Advertisement

Category: ದಿನದ ಪುಸ್ತಕ

ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಕೆಲವು ಪುಟಗಳು

ಆ ಪದ ಕಿವಿಗೆ ಬೀಳುತ್ತಿದ್ದಂತೆ ಸೈಫೈ ಸಿನಿಮಾಗಳಲ್ಲಿ ರೋಬೋಗಳು ಬ್ಯಾಟರಿ ಡೌನಾಗಿ ತಾನಾಗೆ ಕುಸಿದಂತೆ ಶರತ್ ಕುಸಿದ. ಅವಳು ಹಂಗೇ, ಹಿಂದೆ ಮುಂದೆ ನೋಡದೇ ಅಂದುಬಿಡ್ತಿದ್ದಳು. ಜ್ಯಾಮಿಟ್ರಿ ಬಾಕ್ಸ್‌ ಮುಚ್ಚಳವನ್ನು ಹಲ್ಲುಗಳನ್ನೆಟ್ಟಿ ತೆಗೆಯುತ್ತಿದ್ದಳು. ಅಸೆಂಬ್ಲಿನಲ್ಲಿ ಆಕಳಿಸುವಾಗ ತುಟಿ ಹರಿಯುವಷ್ಟು ಅಗಲ ಬಾಯಿ ತೆರೆಯುತ್ತಿದ್ದಳು. ಕಿರುನಾಲಗೆಯಿಂದ ಎಂಜಲನ್ನು ಮೋಟಾರಿನಂತೆ ಹಾರಿಸುತ್ತಿದ್ದಳು. ಇಡೀ ಕ್ಲಾಸಿಗೆ ರಾಣಿ, ರೌಡಿ ಎರಡೂ ಆಗಿದ್ದಳು. ಶರತ್‌ಗೆ ಆಳದಲ್ಲಿ ಅವಳೆಂದರೆ ಭಯ. ತಾನು ಸುಮ್ಮನಿದ್ದರೂ ಆಗಿತ್ತು; ಇಂಥಾ ಬಜಾರ್‌ಗಿತ್ತಿಯನ್ನು ಕೆಣಕಿ ʼಕಳ್ಳʼ ಅನ್ನಿಸ್ಕೊಳಂಗಾಯ್ತಲ್ಲ ಎಂದು ಕೈಹಿಸುಕಿಕೊಂಡ.
ಮಧು ವೈ.ಎನ್.‌ ಹೊಸ ಕಾದಂಬರಿ “ಇಂತಿ, ಪೂರ್ವಿ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಅಮ್ಮಮ್ಮನಾದ ಹೊತ್ತು…: ಡಾ. ಎಚ್.ಎಸ್.‌ ಅನುಪಮಾ ಮಾತುಗಳು

ಅಲ್ಲಿಂದ ಇಲ್ಲಿಯವರೆಗೆ ಅನುದಿನ ಪುಟ್ಟನ ಸುದ್ದಿ, ನೆನಪುಗಳಿಂದಲೇ ಬೆಳಕು ಹರಿಯುತ್ತದೆ, ಕತ್ತಲಾಗುತ್ತದೆ. ಅವ ಮಗುಚಿದ, ಕೂತ, ತೊದಲು ಮಾತನಾಡಿದ, ಎದ್ದ, ನಿಂತ ಎನ್ನುವುದೆಲ್ಲ ನಮ್ಮದೇ ಸಾಧನೆ ಎಂಬಂತಾಗಿದೆ. ಹಲ್ಲು ಕಡಿದು ಮುದ್ದು ಮಾಡುತ್ತ ಮಾಡುತ್ತ ಮುಂದಿನ ಹಲ್ಲು ಸವೆದೇ ಹೋದಂತಿದೆ! ಸಣ್ಣ ಅವಕಾಶ, ಪುರುಸೊತ್ತು ಸಿಕ್ಕರೂ ಬೆಂಗಳೂರಿಗೆ ಹೋಗಿ ಪುಟ್ಟನ ಕಂಡುಬರುವಾ ಅನಿಸುತ್ತದೆ. ಈ ಅಮ್ಮ ತಮ್ಮನ್ನಿಷ್ಟು ಪ್ರೀತಿಸಿದ್ದಳೋ ಇಲ್ಲವೋ ಎಂದು ನಮ್ಮ ಮಕ್ಕಳು ಶಂಕಿಸಬಹುದಾದಷ್ಟು ಬದುಕು ಸೂರ್ಯಮಯವಾಗಿದೆ!
ಡಾ. ಎಚ್.ಎಸ್.‌ ಅನುಪಮಾ ಕವನ ಸಂಕಲನ “ಅಮ್ಮಮ್ಮನ ಕವಿತೆಗಳು” ಕೃತಿಯ ಕುರಿತು ಅವರ ಬರಹ ನಿಮ್ಮ ಓದಿಗೆ

Read More

ಕಾಣದ್ದು ಕಾಣಿಸಿದ್ದು…!: ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿಯ ಕುರಿತು ಕಲ್ಲೇಶ್ ಕುಂಬಾರ್ ಬರಹ

ಜಗತ್ತಿನ ಬಹುಮುಖ್ಯ ಕೃತಿಗಳನ್ನು ಗುರುತಿಸುವ, ಪರಿಚಯಿಸುವ, ಆ ಮೂಲಕ ಓದುಗರಿಗೆ ದಾಟಿಸುವಂಥ ಪ್ರಾಮಾಣಿಕ ಕೆಲಸವನ್ನು ಸುಭಾಷ್ ರಾಜಮಾನೆ ಅವರು ಮಾಡುತ್ತಿದ್ದಾರೆ. ಅವರ ಈ ಬರಹಗಳನ್ನು ಓದುವುದರ ಮೂಲಕ ಓದುಗನು ಸ್ವಯಂ ಮರಳಿ ಮೂಲ ಕೃತಿಗಳನ್ನು ಓದುವುದಕ್ಕೆ ಉತ್ಸುಕನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಇಲ್ಲ! ಇನ್ನೂ ಹೇಳಬೇಕೆಂದರೆ, ಕೃತಿಕಾರ ಮರೆಯಾಗಿ ಕೃತಿಯೇ ಮುಖ್ಯವಾಗುವುದು, ಹಾಗೂ ಆ ಕೃತಿಯ ಮೂಲಕವೇ ಕೃತಿಕಾರ ಗುರುತಿಸಿಕೊಳ್ಳುವಂತಾಗುವುದು ಒಂದು ಕ್ರಿಯೆ. ಅಂಥ ಲೇಖಕ ಮತ್ತು ಆ ಲೇಖಕನ ಕೃತಿಗಳು ಶಾಶ್ವತವಾಗಿ ನಿಲ್ಲುತ್ತವೆ! ಹಾಗೆ ನಿಲ್ಲಬಹುದಾದ ಲೇಖಕರ ಕೃತಿಗಳನ್ನು ಓದುಗರಿಗೆ ಸುಭಾಷ್ ರಾಜಮಾನೆ ಅವರು ಪರಿಚಯಿಸಿದ್ದಾರೆ.
ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿ “ಕಂಡದ್ದು ಕಾಣದ್ದು” ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ