Advertisement

Category: ದಿನದ ಪುಸ್ತಕ

ಚಕ್ರವ್ಯೂಹದೊಳಗಿನ ಮಾಯಾಲೋಕ…: ಗೊರೂರು ಶಿವೇಶ್‌ ಬರಹ

ಕಾದಂಬರಿಯ ಕೊನೆಯಲ್ಲಿ ಆ ಕಡತ ಮುಸುಕುಧಾರಿಗಳ ಕೈಗೆಸಿಕ್ಕು ಅದರ ಮಹತ್ವ ತಿಳಿಯದ ಅವರು ನದಿನೀರಿಗೆ ಎಸೆದು ಅದು ಬಿಡಿಬಿಡಿಯಾಗಿ ಬಿದ್ದು ನೀರುಪಾಲಾಗುತ್ತದೆ. ಇದ್ದ ಒಂದು ಪ್ರತಿಯೂ ಮಾಯವಾದರೂ ಎಲ್ಲಿಯಾದರೂ ಮತ್ತೊಂದು ಪ್ರತಿಯನ್ನು ಹುಡುಕಿಯೆ ತೀರುತ್ತೇನೆ ಮತ್ತು ಅದರ ಸಹಾಯದಿಂದ ರತ್ನಮಾಲಾ ವಜ್ರವನ್ನು ಪಡೆದೆ ತೀರಬೇಕೆಂದು, ಮುಂದೆ ಅದನ್ನು ಹಂಚಿಕೊಳ್ಳಬಹುದೆಂದು ರಾಜಪ್ಪ ತಿಳಿಸಿ, ಅದಕ್ಕೆ ಮೂವರು ಒಪ್ಪಿ ಜುಗಾರಿಕ್ರಾಸ್‍ನ ಬಸ್ ಹತ್ತುವುದರೊಂದಿಗೆ ಕಾದಂಬರಿ ಮುಕ್ತಾಯವಾಗುತ್ತದೆ.
ನೆನ್ನೆ ಪೂರ್ಣಚಂದ್ರ ತೇಜಸ್ವಿಯವರ ಜನ್ಮದಿನ, ಅದರ ನಿಮಿತ್ತ ತೇಜಸ್ವಿಯವರ “ಜುಗಾರಿ ಕ್ರಾಸ್” ಕೃತಿಯ ಕುರಿತು ಗೊರೂರು ಶಿವೇಶ್‌ ಬರಹ

Read More

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

Read More

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಯಾವ ಭಾಷೆಯಲ್ಲೂ “ಎಲ್ಲವೂ” ಇರುವುದಿಲ್ಲ: ಡಾ. ಎಚ್.ಎಸ್.‌ ಸತ್ಯನಾರಾಯಣ ಬರಹ

“ನೀನು ಇಂಗ್ಲಿಷನ್ನು ಕನ್ನಡ ಭಾಷೆಯ ಅಕ್ಷರ ಸಂಯೋಜನೆ ಜೊತೆ ಹೋಲಿಸಿ ಬರೆಯಬೇಡ. ನೀನು ಇಂಗ್ಲಿಷನ್ನು ಚೆನ್ನಾಗಿ ಕಲಿಯಬೇಕಾಗಿರುವುದು ನಿನ್ನ ಅಗತ್ಯಕ್ಕಾಗೇ ಹೊರತು ಇಂಗ್ಲಿಷಿನವರ ಅಗತ್ಯಕ್ಕಾಗಿ ಅಲ್ಲ. ನಿನಗೆ ಅದರಲ್ಲಿರುವ ಪ್ರಪಂಚದ ಜ್ಞಾನವೆಲ್ಲಾ ಬೇಕಾದರೆ ಈ ಸಬೂಬುಗಳನ್ನೆಲ್ಲಾ ಬಿಟ್ಟು ಕಷ್ಟಪಟ್ಟು ಕಲಿ‌ ಅದು ಬಿಟ್ಟು ಕನ್ನಡದಲ್ಲೇ ಎಲ್ಲಾ ಇದೆ ಎಂದು ತಿಳಿದು ಕೂಪಮಂಡೂಕ ಆಗಬೇಡ.”
ಡಾ. ಎಚ್.ಎಸ್.‌ ಸತ್ಯನಾರಾಯಣ ಅವರ “ತೇಜಸ್ವಿ ಪ್ರಸಂಗಗಳು” ಕೃತಿಯ ಕೆಲವು ಪ್ರಸಂಗಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ