Advertisement

Category: ದಿನದ ಅಗ್ರ ಬರಹ

ಹಿರಿಯ ಕಾದಂಬರಿಕಾರ ಕೆ.ಟಿ. ಗಟ್ಟಿ ನಿಧನ…

ಪ್ರವಾಸ ನಮಗಿಷ್ಟವಾಗುವುದು ಯಾವಾಗಲೂ ಮನೆಯಲ್ಲಿದ್ದು ಒಮ್ಮೊಮ್ಮೆ ಪ್ರವಾಸ ಹೋದಾಗ. ನಿರಂತರ ಪ್ರವಾಸದಲ್ಲಿರುವುದು ಎಷ್ಟು ರಸಹೀನ ಎಂದು ಗಗನಸಖಿಯರು ಮತ್ತು ಮೆಡಿಕಲ್ ರೆಪ್ರಸೆಂಟೇಟಿವ್‌ಗಳು ಹೇಳಿಯಾರು. ಬೇರೆ ದೇಶ, ಬೇರೆ ನಗರ, ಬೇರೆ ಮನೆ ಎಲ್ಲಾ ಅಷ್ಟೆ. ಸಾಮಾನ್ಯವಾಗಿ ‘ಅತ್ಯಂತ ಪ್ರೇಕ್ಷಣೀಯ ಸ್ಥಳ’ ಸುಪ್ರಸಿದ್ಧವಾಗಿರುತ್ತದೆ. ಅದು ಹಲವು ಬಾರಿ ಟೀವಿಯಲ್ಲಿ ಮತ್ತು ಸಿನಿಮಾದಲ್ಲಿ ಕಂಡ, ಪತ್ರಿಕೆ ಪುಸ್ತಕಗಳಲ್ಲಿ ಓದಿದ ಸ್ಥಳವೇ ಆಗಿರುತ್ತದೆ.
ಹಿರಿಯ ಸಾಹಿತಿ ಕೆ.ಟಿ. ಗಟ್ಟಿ ಇಂದು ಮಂಗಳೂರಿನಲ್ಲಿ ನಿಧನರಾಗಿದ್ದು ಅವರು ಕೆಂಡಸಂಪಿಗೆಗೆ ಬರೆದ “ಬಿಸಿಲುಕೋಲು” ಸರಣಿಯ ಕೆಲ ಬರಹಗಳು ನಿಮ್ಮ ಓದಿಗೆ

Read More

ನೌಕರಿ ಬಿಟ್ಟ ಎಂ.ಟೆಕ್ ಪದವೀಧರ ಬಾವಿ ತೋಡಿದ: ಸಿದ್ದು ಸತ್ಯಣ್ಣನವರ ಬರಹ

ಸೂರ್ಯಕಾಂತ್ ಕೃಷಿಯೆಡೆಗಿನ ಸೆಳೆತ ಇತ್ತಲ್ಲ, ಅದೇನೂ ಸಣ್ಣದಲ್ಲ. ಆದರೆ ನೀರಿಲ್ಲದೆ ಕೃಷಿ ಕೆಲಸ ಮಾಡುವುದು ಹೇಗೆ? ಅದಕ್ಕಾಗಿ ಬೋರ್‍ವೆಲ್ ಉತ್ತರದಂತೆ ಕಾಣಿಸಿದರೂ ಅದು ಪರಿಹಾರವಾಗಿ ಕಾಣಲಿಲ್ಲ. ಅದಕ್ಕಾಗಿ ಬೋರ್‍ವೆಲ್ ಹಾಕಿಸಲು ಆತನ ಮನಸ್ಸು ಒಪ್ಪಲಿಲ್ಲ. ಸತತ ಐದು ತಿಂಗಳು ಒಬ್ಬರೇ ಬಾವಿ ತೋಡಿದರು. ಮೈಗೆ ಗಾಯ, ನೋವು ಎಲ್ಲಾ ಆದವು. ಆಗ ಜನರ ಪ್ರತಿಕ್ರಿಯೆ ಇತ್ತಲ್ಲ, ಅದು ಇರಿದದ್ದು ಮನಸ್ಸಿಗೆ; ಎಲ್ಲಾ ಗಾಯಕ್ಕಿಂತ ಹೆಚ್ಚು ಕಾಡಿದ್ದು ಅದೇ ಎನ್ನುವುದು ಸೂರ್ಯಕಾಂತ್ ಮನದಾಳ.
ಸಿದ್ದು ಸತ್ಯಣ್ಣವರ ಹೊಸ ಕೃತಿ “ಬೆಳಕಿನ ತೆನೆ”ಯ ಒಂದು ಬರಹ ನಿಮ್ಮ ಓದಿಗೆ

Read More

ಸುಲಭವಾಗಿಯೇ ಬಿದ್ದ ಸೀಲು!: ಗುರುಪ್ರಸಾದ ಕುರ್ತಕೋಟಿ ಸರಣಿ

ಚೆನ್ನೈನಲ್ಲಿ ತಮಿಳು ಬರದಿದ್ದರೆ ತುಂಬಾ ಕಷ್ಟ ಅಂತ ಗೊತ್ತಿತ್ತು. ಕಾರಿನಲ್ಲಿಯೇ ಅಲ್ಲಿಗೆ ಹೊಗಿದ್ದ ನಾವು ಅಲ್ಲೊಬ್ಬರಿಗೆ ಹೊಟೇಲ್‌ಗೆ ಹೇಗೆ ಹೋಗೋದು ಅಂತ ಮಾರ್ಗದರ್ಶನ ಕೇಳಿದ್ದಕ್ಕೆ ತಮಿಳಿನಲ್ಲೇ ವಿವರಣೆ ನೀಡಿದರು. ತಮಿಳು ಬರೋದಿಲ್ಲ ಅಂತ ಹೇಳುವಷ್ಟು ಮಾತ್ರ ತಮಿಳು ಕಲಿತಿದ್ದ ನಾನು ಹಾಗೆ ಹೇಳಿ ಅವರ ಬಳಿ ಹಿಗ್ಗಾಮುಗ್ಗ ಬೈಸಿಕೊಂಡೆ. ಚೆನ್ನೈಗೆ ಬಂದವರು ಯಾಕೆ ಬೇಗನೆ ತಮಿಳು ಕಲಿಯುತ್ತಾರೆ ಅಂತ ಆಗ ನನಗೆ ತಿಳಿಯಿತು! ಬೆಂಗಳೂರಿನಲ್ಲೂ ಕನ್ನಡ ಮಾತಾಡದ ನಮ್ಮ ಕನ್ನಡಿಗರಿಗೆ ಹೀಗೆಯೇ ಬೈಯಬೇಕು ಅಂತ ಅಂದುಕೊಂಡೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ನಾಲ್ಕನೆಯ ಬರಹ

Read More

ಕಲಿತ ಬುದ್ಧಿಗಳೇ ನಮ್ಮ ನೆರಳು: ಎಸ್ ನಾಗಶ್ರೀ ಅಜಯ್ ಅಂಕಣ

ಎಷ್ಟೋ ಜನ ಸರಳತೆ, ಸಹೃದಯತೆ, ಸಹನೆ, ಕರುಣೆಯನ್ನು ನಂಬದೆ ಡಂಭಾಚಾರ, ನಾಟಕ, ಕೃತಕತೆ ಎಂಬ ಹಣೆಪಟ್ಟಿ ಕಟ್ಟಿ ಸಂಶಯದಿಂದಲೇ ಎದುರುಗೊಳ್ಳುತ್ತಾರೆ. ಹಣದೊಂದಿಗೆ ಮದ, ಅಧಿಕಾರದೊಂದಿಗೆ ದರ್ಪ, ಶ್ರೀಮಂತಿಕೆಯೊಂದಿಗೆ ಖಾಯಿಲೆ, ಬಡತನದೊಂದಿಗೆ ನೆಮ್ಮದಿ ಇದ್ದಿರಲೇಬೇಕೆಂದು ಭಾವಿಸಿರುತ್ತಾರೆ. ಅತ್ಯಂತ ರಂಜನೀಯವಾಗಿ ಅದನ್ನು ಬಣ್ಣಿಸಿಯೂ ತೋರುತ್ತಾರೆ. ಪ್ರತಿಯೊಬ್ಬ ಮನುಷ್ಯನೂ ಭಿನ್ನ. ಪ್ರತಿಯೊಬ್ಬರ ಪರಿಸ್ಥಿತಿಯೂ ಭಿನ್ನ. ಒಂದೇ ಅಚ್ಚಿನಲ್ಲಿ ಅಳೆದು, ಸುರಿದು ತಯಾರಾದ ಬದುಕಲ್ಲ ಎಲ್ಲರದ್ದು.
ಎಸ್.‌ ನಾಗಶ್ರೀ ಅಜಯ್‌ ಬರೆಯುವ ‘ಲೋಕ ಏಕಾಂತ’ ಅಂಕಣ

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ