Advertisement

Category: ದಿನದ ಅಗ್ರ ಬರಹ

ಎಲ್ಲವೂ…. ಮರಳು ಮರಳೂ…: ಎಚ್. ಗೋಪಾಲಕೃಷ್ಣ ಸರಣಿ

ಮನೆಗೆ ಬರಬೇಕಾದರೆ ಮತ್ತೊಂದು ಯೋಚನೆ ತಲೆ ಕೆಡಿಸಿತು. ಸೈಟ್ ಮಧ್ಯ ಮಾರ್ಕ್ ಮಾಡ್ತಾ ಇದಾನೆ. ಮಧ್ಯದಿಂದ ಯಾರಾದರೂ ಮಾರ್ಕ್ ಮಾಡ್ತಾರಾ? ನಾನು ದಾಖಲು ಮಾಡ್ತಿರೋ ಈ ಪ್ರಸಂಗ ನಾಲ್ಕೂ ಕಾಲು ದಶಕದ ಹಿಂದೆ. ಅಂದರೆ ಆಗಿನ್ನೂ ಮೊಬೈಲ್ ಫೋನು, ಲ್ಯಾಂಡ್ ಲೈನ್ ಫೋನು ಇವೆಲ್ಲಾ ಇರದಿದ್ದ ಕಾಲ. ಏನಾದರೂ ಸಮಸ್ಯೆ, ಅದಕ್ಕೆ ಪರಿಹಾರ ಬೇಕು ಅಂದರೆ ಒಂದು ಮುಖಾಮುಖಿ ಮಾತು, ಇಲ್ಲ ಅಂದರೆ ಪೋಸ್ಟ್ ಮೂಲಕ ಕಾರ್ಡು ಅಥವಾ ಇನ್ ಲ್ಯಾಂಡ್ ಲೆಟರ್, ಇಲ್ಲಾ ಕಾಗದದಲ್ಲಿ ಬರೆದು ಅದನ್ನ ಕವರ್‌ನಲ್ಲಿ ಇಟ್ಟು ಪೋಸ್ಟ್ ಡಬ್ಬಕ್ಕೆ ಹಾಕಿ ಉತ್ತರಕ್ಕೆ ಕಾಯೋದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ನಾಲ್ಕನೆಯ ಕಂತು

Read More

ಧರ್ಮ ತೊಡಕು ಮತ್ತು ಬೆಳಕು: ರಂಜಾನ್ ದರ್ಗಾ ಸರಣಿ

ಸಮಾಜದಲ್ಲಿ ವಿಚಾರವಾದದ ಬೆಳವಣಿಗೆಯಿಂದ ಮಾತ್ರವೇ ನವಸಮಾಜದ ನಿರ್ಮಾಣವಾಗಲು ಸಾಧ್ಯ. ಎಲ್ಲ ಧರ್ಮಗಳನ್ನು ವಿಚಾರವಾದದ ಒರೆಗಲ್ಲಿಗೆ ಹಚ್ಚದಿದ್ದರೆ ಮಾನವಕುಲ ಇನ್ನೂ ಅಧೋಗತಿಗೆ ಹೋಗುವುದು. ಧರ್ಮಗಳ ತಿರಸ್ಕಾರದಿಂದ ವಿಚಾರವಾದಿಗಳು ಇದನ್ನು ಸಾಧಿಸಲಿಕ್ಕಾಗದು. ಧರ್ಮಗಳಲ್ಲಿನ ಅರಿವಿನ ಬೆಳಕಿನೊಂದಿಗೆ ಮಾತ್ರ ಈ ವಿಚಾರಹೀನ ಸ್ಥಿತಿಯಿಂದ ಹೊರಬರಲು ಸಾಧ್ಯ. ಅದಕ್ಕಾಗಿ ಮಾನವನ ಬದುಕಿಗೆ ಒಂದೇ ಧರ್ಮ ಸಾಲದು ಎಂಬುದನ್ನು ಮೊದಲಿಗೆ ಅರ್ಥ ಮಾಡಿಕೊಳ್ಳಬೇಕು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 94ನೇ ಕಂತು ನಿಮ್ಮ ಓದಿಗೆ

Read More

ಅನಿಲ್‌ ಗುನ್ನಾಪೂರ ಬರೆದ ಈ ಭಾನುವಾರದ ಕತೆ

ದಿನಪತ್ರಿಕೆ ಓದುತ್ತ ಕುಳಿತಿದ್ದವನೊಬ್ಬ ‘ಅಲ್ರೀ ಅವ್ರಿಗೆ ಕೆಲಸ ಮಾಡ್ರಿ ಅಂತೀರಿ.. ಕೆಲಸ ಯಾರು ಕೊಡ್ತರ‍್ರಿ? ನೋಡಿದ್ರಲಾ ಮ್ಯಾಲ್ ಮಲಗಿದ್ದ ಸಾಹೇಬ್ರು ಬರಿ ಮುಟ್ಟಿದ್ರೆ ಹೆಂಗ್ ಹೊಡ್ದು ಕಳಸಿದ್ರು’ ಎಂದು ಮತ್ತೆ ದಿನಪತ್ರಿಕೆ ಓದುವುದರಲ್ಲಿ ಮಗ್ನನಾದ. ನಂತರದಲ್ಲಿ ಯಾರೂ ಏನೂ ಎನ್ನದೇ ತಮ್ಮ ಪಾಡಿಗೆ ತಾವು ಕುಳಿತರು. ಅವಳಿಗೆ ಹಾಗೆ ಹೊಡೆಯಬಾರದಿತ್ತೆನಿಸಿ, ನನ್ನ ಮೇಲೆ ನನಗೇ ಸಿಟ್ಟು ಬಂತು. ಅಕಸ್ಮಾತ್ ಅವಳು ತಿರುಗಿ ಹೊಡೆದಿದ್ದರೆ? ಅವಳು ನಗುತ್ತಲೇ ‘ಅದಕ್ಯಾಕ ಸಿಟ್ಟು ಮಾಡ್ಕೋತಿ ಮಾಮಾ.. ಮಲಗು ಮಲಗು’ ಎಂದು ನಗುನಗುತ್ತಲೇ ಹೋಗಿದ್ದು ಕಣ್ಮುಂದೆ ಬರುತ್ತಿತ್ತು.
ಅನಿಲ್‌ ಗುನ್ನಾಪೂರ ಹೊಸ ಕಥಾ ಸಂಕಲನ “ಸರ್ವೇ ನಂಬರ್-‌೯೭” ದ “ಗೋಲ್‌ಗುಂಬಜ್ ಎಕ್ಸ್‌ಪ್ರೆಸ್‌” ಕತೆ ನಿಮ್ಮ ಓದಿಗೆ

Read More

ಕಂಬನಿ ಮಿಡಿದ ಕರಾಳ ದಿನ: ಪೂರ್ಣೇಶ್‌ ಮತ್ತಾವರ ಸರಣಿ

ಹೊರಗೆ ನೋಡಿದರೆ ಚಂದಿರನ ಬೆಳಕಿತ್ತು! ನಮ್ಮೆದೆಗಳಲ್ಲಿ ಆವರಿಸಿದ್ದ ಗಾಢಾಂಧಕಾರವನ್ನು ಬಡಿದೋಡಿಸಲಾಗದ ಆ ಬೆಳಕು ಶೋಕ ಸೂಚನೆಗೆ ಹೊತ್ತಿಸಿದ್ದ ಸೊಡರಿನಂತೆಯೇ ನಮಗೆ ಗೋಚರಿಸಿತ್ತು! ಮಲಗ ಹೊರಟರೆ ಅವನದೇ ನೆನಪುಗಳು. ನಿದ್ದೆ ಬರುವಂತಿರಲಿಲ್ಲ… ಬಂದ ಅಲ್ಪ ಸ್ವಲ್ಪ ನಿದ್ದೆಯಲ್ಲೂ ಹೊರಗೆ ಅವನು ಬಂದಂತೆ, ನೋಡಿ ನಾವು ಅಚ್ಚರಿಪಟ್ಟಂತೆ, ಓಡಿ ಹೋಗಿ ಅಪ್ಪಿದಂತೆ ಕನಸುಗಳು.. ಎಚ್ಚರಗೊಂಡು ಕುಳಿತು, ಒಡನೆಯೇ ಬಾಗಿಲು ತೆರೆದು ಹೊರ ನಡೆದರೆ, “ಪ್ರಸನ್ನ, ಪ್ರಸನ್ನ,…” ಎಂದು ಕರೆದರೆ…. ಅಲ್ಲಿ ಅವನಿಲ್ಲ!
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಎಂಟನೆಯ ಬರಹ

Read More

ಸಮಾಜ ಮತ್ತು ದೇವರ ಕುದುರೆ: ಸಚಿನ್ ಎ ಜೆ ಬರಹ

ಇಲ್ಲಿ ಶಿಕ್ಷಣದ ಹಸಿವು ಎದ್ದು ಕಾಣುವಂತಹ ದೃಶ್ಯ, ಯಾವ ಗಂಡಸಿನ ಆಧಾರವಿಲ್ಲದೆ ತನ್ನ ಮಗನ ಭವಿಷ್ಯಕ್ಕಾಗಿ ಏನೂ ಅರಿಯದ ಹೆಂಗಸು ಕಚೇರಿ, ಶಾಲೆ ಇವುಗಳ ಹೋರಾಟದಲ್ಲಿ ಗೆಲ್ಲುವ ಸನ್ನಿವೇಶ ನಿಜಕ್ಕೂ ಅದ್ಭುತ “ಅವ್ವ ನಾನು ಓದಲೂ ಬೇಕು ನಂಗೆ ನೀನು ಬೇಕು” ಎನ್ನುವಂತಹ ಒಂದು ಬರಹ ಓದು ಮತ್ತು ಪ್ರೀತಿ ಎರಡು ಮನುಷ್ಯನ ಬಹುಮುಖ್ಯ ಅಂಗವಾಗಿದೆ ಎಂಬುದನ್ನು ತೋರಿಸಿಕೊಡುತ್ತದೆ ರಾಮಾಂಜಿಗೆ ಓದಿನಲ್ಲಿ ಅಪಾರ ಆಸಕ್ತಿ. ಹಾಗಾಗಿ ತನ್ನ ಮಗನನ್ನು ಓದಿಸುವ ಉದ್ದೇಶದಿಂದ ರಾಮಾಂಜಿಯ ತಾಯಿ ಶಿಕ್ಷಣವನ್ನು ಕೊಡಿಸುವಂತಹ ದೃಶ್ಯ, ಅಲೆಮಾರಿ ಜೀವನಕ್ಕೂ ಕೂಡ ಶಿಕ್ಷಣ ಅಗತ್ಯ ಎಂಬುದನ್ನು ಸಾಬೀತುಪಡಿಸುತ್ತದೆ.
ಎಸ್. ಗಂಗಾಧರಯ್ಯ ಕಥಾಸಂಕಲನ “ದೇವರ ಕುದುರೆ”ಯ ಕುರಿತು ಸಚಿನ್ ಎ ಜೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ