Advertisement

Category: ದಿನದ ಅಗ್ರ ಬರಹ

ರವಿಶಂಕರ್‌ ಎಸ್. ಎಲ್. ಬರೆದ ಈ ಭಾನುವಾರದ ಕತೆ “ರೋಬಿಣಿ”

ಟೀನಾ ಒಂದು ದಿನ ರೋಬಿಣಿಯನ್ನು ಕರೆದು ಮನೆ ಕೆಲಸಗಳಲ್ಲಿ ಸಹಾಯ ಮಾಡಲು ಕೇಳಿದಳು. ರೋಬಿಣಿ ಕಡ್ಡಿತುಂಡರಿಸಿದಂತೆ ನಿರಾಕರಿಸಿದಳು. ರೋಬಿಣಿಯನ್ನು ಮುಂದಿನ ಬಾರಿ ಬದಲಾಯಿಸುವಾಗ ಮನೆ ಕೆಲಸಗಳನ್ನು ಮಾಡುವಂತಹ ಪ್ರೋಗ್ರಾಮ್ ಅಳವಡಿಸಲು ಬಿಎಂಐ ಕಂಪನಿಗೆ ಹೇಳಬೇಕು ಎಂದುಕೊಂಡಳು ಟೀನಾ. ಅದು ಸಾಧ್ಯವಿಲ್ಲವೆಂದು ಜಗ ಟೀನಾಗೆ ತಿಳಿಸಿ ಹೇಳಿದ. ಕಂಪನಿಯ‌ ಪ್ಯಾಕೇಜ್ ನಿಬಂಧದಂತೆ ಹಾಗೂ ರೋಬಾಟ್ಸ್ ರೈಟ್ಸ್ ಪ್ರಕಾರ, ಮಗುವಂತೆ ಸಾಕಲು ಪಡೆದ ರೋಬಾಟ್‌ಗಳಿಂದ ಮನೆಕೆಲಸಗಳನ್ನು ಮಾಡಿಸಲು ಸಾಧ್ಯವಿರಲಿಲ್ಲ.
ರವಿಶಂಕರ್‌ ಎಸ್. ಎಲ್. ಬರೆದ ಈ ಭಾನುವಾರದ ಕತೆ “ರೋಬಿಣಿ” ನಿಮ್ಮ ಓದಿಗೆ

Read More

ಇಲ್ಲಿ ಎಲ್ಲವೂ ಸರಕೇ!: ಸುಕನ್ಯಾ ಕನಾರಳ್ಳಿ ಅಂಕಣ

ಕೆಲವೇ ನಿಮಿಷಗಳಲ್ಲಿ ಕಳ್ಳತನದಿಂದ ಅವರನ್ನು ಒಳಗೆ ಕರೆದುಕೊಂಡು ಒಳಗಿಂದ ಬಾಗಿಲು ಜಡಿದುಕೊಂಡು ಇಡೀ ಕಟ್ಟಡಕ್ಕೆ ಆಧಾರವಾಗಿರುವ ಗೋಡೆಯ ಭಾಗವನ್ನು ಉರುಳಿಸಿದಳು. ಮುಂದಿನದೆಲ್ಲ ರಣರಂಪ. ಅದರ ಕೆಳಗೆ ಮತ್ತು ಮೇಲೆ ಇದ್ದ ಫ್ಲಾಟಿನವರು ಬಂದು ಏನು ಏನು ಎಂದು ನೋಡುವ ಹೊತ್ತಿಗೆ ಗೋಡೆ ಉರುಳಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹದಿನಾಲ್ಕನೆಯ ಬರಹ

Read More

ಭಕ್ತೆ-ಕಾವ್ಯ: ಸುಕನ್ಯಾ ಕನಾರಳ್ಳಿ ಅಂಕಣ

ಪ್ರಾಪಂಚಿಕ ಮದುವೆಗೆ ಬೆಚ್ಚಿ ಬೀಳುತ್ತಿದ್ದ ನಿದರ್ಶನಗಳಲ್ಲಿ ಸುಮಾರು ಹದಿನೇಳನೆಯ ಶತಮಾನದ ಕೇರಳದಲ್ಲಿದ್ದ ಅನುಭಾವಿನಿ ನಂಗ ಪೆಣ್ಣು ಒಂದು ಉತ್ತಮ ಉದಾಹರಣೆ. ಕೊಚ್ಚಿನ್ ರಾಜಾಸ್ಥಾನವಾದ ತ್ರಿಪ್ಪುನಿತ್ತುರದಲ್ಲಿದ್ದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದ್ದ ಈಕೆಯ ಮದುವೆಯ ದಿನ ಭರ್ಜರಿ ಮೆರವಣಿಗೆಯಲ್ಲಿ ವಧುವಿನ ಮನೆಗೆ ಬರುತ್ತಿದ್ದ ವರನಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ತ್ರಿಪ್ಪುನಿತ್ತುರದಲ್ಲಿದ್ದ ದೇವಸ್ಥಾನದ ವಿಷ್ಣುವಿನಲ್ಲಿ ಲೀನವಾಗಿದ್ದಳು. ಈಗಲೂ ನಂಗ ಪೆಣ್ಣು ಹಬ್ಬದ ದಿನದಂದು ಮೂರ್ತಿಯನ್ನು ವರನಾಗಿ ಮೆರವಣಿಗೆಯಲ್ಲಿ ಅವಳ ತಂದೆಯ ಮನೆಗೆ ಹೊತ್ತೊಯ್ಯಲಾಗುತ್ತದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಆರನೆಯ ಬರಹ

Read More

ಸುಂದರ ಕಾಡಿನ ರೋಚಕ ಕಥೆಗಳು ಭಾಗ -೩: ರೂಪಾ ರವೀಂದ್ರ ಜೋಶಿ ಸರಣಿ

ಈ ಹೂವು ಪಾರಿಜಾತದಂತೇ ತಾನೇ ತಾನಾಗಿ ಮರದಿಂದ ಉದುರುವಂಥದ್ದು. ಅದಕ್ಕೇ ನಾವೆಲ್ಲಾ ಬೆಳಗ್ಗೆ ಬೇಗನೆ ಎದ್ದು, ಮುಖ ತೊಳೆದವರೇ, ಆ ಮರದತ್ತ ಓಡುತ್ತಿದ್ದೆವು. ಕಾರಣ, ಬೇರೆಯವರು ಬಂದು ಆರಿಸಿಕೊಂಡರೆ? ಎಂಬ ಆತಂಕ ಒಂದು ಇರುತ್ತಿತ್ತಲ್ಲಾ… ಓಡುತ್ತ ಹೋದವರೇ, ಮರದ ಬುಡಕ್ಕೆ ಬಿದ್ದ ಹೂವನ್ನು ಆರಿಸಿ, ಕಾಡು ಎಲೆಗಳ ಕೊಟ್ಟೆ ಮಾಡಿ ಅದರಲ್ಲಿ ತುಂಬಿಕೊಳ್ಳುತ್ತಿದ್ದೆವು. ಪುಟ್ಟ ವೃತ್ತಕಾರದ ಈ ಹೂವಿಗೆ ಸುತ್ತಲೂ ಕಣ್ಣು ರೆಪ್ಪೆಯಂಥ ಸೂಕ್ಷ್ಮವಾದ ಬೆಳ್ಳನೆಯ ಚೂಪನೆಯ ಎಸಳುಗಳು. ಮಧ್ಯದಲ್ಲಿ ಒಂದು ರಂದ್ರ. ಹಿಂಭಾಗ ಗುಮ್ಮಟೆಯಂತೆ ಇರುತ್ತದೆ. ಅದರ ಸುಗಂಧ ಅದ್ಭುತ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಹನ್ನೆರಡನೆಯ ಕಂತು

Read More

ಕೋಮಾವೂ, ಮಂಜನ ಚಕ್ಕುಲಿಯೂ… : ವಿನಾಯಕ ಅರಳಸುರಳಿ ಅಂಕಣ

ತೊಡೆಯ ಮೇಲೆ ಪೆಟ್ಟು ತಿಂದ ಶಿವುವಿಗೆ ತಾನು ಮಂಜುವನ್ನು ಸೋಲಿಸಲಾರೆ ಎಂಬುದು ಅರ್ಥವಾಯಿತೋ ಏನೋ? ಇನ್ನೂ ಬೀಳಲಿರುವ ಒದೆಗಳಿಂದ ತಪ್ಪಿಸಿಕೊಳ್ಳಲು ಇರುವ ಏಕಮಾತ್ರ ಉಪಾಯವೆಂಬಂತೆ ಅವನು ತನ್ನ ಕಾಲು ಹಿಡಿದುಕೊಂಡು ನೆಲಕ್ಕೆ ಬಿದ್ದುಕೊಂಡು “ಅಯ್ಯೋ.. ಅಮ್ಮಾ.. ಅಯ್ಯಯ್ಯಮ್ಮಾ” ಎನ್ನುತ್ತಾ ಒದ್ದಾಡತೊಡಗಿದ. ತಾನಾಗಿ ಹೊಡೆಯಲಾಗದ ಮಂಜುವಿಗೆ ಮೇಷ್ಟರ ಕೈಯಿಂದ ಹೊಡೆಸುವ ಉಪಾಯವೂ ಅವನದಾಗಿತ್ತೋ ಏನೋ? ಪರಿಸ್ಥಿತಿಯ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿ, ಬೇಗ ಈ ವಿಷಯ ಮೇಷ್ಟರನ್ನು ಮುಟ್ಟುವಂತೆ ಮಾಡಲೆಂದು ಎದೆ, ಕಾಲು ಹಿಡಿದುಕೊಂಡು ಒದ್ದಾಡುತ್ತಾ “ಅಯ್ಯೋ.. ಅಮ್ಮಾ‌‌.. ನಂಗ್ ಉಸಿರಾಡುಕಾತಿಲ್ಯೋ.. ಅಪ್ಪಯ್ಯೋ.. ಅಬ್ಯೋ” ಎಂದು ಇನ್ನೇನು ಐಸಿಯುಗೆ ಸೇರಿಸಬೇಕಾದ ರೋಗಿಯಂತೆ ನಟಿಸತೊಡಗಿದ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ