Advertisement

Category: ದಿನದ ಅಗ್ರ ಬರಹ

ಭುಪೇನ್ ಹಝಾರಿಕಾ ಮಗನ ಕನಸಿನ ನಕಾಶೆಯಿದು

2011ರ ನವೆಂಬರ್ ತಿಂಗಳ 5 ನೆಯ ತಾರೀಕಿನಂದು ತಮ್ಮ 85ನೆಯ ವಯಸ್ಸಿನಲ್ಲಿ ಮುಂಬೈನಲ್ಲಿ ತೀರಿಕೊಂಡ ಭುಪೇನ್ ಅವರ ಕಳೇಬರವನ್ನು ಗೌಹಾಟಿಯ ವಿಶ್ವವಿದ್ಯಾಲಯದ ಬಳಿಯ ಸ್ಥಳದಲ್ಲಿ ಸಮಾಧಿ ಮಾಡಲಾಗಿದೆ. 200 ಎಕರೆಗಳ ಜಾಗದಲ್ಲಿ ಸ್ಮಾರಕವೊಂದು ನಿರ್ಮಾಣವಾಗುತ್ತಿದೆ. ಅಲ್ಲಿ ಸಂಗ್ರಹಾಲಯದ ಜೊತೆಗೆ ಅಧ್ಯಯನ ಪೀಠ ಸ್ಥಾಪಿಸುವುದರ ಮೂಲಕ ಅಸ್ಸಾಮಿ ಶೈಲಿಯ ಸಂಗೀತ ಕಲಿಕೆಗೆ, ಪ್ರಸ್ತುತಿಗೆ ಒತ್ತು ಕೊಡುವ ಉದ್ದೇಶವಿದೆ. ಕಂಡಷ್ಟು ಪ್ರಪಂಚ ಅಂಕಣದಲ್ಲಿ ಅಂಜಲಿ ರಾಮಣ್ಣ  ಅವರು ಭುಪೇನ್ ಹಝಾರಿಕ ಅವರ ಕುರಿತು  ಬರೆದ ಬರಹ. 

Read More

ಮರದ ನೆರಳಿನಲ್ಲಿ…

ಮನೆಯ ಎದುರಿಗೆ ರಸ್ತೆಯ ಪಕ್ಕದಲ್ಲಿ ಜೀರಕನ ಮರ ಹಣ್ಣು ಬಿಟ್ಟಾಗ ನಮಗೆ ಆ ಮರದ ಆಕರ್ಷಣೆ.. ಹೊಂಬಣ್ಣದ ಜೀರ್ಕ ಹಣ್ಣುಗಳನ್ನು ದೋಟಿಗೆ ಎಟುಕಿಸಿ ಉದುರಿಸಿ ಹಿರಿಯರ ಕಣ್ಣು ತಪ್ಪಿಸಿ ಅಡಿಕೆ ಚಪ್ಪರದ ಮೇಲೆ ತೆಗೆದುಕೊಂಡು ಹೋಗಿ ಇಟ್ಟು.. ಅಡಿಗೆ ಮನೆಯಿಂದ ಉಪ್ಪು ಬಾಳೆಲೆ, ಬೆಲ್ಲ ಇನ್ನೊಬ್ಬರು ತರುವುದು. ಜೀರಿಗೆ ಮೆಣಸು ಮತ್ತೊಬ್ಬರು.. ಹಣ್ಣಿನ ತೊಳೆ ಬಿಡಿಸಿ ಬಾಳೆ ಎಲೆ ಮೇಲೆ ಉಪ್ಪು, ಮೆಣಸು ಬೆಲ್ಲ ಹಾಕಿ ಕಲೆಸಿ ಮತ್ತೆ ಚಿಕ್ಕ ಬಾಳೆ ಎಲೆ ತುಂಡಿನ ಮೇಲೆ ಎಲ್ಲರಿಗೂ ಹಂಚಿ ಆ ಕಟುವಾದ ಹುಳಿ, ಸಿಹಿ, ಖಾರದ ರುಚಿಯನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದೆವು..
ಡಾ. ಎಲ್.ಸಿ. ಸುಮಿತ್ರಾ ಬರೆದ ಪ್ರಬಂಧ

Read More

ಕಣ್ಮರೆಯಾಗುತ್ತಿರುವ ದೇಸೀ ಕಥನ, ಕಸುಬು ಹಾಗೂ ಅವುಗಳು ಪೊರೆದ ನುಡಿಸಂಪತ್ತು

ಒಂದು ದಿನ ಸಂಜೆ ಬುಡುಗೊಚ್ಚ ಕೊಪ್ಪಲಿನ ಮೆದೆಯಲ್ಲಿ ಹುಲ್ಲು ಹಿರಿಯುತ್ತಿದ್ದನಂತೆ. ಆಗ ಆಕಾಶದ ಕಡೆಯಿಂದ ಬೆಳ್ಳನೆಯ ಬೆಳಕೊಂದು ಇಳುಕಂಡು ಬಂದು ಅವನೆದುರಿನ ಬೇಲಿಯನ್ನು ಹೊಕ್ಕಿತ್ತಂತೆ. ಕಣ್ಮುಚ್ಚಿ ಬಿಡುವುದರೊಳಗೆ ಆ ಬೆಳಕು ಬೇಲಿಯನ್ನೆಲ್ಲಾ ಆವರಿಸಿಕೊಂಡು ಆ ಇಡೀ ಬೇಲಿಯನ್ನು ಬೆಳಗಿಸತೊಡಗಿತ್ತಂತೆ. ಗಾಬರಿಗೊಂಡ ಬುಡುಗೊಚ್ಚ ಹುಲ್ಲು ಹಿರಿಯುವುದನ್ನು ಬಿಟ್ಟು ಬೇಲಿಯನ್ನೇ ದಿಟ್ಟಿಸತೊಡಗಿದ್ದನಂತೆ.
ಎಸ್. ಗಂಗಾಧರಯ್ಯ ಬರೆದ ‘ಮಣ್ಣಿನ ಮುಚ್ಚಳ’ ಹೊಸ ಕಥಾ ಸಂಕಲನಕ್ಕೆ ಬರೆದುಕೊಂಡಿರುವ ಮಾತುಗಳು

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ

ಚಿಕ್ಕವನಿದ್ದಾಗ ತನ್ನನ್ನು ಎಲ್ಲರೂ ಅದೆಷ್ಟು ಕಾಳಜಿಯಿಂದ ಮಾತನಾಡಿಸುತ್ತಿದ್ದರೆಂದರೆ, ಗೆಳೆಯರೆಲ್ಲ ಹೊಟ್ಟೆಕಿಚ್ಚು ಪಡುವಷ್ಟು. ಶಾಲೆಗೆ ಹೋಗಿ ಬರುವಾಗ ‘ಮಾಳಿಗಿ ಶಂಕರಪ್ಪನಂತ ಗಟ್ಟಿ ಕುಳ ತನ್ನ ಕರೆದು ಮಾತಾಡದಂದ್ರ ಹುಡುಗಾಟ್ಕೀನ?’ ಅಂದುಕೊಳ್ಳುತ್ತಿದ್ದ. ಬೇರೆಯವರು ನಕ್ಕೊಂಡೇ ಕೇಳುತ್ತಿದ್ದರು “ಏನ್ಲೇ ಶಿದ್ಲಿಂಗ, ನಿಮ್ಮ ಶಂಕರಪ್ಪ ಏನಂದ?” ತಮ್ಮತಮ್ಮಲ್ಲೇ ಕಣ್ಣು ಮಿಟುಕಿಸುತ್ತಿದ್ದರು. “ನೀ ಹಾಕ್ಕೊಂಡ ಅಂಗಿ ಸರಿಯಾಗೇತೇನ್ಲೆ? ಚೊಣ್ಣ ಬರೋಬರಿ ಆಗೇತಿಲ್ಲ? ನಿಮ್ಮವ್ವ ಮನ್ಯಾಗ ಇದ್ಲೇನು?”
‘ನಾನು ಮೆಚ್ಚಿನ ನನ್ನ ಕತೆ’ಯ ಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ ‘ಪಿರಾಮಿಡ್ಡಿನಿಂದೆದ್ದು ಬಂದವನು’

Read More

ಹೊಸಕಾವ್ಯದ ಗುರು ಗೋಪಾಲಕೃಷ್ಣ ಅಡಿಗ

1955 ರ ನಂತರ ಸುಮಾರು ಕಾಲು ಶತಮಾನ ಕಾಲ ಅಡಿಗರು ಕನ್ನಡ ಕಾವ್ಯ ಲೋಕದಲ್ಲಿ ಗುರುಸಮಾನರಾಗಿ ಸ್ವೀಕರಿಸಲ್ಪಟ್ಟರು. ಹೊಸ ಪೀಳಿಗೆಯ ಸಾಹಿತಿಗಳು ಅವರ ಪ್ರಭಾವಕ್ಕೆ ಒಳಗಾದರು. ಅಡಿಗರ ಕಾವ್ಯವನ್ನು ಗಮನಿಸುವಾಗ ಅವರು ನವೋದಯ, ಪ್ರಗತಿಶೀಲ ಮತ್ತು ನವ್ಯ – ಈ ಮೂರೂ ಮಾರ್ಗಗಳಿಗೆ ಸೇರುವ ಕವಿತೆಗಳನ್ನು ಬರೆದು ಬೆಳೆದವರು ಎನ್ನುವುದು ತಿಳಿಯುತ್ತದೆ. ತಮ್ಮ ಹಿಂದಿನ ಕಾವ್ಯಮಾರ್ಗಗಳನ್ನು ಅರೆದು ಕುಡಿದವರಾದ ಕಾರಣ ಅಡಿಗರು ಅವುಗಳ ಮಿತಿಯನ್ನು ಹೇಳಿದಾಗ ಅದಕ್ಕೊಂದು ಅಧಿಕೃತತೆ ಪ್ರಾಪ್ತವಾಯಿತು ಮತ್ತು ಕವಿಗಳು ಅವರನ್ನು ಅನುಸರಿಸಿದರು. ಕರಾವಳಿಯ ಕವಿರಾಜಮಾರ್ಗ ಸರಣಿಯಲ್ಲಿ ಡಾ.ಬಿ. ಜನಾರ್ದನ ಭಟ್ ಹೊಸಕಾವ್ಯದ ಗುರು ಮೊಗೇರಿ ಗೋಪಾಲಕೃಷ್ಣ ಅಡಿಗರ ಕುರಿತು ಬರೆದಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ