದ ಅಸಹಾಯಕತೆಯಲ್ಲಿ ಅವರ ಬಾಂಧವ್ಯಕ್ಕೆ ಅಂಟಿಕೊಳ್ಳುವ ವಿಚಿತ್ರ ಮನೋವ್ಯಾಕುಲತೆಯಿದು. ಸಂಪ್ರೀತ, ಸಾತಮ್ಮ ಮತ್ತು ಡಾ. ಸುದತಿಯರ ಮನೋಮಾರ್ಗದ ಮೂಲಕ ಚಲಿಸುವ ಕಥಾ ರಥದ ನಿರೂಪಣೆ ವಿಶಿಷ್ಟವಾಗಿದೆ. ಡಾ. ಸುದತಿ ತನ್ನಂತೆಯೇ ಗಂಡನ ವ್ಯಗ್ರತೆಯನ್ನು ಪ್ರೀತಿಸುವ ಸಾತಮ್ಮನನ್ನು ವಿಷಾದದ ಕನ್ನಡಿಯಲ್ಲಿ ನೋಡುತ್ತಾಳೆ. ಸಿದ್ಧಾಂತವೊಂದರ ಅಳತೆಗೆ ಕಥೆಯನ್ನು ಹೊಲಿಯುವ ತಂತ್ರ ಹೊಸತನ್ನು ಹೇಳಲಾರದು.
ನಾಗರೇಖಾ ಗಾಂವಕರ ಹೊಸ ಕಥಾ ಸಂಕಲನ “ಮೌನದೊಳಗೊಂದು ಅಂತರ್ಧಾನ” ಕ್ಕೆ ಶ್ರೀಧರ ಬಳಗಾರ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ