Advertisement

Category: ದಿನದ ಪುಸ್ತಕ

ಘಾಂದ್ರುಕ್‌ ಮತ್ತು ಸೋಫಿಯ ಎನ್ನುವ ಸೂಜಿಮಲ್ಲಿಗೆ: ಎಚ್.ಆರ್.‌ ರಮೇಶ್‌ ಬರಹ

ಕತೆಗಳು ಹಿಂದಕ್ಕು ಮುಂದಕ್ಕು ಹೋಗುವ ಶೈಲಿ ಹಿಂದುಸ್ತಾನಿ ಸಂಗೀತದ ಯಾವುದೋ ಹೊಸ ರಾಗವೊಂದು ಹೊಮ್ಮಿದಂತೆ ಸಾಗುತ್ತದೆ. ಅದು ಕಾಲದ ಚಲನೆಯಾಗಿ ಓದುಗರನ್ನು ತನ್ನ ಜೊತೆ ಎಳೆದುಕೊಳ್ಳುತ್ತದೆ. ಕ್ಯಾಂಟರ್ ಬರಿ ಟೇಲ್ಸ್‌ನಲ್ಲಿ ಥಾಮಸ್ ಬಕೆಟ್‌ನ ಪುಣ್ಯಕ್ಷೇತ್ರಕ್ಕೆ ಯಾತ್ರೆ ಕೈಗೊಂಡ ಯಾತ್ರಿಕರು ಒಬ್ಬೊಬ್ಬರು ಒಂದೊಂದು ಬದುಕಿನ ಅನನ್ಯ ಅನುಭವದ ಕತೆಯನ್ನು ಹೇಳುವಂತೆ ಇಲ್ಲಿ ಸಿದ್ಧಾರ್ಥ ಮತ್ತು ಸೋಫಿಯಾ ತಮ್ಮ ಬದುಕಿನ ಜೊತೆ ತಮ್ಮ ಬದುಕನ್ನು ಮತ್ತು ಅದನ್ನು ಆವರಿಸಿರುವ ವ್ಯಕ್ತಿಗಳ ಕತೆಯನ್ನು ಹೇಳುತ್ತ ಹೋಗಿರುವ ಪರಿ ಚುಂಬಕ ಶಕ್ತಿಯಂತೆ ಸೆಳೆಯುತ್ತದೆ.
ಸತೀಶ್‌ ಚಪ್ಪರಿಕೆ ಅವರ “ಘಾಂದ್ರುಕ್”‌ ಕಾದಂಬರಿ ಕುರಿತು ಎಚ್.ಆರ್.‌ ರಮೇಶ್‌ ಬರಹ ನಿಮ್ಮ ಓದಿಗೆ

Read More

ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಪ್ರೇಮ ಕವಿತೆಗಳಿಲ್ಲದ ಸಾಹಿತ್ಯ ಅಪೂರ್ಣ: ಕಮಲಾಕರ ಕಡವೆ

ಪ್ರೇಮಕವನಗಳನ್ನು ಬರೆಯುವ ಕವಿ ಎದುರಿಸುವ ಮುಖ್ಯ ಸವಾಲು ಅಂದರೆ ಅಭಿವ್ಯಕ್ತಿಯ ಸವಕಲು ಗುಣ. ಅತಿಬಳಕೆಯಿಂದಾಗಿ ಪ್ರೇಮದ ಕುರಿತಾಗಿ ಹೇಳಬಹುದಾದ ಅನೇಕ ಮಾತುಗಳು ತೀರಾ ಸವಕಲಾಗಿ, ಈಗ ಕೃತ್ರಿಮ ಅನಿಸಿಬಿಡುವುದು ಸಹಜ. ಈ ನಿಟ್ಟಿನಲ್ಲಿ ನನಗೆ ಜಬಿವುಲ್ಲಾ ಅವರ ಸೃಜನಶೀಲ ಮರುರೂಪಿಸುವಿಕೆ ಇಷ್ಟವಾಯಿತು. ವ್ಯಾಪಕವಾಗಿ ಬಳಕೆಯಾದ ಭಾವನೆಯೊಂದನ್ನು ಬಳಸುವಾಗ ಅವರು ಅದಕ್ಕೊಂದು ಟ್ವಿಸ್ಟ್ ಕೊಡುತ್ತಾರೆ. ಅವರು ಕೊಡುವ ಈ ತಿರುವು ಆ ಭಾವನೆ ಮತ್ತು ಅಭಿವ್ಯಕ್ತಿಗೆ ಹೊಸ ಚಾಲ್ತಿ ಸಾಧ್ಯವಾಗಿಸುತ್ತದೆ:
ಜಬಿವುಲ್ಲಾ ಅಸದ್ ಕವನ ಸಂಕಲನ “ಪ್ರೇಮಾಯತನ”ಕ್ಕೆ ಕಮಲಾಕರ ಕಡವೆ ಮುನ್ನುಡಿ

Read More

ಮಾನವೀಯ ಮೌಲ್ಯಗಳ ಪ್ರಯೋಗಶೀಲ ಕಾವ್ಯ: ಪ್ರಶಾಂತ್ ಬೆಳತೂರು

ಕತ್ತಲ ಸಾಮ್ರಾಜ್ಯದಲ್ಲಿ ಹುಟ್ಟಿನ ಜಾಡು ಹಿಡಿದು ಕತೆ ಹೇಳುವ ಮೆಟ್ಟಿನ ಕತೆ ಬರೀ ಕತೆಯಾಗದೆ ಕಾವ್ಯವಾಗುವ ಪರಿಯೇ ಒಂದು ವೈಶಿಷ್ಟ್ಯಪೂರ್ಣ. ತನ್ನ ಕತ್ತಲ ಸಾಮ್ರಾಜ್ಯದ ಕತೆಯನ್ನು ದೇಶಕ್ಕೆ, ಪ್ರಪಂಚಕ್ಕೆ, ಇಡೀ ಭೂಮಂಡಲಕ್ಕೆ ವಿಸ್ತರಿಸಿ ಹೇಳುತ್ತೇನೆನ್ನುವ ಅದರ ತುಡಿತ ಎಲ್ಲರನ್ನೂ ಒಳಗೊಳ್ಳುವ ಸಾಂಸ್ಕೃತಿಕ ಪ್ರಕ್ರಿಯೆಯೂ ಆಗಿದೆ. ಈ ನಿಟ್ಟಿನಲ್ಲಿ ಕವಿಗೆ ತನ್ನ ಕಾವ್ಯದ ಉದ್ದೇಶಗಳ ಕುರಿತು ಸ್ಪಷ್ಟತೆ ಇದೆ. ಈ ದಿಶೆಯಲ್ಲಿ ಇದೊಂದು ಅಪಾರವಾದ ಮಾನವೀಯ ಮೌಲ್ಯಗಳ ತಾಯ್ತನ ತುಡಿತದ ಪ್ರಯೋಗಶೀಲ ಕಾವ್ಯ ಅನ್ನಬಹುದು. ಈ ಅಂಶ ಕಾವ್ಯದ ಉದ್ದಕ್ಕೂ ಓದುಗನನ್ನು ಮನಮುಟ್ಟುತ್ತದೆ.
ಎಂ. ಜವರಾಜ್‌ ಕಥನ ಕಾವ್ಯ “ಮೆಟ್ಟು ಹೇಳಿದ ಕಥಾ ಪ್ರಸಂಗ”ದ ಕುರಿತು ಪ್ರಶಾಂತ್‌ ಬೆಳತೂರು ಬರಹ

Read More

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ